100 ನೇ ‘‘ಮನ್ ಕಿ ಬಾತ್” ಕಾರ್ಯಕ್ರಮ ಮುಗಿಸಿದ್ದಕ್ಕೆ ಅಭಿನಂದನೆ; ಈಗಲಾದರೂ ‘‘ಜನ್ ಕಿ ಬಾತ್” ಕೇಳುತ್ತಿರಾ? : ಸಿದ್ದರಾಮಯ್ಯ
ಬೆಂಗಳೂರು,ಏಪ್ರಿಲ್30: ಪ್ರಧಾನಿ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮ ನೂರು ಸಂಚಿಕೆಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ಇನ್ನಾದರೂ ಜನಸಾಮಾನ್ಯರ ಮನದ ಮಾತುಗಳಿಗೆ ಉತ್ತರಿಸುತ್ತೀರಾ? ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಪ್ರಧಾನಿಗಳನ್ನು ಪ್ರಶ್ನಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್ ಗೆ 125 ಡಾಲರ್ ಇದ್ದಾಗ ದೇಶದಲ್ಲಿ ಪೆಟ್ರೋಲ್ ಬೆಲೆ ರೂ. 57 ಇತ್ತು, ಈಗ ಕಚ್ಚಾ ತೈಲದ ಬೆಲೆ ಬ್ಯಾರಲ್ ಗೆ 54.77 ಡಾಲರ್ ಇರುವಾಗ ಪೆಟ್ರೋಲ್ ಬೆಲೆ ರೂ. 102 ರೂಪಾಯಿ ಆಗಿರುವುದು ಯಾಕೆ? ಎಂದು ಪ್ರಶ್ನಿಸಿದ್ದಾರೆ.

'ನಾ ಖಾವುಂಗಾ, ನಾ ಖಾನೆದೂಂಗಾ' ಎಂದು ನೀವು ಹೇಳಿದರೂ, ನಿಮ್ಮ ಪಕ್ಷದ ಸಚಿವರೇ ಕಮಿಷನ್ ಹಣ ತಿಂದು ಜೈಲಿಗೆ ಹೋಗುತ್ತಿರುವುದೇಕೆ? ರಾಜ್ಯದ ಸಚಿವರು ಸರ್ಕಾರಿ ಗುತ್ತಿಗೆಗಳಲ್ಲಿ 40% ಕಮಿಷನ್ ಕೇಳುತ್ತಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ನಿಮಗೆ ಪತ್ರ ಬರೆದಿದ್ದರೂ ಅದಕ್ಕೆ ಉತ್ತರಿಸುವ ಧೈರ್ಯ ತೋರಿಲ್ಲ ಯಾಕೆ? ಎಂದಿದ್ದಾರೆ.
ರಾಷ್ಟ್ರೀಕೃತ ಬ್ಯಾಂಕುಗಳು ಸೇರಿದಂತೆ ಒಂದು ಲಕ್ಷದ ವರೆಗಿನ ರೈತರ ಸಾಲವನ್ನು ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟದಲ್ಲಿಯೇ ಮನ್ನಾ ಮಾಡುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದರೂ ಮನ್ನಾ ಮಾಡದೆ ಇರುವುದು ಯಾಕೆ? ರೈತರ ಸಾಲ ಮನ್ನಾ ಮಾಡಲು ನಿರಾಕರಿಸುತ್ತಿರುವ ನಿಮ್ಮ ಸರ್ಕಾರ ಉದ್ಯಮಿಗಳ ಸಾಲ ಮನ್ನಾ ಮಾಡುತ್ತಿರುವುದೇಕೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ತೆರಿಗೆ ಮತ್ತು ಸುಂಕಗಳ ರೂಪದಲ್ಲಿ 4 ಲಕ್ಷದ 75 ಸಾವಿರ ಕೋಟಿ ರೂಪಾಯಿ ನೀಡಿದರೂ, ಕೇಂದ್ರ ಸರ್ಕಾರವು ತೆರಿಗೆ ಹಂಚಿಕೆ ರೂಪದಲ್ಲಿ ರೂ.50,257 ಕೋಟಿ ಮಾತ್ರ ಕರ್ನಾಟಕ ರಾಜ್ಯಕ್ಕೆ ನೀಡುತ್ತಿರುವುದು ಯಾಕೆ? ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಸಿಗಬೇಕಾಗಿರುವ ತೆರಿಗೆ ಹಂಚಿಕೆಯ ಪಾಲು ಶೇಕಡಾ 4.72ರಿಂದ ಶೇಕಡಾ 3.64ಕ್ಕೆ ಇಳಿದದ್ದು ಯಾಕೆ? ಎಂದಿದ್ದಾರೆ.
ಕೇಂದ್ರ ಹಣಕಾಸು ಆಯೋಗ ಕರ್ನಾಟಕಕ್ಕೆ ಪರಿಹಾರ ರೂಪದಲ್ಲಿ ರೂ.5,495 ಕೋಟಿ ವಿಶೇಷ ಅನುದಾನ ನೀಡಬೇಕೆಂದು ಶಿಫಾರಸು ಮಾಡಿದ್ದರೂ ಕೇಂದ್ರ ಹಣಕಾಸು ಸಚಿವರು ನಿರಾಕರಿಸಿದ್ದು ಯಾಕೆ? 2013ರಲ್ಲಿ ಕೇಂದ್ರ ಅನುದಾನಿತ ಯೋಜನೆಗಳಲ್ಲಿ ಶೇಕಡಾ 25ರಷ್ಟು ಮಾತ್ರ ಇದ್ದ ರಾಜ್ಯದ ಪಾಲು 2021-22ರಲ್ಲಿ ಶೇಕಡಾ 55ಕ್ಕೆ ಹೆಚ್ಚಿದ್ದು ಯಾಕೆ? ಎಂದು ಪ್ರಶ್ನಿಸಿದ್ದಾರೆ.

ಮಳೆ ಹಾನಿಗಾಗಿ ರಾಜ್ಯ ಸರ್ಕಾರ ರೂ.35,000 ಕೋಟಿ ಪರಿಹಾರ ಕೇಳಿದ್ದರೂ ಡಬಲ್ ಎಂಜಿನ್ ಸರ್ಕಾರ ಕೇವಲ ರೂ.1,895 ಕೋಟಿ ನೀಡಿದ್ದು ಯಾಕೆ?
ರೈತರ ಬೆಳೆಗಳ ಬೆಲೆ ಕುಸಿತ ತಡೆಯಲು ಬೆಂಬಲ ಬೆಲೆಯ ಮೂಲಕ ಮಾರುಕಟ್ಟೆ ಮಧ್ಯಪ್ರವೇಶಕ್ಕೆ ನೀಡಲಾಗುತ್ತಿದ್ದ ಅನುದಾನವನ್ನು ರೂ.1,500 ಕೋಟಿ ಗಳಿಂದ ಒಂದು ಲಕ್ಷ ರೂಪಾಯಿಗಳಿಗೆ ಇಳಿಸಿದ್ದು ಯಾಕೆ? ಎಂದಿದ್ದಾರೆ.
ಪಿಎಸ್ಐ ನೇಮಕದಲ್ಲಿ ಅಂದಾಜು ರೂ.300 ಕೋಟಿಗೂ ಮೀರಿ ಲಂಚದ ಅವ್ಯವಹಾರ ನಡೆದು ಉದ್ಯೋಗದ ಅವಕಾಶ ಕಳೆದುಕೊಂಡಿರುವ ಸುಮಾರು 54 ಸಾವಿರ ಯುವಜನರ ಮನದ ಮಾತಿಗೆ ನೀವು ಪ್ರತಿಕ್ರಿಯಿಸದೆ ಮೌನವಾಗಿರುವುದು ಯಾಕೆ? ಎಂದು ಪ್ರಶ್ನಿಸಿದ್ದಾರೆ.
ಪ್ರಧಾನಿ ಅವರೇ ನೀವು ರೋಡ್ ಶೋ ನಡೆಸಿರುವ ಬೆಂಗಳೂರು ರಸ್ತೆಗಳಲ್ಲಿರುವ 25,000 ಗುಂಡಿಗಳನ್ನು ಮುಚ್ಚಲು ರೂ.7,200 ಕೋಟಿ, ಅಂದರೆ ಒಂದು ಗುಂಡಿಗೆ ತಲಾ ರೂ.9.20 ಲಕ್ಷ ಖರ್ಚು ಮಾಡಿದರೂ ಗುಂಡಿಗಳು ಹಾಗೆಯೇ ಉಳಿದುಕೊಂಡಿರುವುದು ಯಾಕೆ? ಎಂದು ಟ್ವೀಟ್ ಮಾಡಿದ್ದಾರೆ.
ಗ್ರಾಮೀಣ ಭಾಗಗಳಲ್ಲಿ ಉದ್ಯೋಗ ಸಂಜೀವಿನಿಯಾಗಿರುವ ಯುಪಿಎ ಸರ್ಕಾರದ ಹೆಮ್ಮೆಯ ಕಾರ್ಯಕ್ರಮವಾಗಿರುವ ನರೇಗಾ ಯೋಜನೆಗೆ ಈ ಸಾಲಿನ ಬಜೆಟ್ ನಲ್ಲಿ ಶೇಕಡಾ 21.66ರಷ್ಟು ಅಂದರೆ ರೂ.60,000 ಕೋಟಿಯಷ್ಟು ಅನುದಾನವನ್ನು ಡಬಲ್ ಎಂಜಿನ್ ಸರ್ಕಾರ ಕಡಿತಗೊಳಿಸಿದ್ದು ಯಾಕೆ? ನಮ್ಮ ಸರ್ಕಾರದ ಐದು ವರ್ಷಗಳ ಆಡಳಿತದಲ್ಲಿ ಮಾಡಿದ್ದ ಒಟ್ಟು ಸಾಲ ರೂ.1,16,512 ಕೋಟಿ, ಕಳೆದ ನಾಲ್ಕು ವರ್ಷಗಳಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಒಟ್ಟು ಸಾಲ ರೂ.3,22,000 ಕೋಟಿ. ಡಬಲ್ ಎಂಜಿನ್ ಸರ್ಕಾರ ಕರ್ನಾಟಕ ರಾಜ್ಯವನ್ನು ಸಾಲಗಾರ ರಾಜ್ಯ ಮಾಡಿದ್ದು ಯಾಕೆ?ಎಂದು ಪ್ರಶ್ನಿಸಿದ್ದಾರೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications