'ಜ್ಞಾನಪೀಠ ಪ್ರಶಸ್ತಿಗೆ ಯುಆರ್ಎ, ಕಾರ್ನಾಡ್ ಅರ್ಹರಲ್ಲ'
ಬೆಂಗಳೂರು, ಫೆ.8 : ಕನ್ನಡ ಸಾಹಿತ್ಯ ಲೋಕದಲ್ಲಿ ಜ್ಞಾನಪೀಠ ಪ್ರಶಸ್ತಿ ವಿಜೇತರಿಗೆ ಹೆಚ್ಚಿನ ಮನ್ನಣೆ ಸಿಗುತ್ತಿರುವುದು ಒಳ್ಳೆ ಬೆಳವಣಿಗೆಯಲ್ಲ ಎಂದು ಖ್ಯಾತ ಸಾಹಿತಿ ಕುಂ. ವೀರಭದ್ರಪ್ಪ ವಿವಾದದ ಬಿರುಗಾಳಿ ಎಬ್ಬಿಸಿದ್ದಾರೆ.
ಈ ವರೆಗೂ ಜ್ಞಾನಪೀಠ ಪ್ರಶಸ್ತಿ ಪಡೆದ ಸಾಹಿತಿಗಳ ಪೈಕಿ ಯುಆರ್ ಅನಂತಮೂರ್ತಿ ಹಾಗೂ ಗಿರೀಶ್ ಕಾರ್ನಾಡ್ ಅವರು ಪ್ರಶಸ್ತಿಗೆ ಅರ್ಹರಲ್ಲ ಎಂದು 'ಅರಮನೆ' ಕೃತಿಗಾಗಿ 2007ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕುಂ.ವೀ ಹೇಳಿದ್ದಾರೆ.
ಕನ್ನಡ ಸಾಹಿತಿಗಳ ಪೈಕಿ ಯುಆರ್ ಅನಂತಮೂರ್ತಿ ಹಾಗೂ ಗಿರೀಶ್ ಕಾರ್ನಾಡ್ ಅವರು ಉತ್ತಮ ಸಾಹಿತಿಗಳು ಎಂಬುದನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ, ಇಬ್ಬರನ್ನು ಬಿಟ್ಟು ಉಳಿದ ಆರು ಮಂದಿಯನ್ನು ಜ್ಞಾನಪೀಠ ಪ್ರಶಸ್ತಿ ವಿಜೇತರ ಸಾಲಿನಲ್ಲಿ ಕೂರಿಸುವುದು ಅಷ್ಟು ಸರಿ ಕಾಣುವುದಿಲ್ಲ. ಈ ಇಬ್ಬರು ಲೇಖಕರು ಕನ್ನಡದ ಸರ್ವ ಶ್ರೇಷ್ಠ ಸಾಹಿತಿಗಳು ಎಂದು ಹೇಳಲಾಗದು ಎಂದು ವೀರಭದ್ರಪ್ಪ ಅಭಿಪ್ರಾಯಪಟ್ಟಿದ್ದಾರೆ. ನನ್ನ ಅಭಿಪ್ರಾಯ ಜ್ಞಾನಪೀಠ ಪ್ರಶಸ್ತಿಗೆ ಇಬ್ಬರು ಅರ್ಹರೇ ಇಲ್ಲವೇ ಎಂಬುದರ ಬಗ್ಗೆ ಮಾತ್ರ ಅಷ್ಟೆ. ಉಳಿದಂತೆ ಇಬ್ಬರು ಕನ್ನಡದ ಉತ್ತಮ ಸಾಹಿತಿಗಳು ಎಂದು ವೀರಭದ್ರಪ್ಪ ಸ್ಪಷ್ಟನೆ ನೀಡಿದ್ದಾರೆ.
ಕಾರ್ನಾಡ್ ಅವರಿಗಿಂತ ಅನಂತಮೂರ್ತಿ ಅವರ ಸಾಹಿತ್ಯ ಓದಬಹುದು. ಆದರೆ, ಇಬ್ಬರ ಕೃತಿಗಳಲ್ಲಿ ಕನ್ನಡದ ಸೊಗಡು ಕಮ್ಮಿ, ಒಟ್ಟಾರೆ ಜ್ಞಾನಪೀಠ ಎಂಬುದೇ ಅರ್ಥಹೀನ. ಈ ಇಬ್ಬರನ್ನು ಕುವೆಂಪು, ಮಾಸ್ತಿ, ಬೇಂದ್ರೆ ಸಾಲಿಗೆ ಸೇರಿಸುವುದು ತಪ್ಪು ಎಂದು ಕುಂ ವೀರಭದ್ರಪ್ಪ ಅವರು ಕೊಪ್ಪಳದಲ್ಲಿ ಶನಿವಾರ ನಡೆದ ಸಮಾರಂಭವೊಂದರಲ್ಲಿ ಹೇಳಿದ್ದಾರೆ.

ನಂತರ ಈ ಬಗ್ಗೆ ಖಾಸಗಿ ಸುದ್ದಿ ವಾಹಿನಿಗೆ ಸ್ಪಷ್ಟನೆ ನೀಡಿದ ವೀರಭದ್ರಪ್ಪ ಅವರು, ಅನುವಾದ ಸಾಹಿತ್ಯ, ಕನ್ನಡದಿಂದ ಇಂಗ್ಲೀಷ್ ಗೆ ವಲಸೆ ಹೋದ ಸಾಹಿತ್ಯಕ್ಕೆ ಮನ್ನಣೆ ಸಿಗುತ್ತಿರುವುದು ದುರಂತ. ಕಾರ್ನಾಡ್ ನಾಟಕ ಗುಣಮಟ್ಟ ಸರಿಯಿಲ್ಲ, ಅವರು ಠಾಗೋರ್ ಅವರನ್ನು ಟೀಕಿಸಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಜೈನ ಸಮುದಾಯ, ಮೂಲಭೂತವಾದಿಗಳು ನೀಡುವ ಪ್ರಶಸ್ತಿ ಹೀಗಾಗಿ ಇದಕ್ಕೆ ಹೆಚ್ಚಿನ ಮಹತ್ವ ನೀಡುವುದು ಒಳ್ಳೆಯದಲ್ಲ. ಶಿಕ್ಷಣ ಸಂಸ್ಥೆಗಳಲ್ಲಿ 8 ಜನರೇ ಕನ್ನಡ ಸಾಹಿತಿಗಳೆಂದು ಬಿಂಬಿಸುವುದು ಅರೋಗ್ಯಕರವಲ್ಲ ಎಂದಿದ್ದಾರೆ.
ಸಾರ್ವಜನಿಕ, ಶೈಕ್ಷಣಿಕ ವಲಯದಲ್ಲಿ ಈ ಇಬ್ಬರು ಸೇರಿದಂತೆ ಜ್ಞಾನಪೀಠ ಪ್ರಶಸ್ತಿ ವಿಜೇತರನ್ನು ಮಾತ್ರ ಶ್ರೇಷ್ಠ ಸಾಹಿತಿಗಳು ಎಂದು ಬಿಂಬಿಸುತ್ತಿರುವುದು ತಪ್ಪು. ಅನಂತಮೂರ್ತಿ, ಕಾರ್ನಾಡ್ ಅವರಿಗಿಂತ ಕೆಪಿ ಪೂರ್ಣಚಂದ್ರ ತೇಜಸ್ವಿ, ಯಶವಂತ ಚಿತ್ತಾಲ, ನಿಸಾರ್ ಅಹಮದ್, ಪಿ. ಲಂಕೇಶ್ ಅವರು ಜ್ಞಾನಪೀಠ ಪ್ರಶಸ್ತಿಗೆ ಅರ್ಹರಾಗಿದ್ದಾರೆ ಎಂದು ಕುಂವೀ ಹೇಳಿದ್ದಾರೆ.
ನನಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಿಕ್ಕಿದೆ ಇದು ಜ್ಞಾನಪೀಠ ಪ್ರಶಸ್ತಿಗಿಂತ ಸಾವಿರ ಪಟ್ಟು ಮೇಲು, ನಮ್ಮ ಶಾಲೆಗಳಲ್ಲಿ ಪಂಪ, ರನ್ನ, ಪೊನ್ನ, ಇವರ ಬಗ್ಗೆ ತಿಳಿ ಹೇಳಬೇಕಾಗಿದೆ. ಕುವೆಂಪು ಅವರ ಮಲೆಗಳಲ್ಲಿ ಮದುಮಗಳು ಇಂಗ್ಲೀಷ್ ಅನುವಾದವಾಗಿದ್ದರೆ ನೊಬೆಲ್ ಸಿಗುತ್ತಿತ್ತು. ಠಾಗೋರ್ ಅವರ ಗೀತಾಂಜಲಿಗೆ ಕವಿ ಯೇಟ್ಸ್ ಮುನ್ನುಡಿ ಬರೆಯದಿದ್ದರೆ ಠಾಗೋರ್ ಅವರಿಗೆ ನೊಬೆಲ್ ಸಿಗುವುದೇ ಕಷ್ಟವಾಗುತ್ತಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications