Kannada Vs Tulu Controversy: "ತುಳು" ಭಾಷೆಯ ಮೇಲೆ "ಕನ್ನಡ ಹೇರಿಕೆ" ನಿಲ್ಲಿಸಿ ಅಭಿಯಾನ!
Kannada Vs Tulu Controversy: ಕರ್ನಾಟಕದಲ್ಲಿ ಹಿಂದಿ ಹೇರಿಕೆ ಹಾಗೂ ಪರಭಾಷೆಗಳ ಹೇರಿಕೆಯ ಬಗ್ಗೆ ಚರ್ಚೆ ನಡೆಯುತ್ತಿರುವಾಗಲೇ ಕರ್ನಾಟಕದಲ್ಲಿ ಕನ್ನಡದ ಬಗ್ಗೆಯೇ ಗಂಭೀರ ಆರೋಪವೊಂದು ಕೇಳಿ ಬಂದಿದೆ. ಕರ್ನಾಟಕದಲ್ಲಿ ಕನ್ನಡಿಗರು ಎಲ್ಲಾ ಭಾಷೆಯ ಜನರೊಂದಿಗೆ ಶತಮಾನಗಳಿಂದ ಸೌಹಾರ್ದದಿಂದ ಇದ್ದಾರೆ. ಕರ್ನಾಟಕದಲ್ಲಿ ಎಲ್ಲಾ ಭಾಷೆಯ ಜನರೂ ಇದ್ದಾರೆ. ಮಾತೃಭಾಷೆ ಬೇರೆ ಇದ್ದರೂ ಕರ್ನಾಟಕದಲ್ಲಿ ಕನ್ನಡಕ್ಕೆ ಗೌರವ ಕೊಟ್ಟು, ಸಾರ್ವಜನಿಕ ಪ್ರದೇಶದಲ್ಲಿ ಕನ್ನಡ ಮಾತನಾಡುವ ಹಾಗೂ ಬಳಸುವ ಲಕ್ಷಾಂತರ ಜನರಿದ್ದಾರೆ. ಕನ್ನಡ ಎಂದಿಗೂ ಇನ್ನೊಂದು ಭಾಷೆಯ ಮೇಲೆ ಹೇರಿಕೆಯಂತಹ ಪ್ರಯೋಗಗಳನ್ನು ಮಾಡಿಲ್ಲ. ಆದರೆ ಕರ್ನಾಟಕದ ಮತ್ತೊಂದು ಭಾಷೆಯಾದ ತುಳು ಮೇಲೆ ಕನ್ನಡ ಹೇರಿಕೆ ನಡೆಯುತ್ತಿದೆ ಎಂದು ಕೆಲವರು ಆರೋಪಿಸಿದ್ದು. ಇದಕ್ಕೆ ಕನ್ನಡಿಗರು ಆಕ್ರೋಶ ಹೊರ ಹಾಕಿದ್ದಾರೆ.
ಕನ್ನಡ ಹಾಗೂ ತುಳು ಎರಡೂ ಕನ್ನಡ ನೆಲದ ಭಾಷೆಗಳು. ಕರ್ನಾಟಕದ ಎರಡನೇ ರಾಜ್ಯ ಭಾಷೆಯಾಗಿ ತುಳು ಭಾಷೆಯನ್ನು ಪರಿಗಣಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಇಂತಹ ಮಹತ್ವದ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲಿಯೇ ತುಳು ಭಾಷೆಯ ಮೇಲೆ ಕನ್ನಡವನ್ನು ಹೇರಿಕೆ ಮಾಡಲಾಗುತ್ತಿದೆ. ಅದನ್ನು ಮೊದಲು ನಿಲ್ಲಿಸಬೇಕು ಎಂದು ಕೆಲವರು ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಸಹಜವಾಗಿಯೇ ಕನ್ನಡಿಗರಿಂದ ವಿರೋಧ ಹಾಗೂ ಅಸಮಾಧಾನ ವ್ಯಕ್ತವಾಗಿದೆ.

ಕನ್ನಡ ಮತ್ತು ತುಳು ಸಹೋದರ ಭಾಷೆಗಳು ಕನ್ನಡದ ನೆಲದಲ್ಲಿ ನೂರಾರು ಉಪಭಾಷೆಗಳಿವೆ. ಕನ್ನಡಿಗರು ತುಳು ಭಾಷೆಯನ್ನು ಎಂದಿಗೂ ಹೊರಗಿನ ಭಾಷೆಯಂತೆ ಕಂಡಿಲ್ಲ. ತುಳು ಭಾಷೆ ಮಾತನಾಡುವವರು ಸಹ ಕನ್ನಡ ಭಾಷೆಯ ಬಗ್ಗೆ ಅಭಿಮಾನವೊಂದಿದ್ದಾರೆ. ಆದರೆ ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಮಾಡುವ ಪೋಸ್ಟ್ ಹಾಗೂ ಟ್ವೀಟ್ಗಳಿಂದ ಕನ್ನಡ ಹಾಗೂ ತುಳು ಭಾಷೆಯ ನಡುವೆ ಅನವಶ್ಯಕವಾದ ಸಂಘರ್ಷ ಏರ್ಪಡುತ್ತಿದೆ. ಇದೀಗ Everyday Tulu ಎನ್ನುವ ಸೋಷಿಯಲ್ ಮೀಡಿಯಾ ಖಾತೆಯಿಂದ ಮಾಡಲಾಗಿರುವ ಪೋಸ್ಟ್ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಚರ್ಚೆಗೆ ಗ್ರಾಸವಾದ ಪೋಸ್ಟ್: ಎವ್ರಿಡೇ ತುಳು ಎನ್ನುವ ಖಾತೆಯಿಂದ ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಮಾಡಿರುವ ಪೋಸ್ಟ್ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಖಾತೆಯಲ್ಲಿ ಭಾಷೆ ಎನ್ನುವುದು ಶ್ರೇಣಿ (ಮೇಲು - ಕೀಳು) ವ್ಯವಸ್ಥೆ ಅಲ್ಲ. ತುಳು ಸಹ ಶ್ರೀಮಂತ ಹಾಗೂ ಪ್ರಾಚೀನ ಭಾಷೆಯಾಗಿದೆ. ತುಳು ಭಾಷೆಗೆ ಮನ್ನಣೆ ಬೇಕಿದೆ ದಮನ ನೀತಿಯಲ್ಲ. ತುಳುನಾಡಿನಲ್ಲಿ ಕನ್ನಡ ಹೇರಿಕೆ ಮಾಡುವುದು ಬೇಡ ಎಂದು ಬರೆದುಕೊಳ್ಳಲಾಗಿದೆ.
ಕನ್ನಡಿಗರ ವಿರೋಧ: ಇದಕ್ಕೆ ಕನ್ನಡಿಗರು ತೀವ್ರವಾಗಿ ವಿರೋಧಿಸಿದ್ದಾರೆ. ಅಲ್ಲದೆ ಈ ಪೋಸ್ಟ್ ಎಐ ಚಿತ್ರವನ್ನು ಬಳಸಲಾಗಿದೆ. #StopKannadaImposition ಎಂದು ಆ ಚಿತ್ರದಲ್ಲಿ ಬರೆಯಲಾಗಿದೆ. ಈ ರೀತಿಯ ಬೆಳವಣಿಗೆ ಒಳ್ಳೆಯದಲ್ಲ ಎಂದು ಕನ್ನಡಿಗರು ಹೇಳಿದ್ದಾರೆ. ನಾವು ಕರ್ನಾಟಕದ ಮೇಲೆ ಪರಭಾಷಿಕರು ಮಾಡುವ ದಬ್ಬಾಳಿಕೆಯನ್ನು ನಿಲ್ಲಿಸಬೇಕಿದೆ ಎಂದಿದ್ದಾರೆ. ಇನ್ನು ಹಲವರು ಈ ಪೋಸ್ಟ್ ಸರಿ ಇದೆ ಎಂದೂ ಹೇಳಿದ್ದಾರೆ. ಕನ್ನಡದ ಮೇಲೆ ಹಿಂದಿ ಹೇರಿಕೆಯಾಗುವುದು ನಿಲ್ಲಬೇಕು ಎಂದಾದರೆ, ತುಳು ಭಾಷೆಯ ಮೇಲೆ ಕನ್ನಡ ಹೇರಿಕೆ ಆಗುವುದು ಸಹ ನಿಲ್ಲಬೇಕು ಎಂದಿದ್ದಾರೆ. ಒಟ್ಟಾರೆ ಈ ಪೋಸ್ಟ್ಗೆ ಪರ - ವಿರೋಧ ಚರ್ಚೆ ಮುಂದುವರಿದಿದೆ.
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ












Click it and Unblock the Notifications