ಸಾರಾಂಶ : ಕರ್ನಾಟಕದಲ್ಲಿ ಕನ್ನಡ ಕಡ್ಡಾಯ ಕಲಿಕೆ ವಿಧೇಯಕ
ಬೆಂಗಳೂರು, ಏ. 1 : 1 ರಿಂದ 5ನೇ ತರಗತಿವರೆಗೆ ಮಾತೃಭಾಷೆ ಇಲ್ಲವೇ ಕನ್ನಡದಲ್ಲಿ ಪ್ರಾಥಮಿಕ ಶಿಕ್ಷಣ ಕಡ್ಡಾಯಗೊಳಿಸುವುದು ಹಾಗೂ 1 ರಿಂದ 10ನೇ ತರಗತಿವರೆಗೆ ಒಂದು ಭಾಷೆಯಾಗಿ ಕನ್ನಡ ಕಲಿಕೆಯನ್ನು ಕಡ್ಡಾಯಗೊಳಿಸುವ ಎರಡು ವಿಧೇಯಕಗಳಿಗೆ ಉಭಯ ಸದನಗಳಲ್ಲಿ ಸರ್ವಾನುಮತದ ಒಪ್ಪಿಗೆ ಸಿಕ್ಕಿದೆ.
ಮಂಗಳವಾರ ವಿಧಾನ ಸಭೆ ಮತ್ತು ವಿಧಾನಪರಿಷತ್ತಿನಲ್ಲಿ ವಿಧೇಯಕವನ್ನು ಮಂಡನೆ ಮಾಡಲಾಗಿತ್ತು. ಉಭಯ ಸದನಗಳು ಇದಕ್ಕೆ ಒಪ್ಪಿಗೆ ನೀಡಿವೆ. 1 ರಿಂದ 10ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ಕನ್ನಡ ಕಲಿಸುವ ಕಾನೂನು ಮುಂದಿನ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರಲಿದೆ. [ಕನ್ನಡ ಕಡ್ಡಾಯ ಕಲಿಕೆ ಕೈ ಹಿಡಿದ ರಾಜ್ಯ ಸರ್ಕಾರ]
ವಿಧಾನಸಭೆಯಲ್ಲಿ ವಿಧೇಯಕ ಮಂಡನೆ ಮಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಅವರು, ಭಾಷಾವಾರು ಪ್ರಾಂತ್ಯದ ಆಧಾರದ ಮೇಲೆ ಒಕ್ಕೂಟ ವ್ಯವಸ್ಥೆ ರಚನೆಯಾಗಿದೆ. ಇದರ ಅನ್ವಯ ರಾಜ್ಯಗಳ ಭಾಷೆಗೆ ಮಾನ್ಯತೆ ನೀಡಲಾಗಿದೆ. ಪ್ರಾದೇಶಿಕ ಭಾಷೆಗಳಿಗೆ ಮಾನ್ಯತೆ ಸಿಗುವ ವಿಶ್ವಾಸದ ಮೇಲೆ ಆರ್ಟಿಇ ಕಾಯ್ದೆಗೆ ತಿದ್ದುಪಡಿ ತಂದು ವಿಧೇಯಕ ರೂಪಿಸಲಾಗಿದೆ ಎಂದರು. [ಕಡ್ಡಾಯ ಕನ್ನಡ ಶಿಕ್ಷಣ ಹೋರಾಟಕ್ಕೆ ಮತ್ತೆ ಹಿನ್ನಡೆ]

ರಾಷ್ಟ್ರಪತಿಗಳಿಗೆ ರವಾನೆ : 1 ರಿಂದ 5ನೇ ತರಗತಿವರೆಗೆ ಮಾತೃಭಾಷೆ ಇಲ್ಲವೇ ಕನ್ನಡದಲ್ಲಿ ಕಡ್ಡಾಯವಾಗಿ ಶಿಕ್ಷಣ ನೀಡಲು ಆರ್ಟಿಇ ಕಾಯ್ದೆ 2009ರ ಸೆಕ್ಷನ್ 29 (ಎಫ್)ಗೆ ತಿದ್ದುಪಡಿ ತರಲಾಗಿದೆ. ಈ ವಿಧೇಯಕ ಜಾರಿಗೆ ರಾಷ್ಟ್ರಪತಿಗಳ ಒಪ್ಪಿಗೆ ಬೇಕಾಗಿದೆ. ಇದನ್ನು ರಾಜ್ಯಪಾಲರ ಮೂಲಕ ರಾಷ್ಟ್ರಪತಿಗಳಿಗೆ ಕಳಿಸಲಾಗುತ್ತದೆ. [ಕನ್ನಡ ಮಾಧ್ಯಮ ಮಸೂದೆಗೆ ರಾಜ್ಯ ಕ್ಯಾಬಿನೆಟ್ ಒಪ್ಪಿಗೆ]
ಈ ವರ್ಷವೇ ಜಾರಿ : ರಾಜ್ಯದ ಎಲ್ಲಾ ಶಾಲೆಗಳಲ್ಲಿ 1 ರಿಂದ 10ನೇ ತರಗತಿವರೆಗೆ ಒಂದು ಭಾಷೆಯಾಗಿ ಕನ್ನಡ ಕಲಿಕೆ ಕಾನೂನು ಈ ವರ್ಷದಿಂದಲೇ ಜಾರಿಗೆ ಬರಲಿದೆ. ಕನ್ನಡ ಭಾಷಾ ಕಲಿಕೆ ವಿಧೇಯಕ 2015ಕ್ಕೆ ವಿಧಾನಮಂಡಲದ ಉಭಯ ಸದನಗಳು ಒಪ್ಪಿಗೆ ನೀಡಿದ್ದು, ಇದಕ್ಕೆ ರಾಜ್ಯಪಾಲರ ಒಪ್ಪಿಗೆ ಸಾಕು ಎಂದು ಕಿಮ್ಮನೆ ರತ್ನಾಕರ್ ಹೇಳಿದ್ದಾರೆ.
ಅನುದಾನ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಈ ಕಾನೂನು 2015-16ನೇ ಸಾಲಿನಿಂದಲೇ ಜಾರಿಗೆ ಬರಲಿದೆ. ತ್ರಿಭಾಷಾ ಸೂತ್ರದಡಿ ಪ್ರಥಮ ಭಾಷೆ ಸೇರಿದಂತೆ ಎರಡು ಭಾಷೆಗಳನ್ನು ವಿದ್ಯಾರ್ಥಿಯ ಆಯ್ಕೆಗೆ ಬಿಡಲಾಗಿದೆ. ಇಲ್ಲಿ ಪ್ರಥಮ ಭಾಷೆಯಾಗಿಯೂ ಕನ್ನಡ ಕಲಿಯಬಹುದು. ಇಲ್ಲವೇ ತೃತೀಯ ಭಾಷೆಯಾಗಿ ಕಲಿಯಬಹುದು.
ಎಲ್ಲಾ ವಿದ್ಯಾರ್ಥಿಗಳು ಕನ್ನಡವನ್ನು ಕಡ್ಡಾಯವಾಗಿ ಕಲಿಯಬೇಕಾಗಿದೆ. ಆದರೆ, ಸಿಬಿಎಸ್ಸಿ ಹಾಗೂ ಐಸಿಎಸ್ಸಿ ಪಠ್ಯಕ್ರಮ ಇರುವ ಶಾಲೆಗಳು ಇದರ ವ್ಯಾಪ್ತಿಗೆ ಒಳಪಡುವುದಿಲ್ಲ. ಮುಂದಿನ ದಿನಗಳಲ್ಲಿ ಈ ಶಾಲೆಗಳಲ್ಲೂ ಕನ್ನಡ ಕಡ್ಡಾಯಗೊಳಿಸಲಾಗುತ್ತದೆ ಎಂದು ಸಚಿವರು ಸದನಕ್ಕೆ ವಿವರಣೆ ನೀಡಿದರು.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications