ಮಾರ್ಚ್ 19ರಿಂದ 'ಕರವೇ' ಸುದ್ದಿ ವಾಹಿನಿ ಆರಂಭ
ಕರ್ನಾಟಕ ರಕ್ಷಣಾ ವೇದಿಕೆಯನ್ನು ಸಾಮಾನ್ಯವಾಗಿ ಕರವೇ ಎಂದು ಸಂಕ್ಷಿಪ್ತವಾಗಿ ಕರೆಯುತ್ತಾರೆ. ಇದೀಗ 'ಕರವೇ' ಹೆಸರಿನಲ್ಲಿ ಸುದ್ದಿ ವಾಹಿನಿಯೊಂದು ಕರ್ನಾಟಕದಲ್ಲಿ ಆರಂಭವಾಗುತ್ತಿದ್ದು ಮಾರ್ಚ್ 19ರಂದು ಉದ್ಘಾಟನೆಯಾಗಲಿದೆ.
ಬೆಂಗಳೂರು, ಮಾರ್ಚ್ 16: ಕರವೇ ಅಂದ್ರೆ ಸಾಕು ಎಲ್ಲರಿಗೂ ಥಟ್ಟನೆ ನೆನಪಾಗುವುದು ಕರ್ನಾಟಕ ರಕ್ಷಣಾ ವೇದಿಕೆ. ಕನ್ನಡ ನಾಡಿನ ಪರವಾಗಿ, ಕನ್ನಡಿಗರ ಪರವಾಗಿ ಧ್ವನಿಯೆತ್ತುವ ಕರ್ನಾಟಕ ರಕ್ಷಣಾ ವೇದಿಕೆಯು ಕರವೇ ಅಂತಲೇ ಹೆಚ್ಚು ಜನಪ್ರಿಯ.
ವಾಟ್ಸಾಪ್ ಬಳಸುವ ಕನ್ನಡಿಗರಿಗೆ ಗುರುವಾರ ಬೆಳಗ್ಗೆ ಒಂದು ಅಚ್ಚರಿ ಮೂಡಿಸುವ ಸಂದೇಶವೊಂದು ಹರಿದಾಡತೊಡಗಿತು. ಅದೇನೆಂದರೆ, ಕರವೇ ಹೆಸರಿನ ಟಿವಿ ವಾಹಿನಿಯೊಂದು ಶೀಘ್ರದಲ್ಲೇ ಬರಲಿದೆ ಎಂಬ ಸಂದೇಶ. ಅದಕ್ಕೆ ಬೆಂಬಲವಾಗಿ ಟಿವಿ ವಾಹಿನಿಯು ಮಾರ್ಚ್ 19ರಂದು ಉದ್ಘಾಟನೆಗೊಳ್ಳಲಿದೆ ಎಂಬ ಮಾಹಿತಿ, ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆಯ ಫೋಟೋದೊಂದಿಗೆ ಎಲ್ಲೆಡೆ ಹರಿದಾಡುತ್ತಿತ್ತು.

ಇನ್ನು, ವಾಹಿನಿಯ ಧ್ಯೇಯವಾಕ್ಯವಾಗಿ 'ಕ್ರಾಂತಿಯ ನಡೆ' ಎಂಬ ಸಾಲುಗಳನ್ನೇ ಆಯ್ಕೆ ಮಾಡಲಾಗಿದೆ.
ಈ ಕುರಿತು ಮಾಹಿತಿಗಾಗಿ ಕರವೇ ಸಂಘಟನೆ ಕಡೆಯವರನ್ನು 'ಒನ್ ಇಂಡಿಯಾ' ಸಂಪರ್ಕಿಸಿತು. "ಮಾರ್ಚ್ 19ರಂದು ಚಾನಲ್ ಉದ್ಘಾಟನೆಯಾಗಲಿದೆ. ಇದೊಂದು ರಾಜ್ಯ ಮಟ್ಟದ ವಾಹಿನಿಯಾಗಲಿದ್ದು 13-15 ಜಿಲ್ಲೆಗಳಲ್ಲಿ ಕಾರ್ಯಾರಂಭ ಮಾಡಲಿದೆ. ಮಾಜಿ ಪ್ರಧಾನಿಗಳಾದ ದೇವೇಗೌಡರು ವಾಹಿನಿಯನ್ನು ಉದ್ಘಾಟನೆ ಮಾಡಲಿದ್ದಾರೆ. ಕರವೇ ರಾಜ್ಯಾಧ್ಯಕ್ಷರಾದ ಟಿ.ಎ ನಾರಾಯಣ ಗೌಡರು ವಾಹಿನಿಯ ಲಾಂಛನವನ್ನು ಬಿಡುಗಡೆ ಮಾಡಲಿದ್ದಾರೆ," ಎಂದು ಕರವೇಯ ವೀರೇಶ್ ಮಾಹಿತಿ ನೀಡಿದ್ದಾರೆ.
ಇನ್ನು ಜಗದೀಶ್ ನಾಗರಾಜ್ ಮತ್ತು ಅವರ ಜತೆಗಿರುವವರು ಈ ವಾಹಿನಿ ಆರಂಭಿಸುತ್ತಿದ್ದಾರೆ. ಇದಕ್ಕೂ ಕರ್ನಾಟಕ ರಕ್ಷಣಾ ವೇದಿಕೆಗೂ ಸಂಬಂಧವಿಲ್ಲ. ನಮ್ಮ ಸಂಘಟನೆಯ ಹಿತೈಷಿಗಳಾಗಿರುವುದರಿಂದ ನಾರಾಯಣ ಗೌಡರ ಅನುಮತಿ ಪಡೆದು ಚಾನಲ್ ಆರಂಭಿಸುತ್ತಿದ್ದಾರೆ ಎಂದು ವೀರೇಶ್ ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗಳು ಸಮೀಪಿಸಿತ್ತಿರುವಂತೆ ಹೊಸ ಹೊಸ ಸುದ್ದಿ ವಾಹಿನಿಗಳು ಆರಂಭವಾಗುತ್ತಿದ್ದು ಇದೇ ಸಾಲಿಗೆ ಕರವೇಯೂ ಸೇರ್ಪಡೆಯಾಗಲಿದೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications