ಕನ್ನಡ ವಿವಿ ಉಳಿಸಿ ಹ್ಯಾಶ್ಟ್ಯಾಗ್ ಟ್ವಿಟ್ಟರ್ನಲ್ಲಿ ಫುಲ್ ಟ್ರೆಂಡಿಂಗ್
ಬೆಂಗಳೂರು, ಡಿಸೆಂಬರ್ 18: ಹಂಪಿ ಕನ್ನಡ ವಿಶ್ವವಿದ್ಯಾಲಯ ಬೆಂಬಲಿಸಿ, ಕನ್ನಡ ವಿವಿ ಉಳಿಸಿ ಹ್ಯಾಶ್ಟ್ಯಾಗ್ ಟ್ವಿಟ್ಟರ್ನಲ್ಲಿ ಟ್ರೆಂಡಿಂಗ್ನಲ್ಲಿದೆ.
ಕರ್ನಾಟಕ ರಕ್ಷಣಾ ವೇದಿಕೆ ಕರೆಕೊಟ್ಟಿದ್ದ ಟ್ವಿಟ್ಟರ್ ಅಭಿಯಾನಕ್ಕೆ ಭಾರಿ ಬೆಂಬಲ ವ್ಯಕ್ತವಾಗುತ್ತಿದ್ದು, ಟ್ವಿಟ್ಟರ್ನಲ್ಲಿ ಈಗಾಗಲೇ #ಕನ್ನಡ ವಿವಿ ಉಳಿಸಿ ಟ್ರೆಂಟ್ ಆಗುತ್ತಿದೆ.
ಧರ್ಮದ ಅಮಲಿನಲ್ಲಿ ತೇಲಾಡುತ್ತಿರುವ ಕನ್ನಡಿಗರೆ ಇಂದು ಕನ್ನಡ ನಾಡಿನಲ್ಲಿ ಕನ್ನಡ ವಿವಿಗೆ ಬಂದಿರುವ ಗತಿಯೇ ನಾಳೆ ಕನ್ನಡಿಗರಿಗೆ ಬರುತ್ತದೆ ಎಂದು ಟ್ವಿಟ್ಟಿಗರು ಎಚ್ಚರಿಕೆ ನೀಡಿದ್ದಾರೆ.

ಹಂಪಿ ವಿಶ್ವವಿದ್ಯಾಲಯಕ್ಕೆ ರಾಜ್ಯ ಸರ್ಕಾರ ಒಂದು ವರ್ಷದಿಂದ ಬೇಕಾಗಿರುವ ಅನುದಾನ ಒದಗಿಸದೆ ವಿಧ್ಯಾರ್ಥಿಗಳಿಗೆ ಕಣ್ಣೀರುತರಿಸುತ್ತಿದ್ದರೆ. ಈ ವಿವಿ ಯಲ್ಲಿ 99% ರಷ್ಟು ಬಡಕುಟುಂಬದ ಮಕ್ಕಳು ಓದುತ್ತಿದ್ದಾರೆ. ಸರ್ಕಾರದ ಫೆಲೋಶಿಪ್ ನಂಬಿಕೊಂಡು ಬಂದಿರುವ ಅನೇಕ ವಿಧ್ಯಾರ್ಥಿಗಳಿಗೆ ಭಾರಿ ನಿರಾಸೆ ಮಾಡಿದೆ ಸರ್ಕಾರ.
ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಇಂತ ದೊಡ್ಡ ಮೋಸ ಮಾಡುತ್ತಿರುವ ಸರ್ಕಾರಕ್ಕೆ ಎಲ್ಲ ಕನ್ನಡಿಗರಿಂದ ದಿಕ್ಕಾರ. ಕನ್ನಡ ವಿವಿ ಮೇಲೆ ಯಾಕೆ ಇಂತಹ ಧೋರಣೆ. ಸರ್ಕಾರದ ಇಂತಹ ತಾತ್ಸಾರ ಖಂಡನೀಯ.
ಎಂದಿನಂತೆ ಇದಕ್ಕೆ ಬೆನ್ನೆಲುಬಾಗಿ ನಿಲ್ಲುತ್ತಿರುವವರು ಕರ್ನಾಟಕ ರಕ್ಷಣಾ ವೇದಿಕೆ. ಇಲ್ಲಿನ ಸಂಶೋದನಾ ವಿದ್ಯಾರ್ಥಿಗಳ ಅಳಲು ನಿಲ್ಲಿಸಲು ಕರ್ನಾಟಕ ರಕ್ಷಣಾ ವೇದಿಕೆಯು ಇಂದು ಸಂಜೆ 5 ಗಂಟೆಗೆ ಟ್ವಿಟರ್ ಅಭಿಯಾನವನ್ನು ಆಯೋಜಿಸಿದ್ದಾರೆ. ಎಲ್ಲಾ ಕನ್ನಡಿಗರೂ ಸೇರಿ ಈ ಅಭಿಯಾನಕ್ಕೆ ಕೈ ಜೋಡಿಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಲು ನಿಲ್ಲಬೇಕು ಎಂದಿದ್ದಾರೆ ದಿವ್ಯಶ್ರೀ.ವಿ.

ಹಂಪಿ ಕನ್ನಡ ವಿಶ್ವವಿದ್ಯಾಲಯದ ಪರಿಸ್ಥಿತಿ ಶೋಚನೀಯವಾಗಿದೆ. ವಿಶ್ವವಿದ್ಯಾಲಯದಲ್ಲಿ ಎರಡು ವರ್ಷಗಳಿಂದ ಸಂಶೋಧನೆ, ಬೋಧನೆ ಹೆಚ್ಚು ಕಡಿಮೆ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಇದರ ಪರಿಣಾಮವಾಗಿಯೇ ನ್ಯಾಕ್ ಗುಣಮಟ್ಟದಲ್ಲಿ ಎ+ ಇದ್ದ ಶ್ರೇಣಿ ಮೂರು ಮೆಟ್ಟಿಲು ಕೆಳಗಿಳಿದು ಬಿ ಶ್ರೇಣಿಗೆ ಇಳಿದಿದೆ.
ವಿಶ್ವವಿದ್ಯಾಲಯದ ಕುಲತಿಗಳಾದ ಪ್ರೊ.ಸ.ಚಿ.ರಮೇಶ್ ರಾಜ್ಯ ಸರ್ಕಾರದಿಂದ ಅನುದಾನಗಳನ್ನು ತರಲು ವಿಫಲರಾಗಿದ್ದಾರೆ. ಬಿ ಶ್ರೇಣಿಗೆ ಇಳಿದ ಪರಿಣಾಮವಾಗಿ ಯುಜಿಸಿಯಿಂದ ಬರುವ ಅನುದಾನಗಳೂ ನಿಂತುಹೋಗಿದೆ. ಕುಲಪತಿಗಳು, ಕುಲಸಚಿವರೇ ಅಸಹಾಯಕತೆ ಪ್ರದರ್ಶಿಸುತ್ತಿರುವುದರಿಂದ ಅರಾಜಕ ವ್ಯವಸ್ಥೆ ಸೃಷ್ಟಿಯಾಗಿದೆ.
ಕಳೆದ ಎರಡು ವರ್ಷಗಳಿಂದ ಕನ್ನಡ ವಿವಿಯಲ್ಲಿ ಯಾವುದೇ ಅಭಿವೃದ್ಧಿ ಚಟುವಟಿಕೆಗಳು ನಡೆಯುತ್ತಿಲ್ಲ. ಸಂಶೋಧನಾ ಕಾರ್ಯಗಳು ಸ್ಥಗಿತಗೊಂಡಿವೆ ಅಥವಾ ವೇಗ ಕಳೆದುಕೊಂಡಿವೆ. ದೂರಶಿಕ್ಷಣ ಕೋರ್ಸ್ ಗಳು ಮುಚ್ಚಿಕೊಳ್ಳುತ್ತಿವೆ. ಇದೆಲ್ಲವನ್ನೂ ಸರಿಪಡಿಸಬೇಕಾದ ಆಡಳಿತ ಮಂಡಳಿ ನಿಷ್ಕ್ರಿಯವಾಗಿದೆ ಎಂದಿದ್ದಾರೆ.
Recommended Video
-
ಲವ್ ಮಾಕ್ಟೇಲ್ 3 ವಿವಾದ: ನನ್ನ ಕಥೆಯ ದ್ವಿತೀಯಾರ್ಧ ನಕಲು: ಸಿನಿಮಾ ಬರಹಗಾರರೇ ಎಚ್ಚರ ಎಂದ ನಿರ್ದೇಶಕ ರಾಘವೇಂದ್ರ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Vijay Sethupathi: ರಿಷಬ್ ಶೆಟ್ಟಿ ಜೊತೆ ನಟಿಸುವ ದೊಡ್ಡ ಆಸೆ ನನಗಿದೆ: ಆಸೆ ಬಿಚ್ಚಿಟ್ಟ ನಟ ವಿಜಯ್ ಸೇತುಪತಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ -
Love Mocktail 3: ಲವ್ ಮಾಕ್ಟೇಲ್ 3 ಸಿನಿಮಾ ಕದ್ದ ಕಥೆ: ಮಾರಿ ಗೋಲ್ಡ್ ನಿರ್ದೇಶಕ ರಾಘವೇಂದ್ರ ನಾಯ್ಕ್ ಗಂಭೀರ ಆರೋಪ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications