ಜಯಂತ ಕಾಯ್ಕಿಣಿಗೆ ಪ್ರತಿಷ್ಠಿತ ಡಿಎಸ್ಸಿ ಪ್ರಶಸ್ತಿ
ಕೋಲ್ಕತಾ, ಜನವರಿ 25: ಖ್ಯಾತ ಸಾಹಿತಿ ಜಯಂತ ಕಾಯ್ಕಿಣಿ ತಮ್ಮ 'ನೋ ಪ್ರೆಸೆಂಟ್ ಪ್ಲೀಸ್' ಕಥಾಸಂಕಲನಕ್ಕೆ ದಕ್ಷಿಣ ಏಷ್ಯಾ ಸಾಹಿತ್ಯ 2019ರ ಡಿಎಸ್ಸಿ ಪ್ರಶಸ್ತಿ ಒಲಿದಿದೆ.
ಮುಂಬೈ ಮಹಾನಗರಿಯನ್ನು ಹಿನ್ನೆಲೆಯಲ್ಲಿಟ್ಟುಕೊಂಡು ರಚಿಸಿದ ಕಥೆಗಳಿಗೆ ಈ ಗೌರವ ದೊರಕಿದೆ. ಈ ಕಥೆಗಳನ್ನು ಅನುವಾದ ಮಾಡಿದ ತೇಜಸ್ವಿನಿ ನಿರಂಜನ ಕೂಡ 25,000 ಡಾಲರ್ ಮೊತ್ತದ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ. ಟಾಟಾ ಸ್ಟೀಲ್ ಕೋಲ್ಕತಾ ಸಾಹಿತ್ಯ ಸಮ್ಮೇಳನದಲ್ಲಿ ಈ ಘೋಷಣೆ ಮಾಡಲಾಯಿತು.
ಪಾಕಿಸ್ತಾನಿ-ಬ್ರಿಟಿಷ್ ಕಾದಂಬರಿಗಾರ್ತಿ 'ಹೋಮ್ ಫೈರ್', ಪಾಕಿಸ್ತಾನದ ಕಾದಂಬರಿಕಾರ ಮೊಹ್ಸಿನ್ ಹಮೀದ್ ಅವರ 'ಎಕ್ಸಿಟ್ ವೆಸ್ಟ್', ನೀಲ್ ಮುಖರ್ಜಿ ಅವರ 'ಎ ಸ್ಟೇಟ್ ಆಫ್ ಫ್ರೀಡಂ', ಸುಜಿತ್ ಸರಫ್ ಅವರ 'ಹೀರಾಲಾಲ್ ಆಂಡ್ ಸನ್ಸ್' ಮತ್ತು ಮನು ಜೋಸೆಫ್ ಅವರ 'ಮಿಸ್ ಲೈಲಾ ಆರ್ಮ್ಡ್ ಆಂಡ್ ಡೇಂಜರಸ್' ಕೃತಿಗಳು ಸಹ ಸ್ಪರ್ಧೆಯಲ್ಲಿದ್ದವು. ಅವುಗಳ ನಡುವೆ ಪೈಪೋಟಿಯಲ್ಲಿ ಕಾಯ್ಕಿಣಿ ಅವರ ಕಥಾ ಸಂಕಲನ ಆಯ್ಕೆಯಾಗಿದೆ.

'ಅನುವಾದ ಮತ್ತು ಕಿರು ಕಥೆ ವಿಭಾಗದಲ್ಲಿ ಪ್ರಶಸ್ತಿಗೆ ಆಯ್ಕೆಯಾಗಿರುವುದು ವಿಶೇಷ ಮತ್ತು ಸಂತೋಷಕರ ಸಂಗತಿ. ಸಾಮಾನ್ಯವಾಗಿ ಹೆಚ್ಚಿನ ಗೌರವಗಳು ಬೃಹತ್ ಪುಸ್ತಕಗಳಿಗೆ, ಬೃಹತ್ ಕಾದಂಬರಿಗಳಿಗೆ ದೊರಕುತ್ತವೆ. ತೇಜಸ್ವಿನಿ ಅವರನ್ನು ಕೂಡ ತೀರ್ಪುಗಾರರು ಸಮಾನವಾಗಿ ಗುರುತಿಸಿರುವುದು ನನಗೆ ತುಂಬಾ ಖುಷಿ ನೀಡಿದೆ' ಎಂದು ಕಾಯ್ಕಿಣಿ ಹೇಳಿದ್ದಾರೆ.
ಸಾಹಿತ್ಯ ಪ್ರಶಸ್ತಿಗೆ ಇದ್ದ ಪೈಪೋಟಿಯನ್ನು 'ರೇಸ್' ಎಂದು ಕರೆಯುವುದನ್ನು ಇಷ್ಟಪಡುವುದಿಲ್ಲ ಎಂದಿರುವ ಅವರು, ಎಲ್ಲ ಬರಹಗಾರರೂ ಒಟ್ಟಿಗಿದ್ದೆವು ಎಂದಿದ್ದಾರೆ.

1976ರಿಂದ 26 ವರ್ಷ ಮುಂಬೈನಲ್ಲಿ ನೆಲೆಸಿದ್ದ ಕಾಯ್ಕಿಣಿ ಅವರು ಅಲ್ಲಿನ ಬದುಕಿನ ಹಿನ್ನೆಲೆಯಲ್ಲಿ ಹಲವು ಕಥೆಗಳನ್ನು ರಚಿಸಿದ್ದಾರೆ. ಅವುಗಳನ್ನು ಮುಂಬೈ ಕಥೆಗಳೆಂದು ಅವರು ನಿರ್ದಿಷ್ಟವಾಗಿ ಗುರುತಿಸದೆ ಇದ್ದರೂ, ಅನುವಾದಿ ತೇಜಸ್ವಿನಿ ಅವರು 'ನೋ ಪ್ರೆಸೆಂಟ್ಸ್ ಪ್ಲೀಸ್'ಅನ್ನು ಮುಂಬೈ ಕಥೆಗಳೆಂದು ಆಯ್ಕೆ ಮಾಡಿಕೊಂಡಿದ್ದರು.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು












Click it and Unblock the Notifications