ತೇಪೆ ಕೆಲಸ ಬೇಡ, ಸಂಪೂರ್ಣವಾಗಿ ಪರಿಷ್ಕರಣೆ ತಿರಸ್ಕರಿಸಿ; ನಾರಾಯಣ ಗೌಡ
ರಾಜ್ಯ ಸರ್ಕಾರ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಪಠ್ಯಕ್ಕೆ ತಂದಿರುವ ಪರಿಷ್ಕರಣೆಗಳನ್ನು ಕೂಡಲೇ ಕೈಬಿಟ್ಟು ಕಳೆದ ವರ್ಷದ ಪಠ್ಯಪುಸ್ತಕಗಳನ್ನೇ ನೀಡಬೇಕು. ಒಬ್ಬ ಕನ್ನಡ ವಿರೋಧಿಯು ಪರಿಷ್ಕರಣೆ ಮಾಡಿರುವ ಪಠ್ಯದಲ್ಲಿ ನೂರೆಂಟು ಹುಳುಕುಗಳಿವೆ.
ಅವುಗಳನ್ನು ಕನ್ನಡದ ಮಕ್ಕಳು ಓದುವ ಅವಶ್ಯಕತೆ ಇಲ್ಲ. ಸರ್ಕಾರ ಕೆಲವು ಆಕ್ಷೇಪಣೆಗಳಿಗೆ ಸಂಬಂಧಿಸಿದಂತೆ ತಿದ್ದುಪಡಿ ಮಾಡುವ ಭರವಸೆ ನೀಡಿದೆ. ಆದರೆ ಇಡೀ ಪರಿಷ್ಕರಣೆಯೇ ವಿಕೃತವಾಗಿದೆ. ಕನ್ನಡ ಬಾವುಟವಿದ್ದ ಚಿತ್ರವನ್ನು ತೆಗೆಯಲಾಗಿದೆ, ಕುವೆಂಪು, ದೇವನೂರು ಅವರ ಭಾವಚಿತ್ರಗಳನ್ನು ಕುತ್ಸಿತ ಮನಸ್ಥಿತಿಯಿಂದ ತೆಗೆಯಲಾಗಿದೆ.
ಕನ್ನಡ ರಾಜ್ಯೋತ್ಸವದ ಪಾಠವನ್ನೇ ಕಿತ್ತುಹಾಕಲಾಗಿದೆ. ಕನ್ನಡ ನೆಲದ ವೀರರಾಣಿ ಅಬ್ಬಕ್ಕನ ಚರಿತ್ರೆಯನ್ನು ತೆಗೆದುಹಾಕಲಾಗಿದೆ. ಕನಕದಾಸರು, ಪುರಂದರ ದಾಸರು, ಶಿಶುನಾಳ ಶರೀಫರ ಮತ್ತು ಇತರ ಭಕ್ತಪಂಥದ ಮಹಾನುಭಾವರ ಪರಿಚಯವಿದ್ದ ಲೇಖನ ತೆಗೆಯಲಾಗಿದೆ.

ಬಸವಣ್ಣನವರ ಚರಿತ್ರೆ ವಿರೂಪಗೊಳಿಸಲಾಗಿದೆ, ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಬಳಸಿದ್ದ ಸಂವಿಧಾನಶಿಲ್ಪಿ ಎಂಬ ಪದವನ್ನು ಕಿತ್ತುಹಾಕಲಾಗಿದೆ. ಇಷ್ಟು ಸಾಲದು ಎಂಬಂತೆ ಆಡಿಸು ನೋಡು ಬೀಳಿಸಿ ನೋಡು ಎಂಬ ಚಿ.ಉದಯಶಂಕರ್ ಅವರ ಕವಿತೆಯನ್ನು ಬಳಸಿ, ಆರ್. ಎನ್. ಜಯಗೋಪಾಲ್ ಅವರ ಹೆಸರನ್ನು ಬಳಸಲಾಗಿದೆ.
ಪರಿಷ್ಕರಣಾ ಸಮಿತಿಯವರ ಸ್ನೇಹಿತರೆಂಬ ಕಾರಣಕ್ಕೆ ವಿರೂಪಗೊಂಡ ಕೃತಿಚೌರ್ಯದ ಪದ್ಯ ಬಳಸಲಾಗಿದೆ. ಪಿ. ಲಂಕೇಶ್, ಸಾ. ರಾ. ಅಬೂಬಕರ್ ಸೇರಿದಂತೆ ಸುಮಾರು 25ಕ್ಕೂ ಹೆಚ್ಚು ನಾಡಿನ ಪ್ರಖ್ಯಾತ ಸಾಹಿತಿಗಳು, ಕವಿಗಳ ಲೇಖನ, ಪದ್ಯಗಳನ್ನು ಯಾವ ಕಾರಣವನ್ನೂ ಒದಗಿಸದೆ ಕಿತ್ತುಹಾಕಲಾಗಿದೆ. ಕನ್ನಡಿಗರಿಗೆ, ಕನ್ನಡ ಸಂಸ್ಕೃತಿಗೆ ಯಾವ ಸಂಬಂಧವೂ ಇಲ್ಲದ ಲೇಖಕರಿಗೆ ಮಣೆ ಹಾಕಲಾಗಿದೆ.

ಕನ್ನಡಿಗರ ಇತಿಹಾಸವನ್ನು ಕುಬ್ಜಗೊಳಿಸುವ ಪ್ರಯತ್ನ ನಡೆದಿದೆ. ಇಷ್ಟೆಲ್ಲ ಇದ್ದ ಮೇಲೆ, ಈ ಪರಿಷ್ಕರಣೆಗಳನ್ನು ಇಟ್ಟುಕೊಳ್ಳುವುದರಲ್ಲಿ ಯಾವ ಅರ್ಥವೂ ಇಲ್ಲ. ಎಷ್ಟು ತೇಪೆ ಹಾಕಿದರೂ ಅದರಿಂದ ಯಾವುದೇ ಪ್ರಯೋಜನವಿಲ್ಲ. ಹೀಗಾಗಿ ತೇಪೆ ಕೆಲಸ ಕೈಬಿಟ್ಟು ಇಡಿಯಾಗಿ ಪರಿಷ್ಕರಣೆಯನ್ನು ಸರ್ಕಾರ ತಿರಸ್ಕರಿಸಬೇಕು. ತಡಮಾಡದೇ ಈ ವರ್ಷ ವಿದ್ಯಾರ್ಥಿಗಳಿಗೆ ಹಳೆಯ ಪಠ್ಯವನ್ನೇ ನೀಡಬೇಕು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ವಿವೇಕವುಳ್ಳವರು, ವಿಚಾರಶೀಲರು. ಇಡೀ ರಾಜ್ಯದ ಜನರು ಒಂದು ಧ್ವನಿಯಲ್ಲಿ ಈ ತಿರುಚಿದ ಪಠ್ಯವನ್ನು ವಿರೋಧಿಸುತ್ತಿದ್ದಾರೆ. ಜನರ ಧ್ವನಿಗೆ ಬೆಲೆ ಕೊಡುವುದು ಪ್ರಜಾಪ್ರಭುತ್ವವಾದಿ ಸರ್ಕಾರದ ಕರ್ತವ್ಯ. ಮುಖ್ಯಮಂತ್ರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಕೋರುತ್ತೇನೆ ಎಂದು ನಾರಾಯಣ ಗೌಡ ಹೇಳಿದ್ದಾರೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ












Click it and Unblock the Notifications