ಎಲ್ಲದ್ದಕ್ಕೂ ಬಂದ್ ಮಾಡುವುದೇ ಪರಿಹಾರವಲ್ಲ: ನಾರಾಯಣಗೌಡ
ಬೆಂಗಳೂರು, ಡಿಸೆಂಬರ್ 22: ಡಿಸೆಂಬರ್ 31ರಂದು ಕರ್ನಾಟಕ ಬಂದ್ಗೆ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿವೆ. ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಇಂದು ಸಭೆ ಸೇರಿ ಬಂದ್ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಸುಮಾರು 35ಕ್ಕೂ ಅಧಿಕ ಸಂಘಟನೆಗಳಿಂದ ಕರ್ನಾಟಕ ಬಂದ್ಗೆ ಬೆಂಬಲ ನೀಡಿವೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ. ಆದರೆ, ಈ ಬಗ್ಗೆ ಪ್ರತಿಕ್ರಿಯಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ ನಾರಾಯಣ ಗೌಡ, ''ಎಲ್ಲದ್ದಕ್ಕೂ ಬಂದ್ ಮಾಡುವುದೇ ಪರಿಹಾರವಲ್ಲ, ಜನತೆ ಕೊರೊನಾ ಸಾಂಕ್ರಾಮಿಕದಿಂದ ಬಳಲಿದ್ದಾರೆ, ಪ್ರತಿಭಟನೆಗೆ ಬೇರೆ ಸ್ವರೂಪಗಳಿವೆ,'' ಎಂದಿದ್ದಾರೆ.
''ಎಂಇಎಸ್ ಸಂಘಟನೆ ನಿಷೇಧ ಹೇರಬೇಕು, ಇದು ಕರವೇ ಆಗ್ರಹವಾಗಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ, ಬಂದ್ ಮಾಡಬೇಡಿ ಎಂದು ನಾನು ಹೇಳಲು ಸಾಧ್ಯವಿಲ್ಲ, ಎಲ್ಲದ್ದಕ್ಕೂ ಬಂದ್ ಮಾಡುವುದೇ ಪರಿಹಾರವಲ್ಲ. ಡಿಸೆಂಬರ್ 31ರಂದು ಕರವೇ ಬೇರೆ ರೀತಿಯಲ್ಲಿ ರಾಜ್ಯದೆಲ್ಲೆಡೆ ಪ್ರತಿಭಟನೆ ನಡೆಸಲಿದೆ,
ಕಪ್ಪು ಬಾವುಟ ಪ್ರದರ್ಶನ, ರಾಜಭವನ ಮುತ್ತಿಗೆ, ಧಿಕ್ಕಾರ ಕೂಗುವುದು ಹೀಗೆ ಬೇರೆ ಬೇರೆ ಸ್ವರೂಪದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಬಹುದು. ಎಲ್ಲಾ ಕನ್ನಡ ಸಂಘಟನೆಗಳ ನಿಲುವು ಒಂದೇ, ಪ್ರತಿಭಟನೆ ಸ್ವರೂಪ ಬೇರೆ,'' ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ ನಾರಾಯಣ ಗೌಡ ತಿಳಿಸಿದರು.
ಶಿವಕುಮಾರ್ ನಾಯಕ್ ವಿರೋಧ: ತುರ್ತು ಸೇವೆಗಳನ್ನು ಹೊರತುಪಡಿಸಿ ಎಲ್ಲಾ ಸೇವೆಗಳನ್ನು ಬಂದ್ ಮಾಡಲು ವಾಟಾಳ್ ನಾಗರಾಜ್ ಕರೆ ನೀಡಿದ ವೇಳೆ ಹೋರಾಟಗಾರ ಶಿವಕುಮಾರ್ ನಾಯಕ್ ವಿರೋಧ ವ್ಯಕ್ತಪಡಿಸಿದರು. ಹೊಸ ವರ್ಷಾಚರಣೆ ಸಂದರ್ಭದಲ್ಲಿ ಬಂದ್ ಬೇಡ, ಬೇರೆ ದಿನಾಂಕ ಇರಲಿ ಎಂದು ಹೇಳಿದ್ದಾರೆ. ಆದರೆ, ಇದರಿಂದ ರೊಚ್ಚಿಗೆದ್ದ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಶಿವಕುಮಾರ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಕೊನೆಗೆ ಪೊಲೀಸರು ಮಧ್ಯಪ್ರವೇಶಿಸಿ ಘಟನಾ ಸ್ಥಳದಿಂದ ಶಿವಕುಮಾರ್ ನಾಯಕ್ ಅವರನ್ನು ದೂರಕ್ಕೆ ಕರೆದೊಯ್ದಿದ್ದಾರೆ.

ಸರ್ಕಾರಕ್ಕೆ ಡೆಡ್ ಲೈನ್: ಎಂಇಎಸ್ ಸಂಘಟನೆ ನಿಷೇಧಕ್ಕೆ ಆಗ್ರಹಿಸಲಾಗಿದೆ. ಆದರೆ, ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಸದನದಲ್ಲಿ ಈ ಬಗ್ಗೆ ಹೆಚ್ಚಿನ ಚರ್ಚೆಯಾಗಿಲ್ಲ, ಅಧಿಕೃತವಾಗಿ ಯಾವುದೇ ಹೇಳಿಕೆ ಬಂದಿಲ್ಲ. ಡಿಸೆಂಬರ್ 29ರೊಳಗೆ ಈ ಬಗ್ಗೆ ನಿರ್ಧಾರ ಪ್ರಕಟಿಸಲು ಡೆಡ್ ಲೈನ್ ನೀಡಲಾಗಿದೆ. ಡಿ.31ರಂದು ಸಿನಿಮಾ ಚಿತ್ರೀಕರಣ ಸೇರಿದಂತೆ ಎಲ್ಲಾ ಚಟುವಟಿಕೆಗಳು ಬಂದ್ ಆಗಲಿವೆ ಎಂದು ಸಾ.ರಾ ಗೋವಿಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಅವರು ಉಪಸ್ಥಿತರಿದ್ದರು.
ಲಾರಿ ಮಾಲೀಕರ ಸಂಘ, ಆಟೋ ಚಾಲಕರು, ಟ್ಯಾಕ್ಸಿ ಮಾಲೀಕರು, ಹೋಟೆಲ್ ಮಾಲೀಕರು, ಶಿಕ್ಷಣ ಸಂಸ್ಥೆ, ದಲಿತ ಸಂಘರ್ಷ ಸಮಿತಿ, ಕೈಗಾರಿಕಾ, ಬೀದಿಬದಿ ವ್ಯಾಪರಿಗಳು, ಸಾರಿಗೆ ನೌಕರರು, ಸಿನಿಮಾ, ಅಂಗಡಿ ಮಾಲೀಕರು, ಗಾರ್ಮೆಂಟ್ಸ್ ನೌಕರರು, ಸರ್ಕಾರಿ ನೌಕರರು, ಅಖಿಲ ಭಾರತ ಚಾಲಕರ ಸಂಘ, ಕಟ್ಟಡ ಕಾರ್ಮಿಕರ ಸಂಘ ಸೇರಿದಂತೆ ಸುಮಾರು 35 ಸಂಘಟನೆಗಳಿಂದ ಕರ್ನಾಟಕ ಬಂದ್ಗೆ ಬೆಂಬಲ ಸಿಕ್ಕಿದೆ.
ಕರವೇ ಬೇಡಿಕೆಗಳು:
* ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆ ವಿರೂಪಗೊಳಿಸಿದ ಎಲ್ಲ ಭಯೋತ್ಪಾದಕರ ಮೇಲೂ ಗೂಂಡಾಕಾಯ್ದೆಯಡಿ ಪ್ರಕರಣ ದಾಖಲಿಸಿ ಶಿಕ್ಷಿಸಬೇಕು. ಎಲ್ಲರನ್ನೂ ಮಹಾರಾಷ್ಟ್ರಕ್ಕೆ ಗಡಿಪಾರು ಮಾಡಬೇಕು.
* ಎಂಇಎಸ್ ಮತ್ತು ಶಿವಸೇನೆ ಸಂಘಟನೆಗಳನ್ನು ಈ ಕೂಡಲೇ ಕರ್ನಾಟಕದಲ್ಲಿ ನಿಷೇಧಿಸಬೇಕು. ಈ ಸಂಘಟನೆಗಳ ಮುಖಂಡರನ್ನು ಗಡಿಪಾರು ಮಾಡಬೇಕು. * ಬೆಳಗಾವಿಯಲ್ಲಿ, ಬೆಂಗಳೂರಿನಲ್ಲಿ ಮತ್ತು ರಾಜ್ಯದ ವಿವಿಧೆಡೆ ಬಂಧನಕ್ಕೆ ಒಳಗಾಗಿರುವ ಎಲ್ಲ ಕನ್ನಡಪರ ಕಾರ್ಯಕರ್ತರನ್ನೂ ಕೂಡಲೇ ಬಿಡುಗಡೆ ಮಾಡಬೇಕು. * ಮಹಾರಾಷ್ಟ್ರದಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟ, ಕನ್ನಡಿಗರ ಮೇಲೆ, ಕನ್ನಡಿಗರ ಆಸ್ತಿಪಾಸ್ತಿ ಮೇಲೆ ದಾಳಿ ನಡೆಸುತ್ತಿರುವ ಭಯೋತ್ಪಾದಕ ಶಕ್ತಿಗಳ ಮೇಲೆ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಒತ್ತಡ ಹೇರಬೇಕು.
"ರಾಜ್ಯ ಸರ್ಕಾರಕ್ಕೆ ಸ್ವಾಭಿಮಾನ ಎಂಬುವುದು ಇದೆ ಎಂದಾದರೆ ಸರ್ಕಾರ ಕೂಡಲೇ ಎಂಇಎಸ್ ನಿಷೇಧಿಸಲಿ. ಎಂಇಎಸ್ ಗೂಂಡಾಗಿರಿ ಮಾಡುತ್ತಿದೆ. ಕನ್ನಡಿಗರ ಸ್ವಾಭಿಮಾನವನ್ನು ಎಂಇಎಸ್ ಕೆರಳಿಸುತ್ತಿದೆ. ಕನ್ನಡಿಗರ ಮನೆಗೆ ಬೆಂಕಿ ಹಚ್ಚುತ್ತಿದ್ದಾರೆ. ಆದರೆ ಸರ್ಕಾರ ಎಲ್ಲನ್ನೂ ನೋಡಿಕೊಂಡು ಸುಮ್ಮನಿದೆ. ಇದು ರಣಹೇಡಿ ಸರ್ಕಾರ," ಎಂದು ಕರವೇ ಅಧ್ಯಕ್ಷ ಟಿಎ ನಾರಾಯಣಗೌಡ ಟೀಕೆ ಮಾಡಿದ್ದಾರೆ. (ಒನ್ಇಂಡಿಯಾ ಸುದ್ದಿ)
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications