ವಿಡಿಯೊ ಮಾಡಿಸಿಕೊಂಡ ಸಾಹುಕಾರನಿಗೆ ಟಿಕೆಟ್, ವಿಡಿಯೊ ನೋಡಿದ ಸಾಹುಕಾರನಿಗಿಲ್ಲ: ಇದು ಭಾರತೀಯ ಜೋಕರ್ಸ್ ಪಾರ್ಟಿ ಎಂದ ಅನುಪಮ ಶೆಣೈ
ಬೆಂಗಳೂರು, ಏಪ್ರಿಲ್ 14: ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲ ದಿನಗಳು ಬಾಕಿ ಇವೆ. ಎರಡನೇ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿಯಲ್ಲಿ ಬಂಡಾಯದ ಬೆಂಕಿ ಹೊತ್ತಿಕೊಂಡಿದೆ. ಮಾಜಿ ಡಿಸಿಎಂ ಹಾಗೂ ಬಿಜೆಪಿ ಎಂಎಲ್ಸಿ ಲಕ್ಷ್ಮಣ ಸವದಿ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದೆ. ಅವರು ಕಾಂಗ್ರೆಸ್ ಕಡೆಗೆ ಮುಖ ಮಾಡಿದ್ದಾರೆ.
ಕಾಂಗ್ರೆಸ್ನಿಂದ ಬಿಜೆಪಿಗೆ ಸೇರ್ಪಡೆಗೊಂಡಿರುವ ರಮೇಶ್ ಜಾರಕಿಹೊಳಿ ಹಾಗೂ ಅವರ ನಿಷ್ಠಾವಂತರಿಗೆ ಬಿಜೆಪಿ ಮಣೆ ಹಾಕಿದೆ. ಅಥಣಿಯಿಂದ ಮಹೇಶ್ ಕುಮಠಳ್ಳಿಗೆ ಬಿಜೆಪಿ ಟಿಕೆಟ್ ನೀಡಿದೆ. ಮಹೇಶ್ ಕುಮಠಳ್ಳಿ ಅವರು ರಮೇಶ್ ಜಾರಕಿಹೊಳಿ ಅವರ ನಿಷ್ಠಾವಂತರು. ರಮೇಶ್ ಜಾರಕಿಹೊಳಿ ಅವರು ಗೋಕಾಕದಿಂದ ಟಿಕೆಟ್ ಪಡೆದುಕೊಳ್ಳುವಲ್ಲಿ ಸಫಲರಾಗಿದ್ದಾರೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ಮಾಜಿ ಐಪಿಎಸ್ ಅಧಿಕಾರಿ ಅನುಪಮ ಶೆಣೈ ಅವರು, 'Full HDಯಲ್ಲಿ ವಿಡಿಯೋ ಮಾಡಿಸಿಕೊಂಡ ಸಾಹುಕಾರನಿಗೆ ಟಿಕೆಟ್ ಉಂಟು. ವಿಡಿಯೋ ನೋಡಿದ ಸವದಿಗೆ ಟಿಕೆಟ್ ಇಲ್ಲ! ಜನರಿಗೆ ಯಾರು ಹೆಚ್ಚು ಮನರಂಜನೆ ನೀಡಿದ್ದಾರೆ ಎಂಬ ಆಧಾರದ ಮೇಲೆ ಟಿಕೆಟ್ ನೀಡಿರಬಹುದು' ಎಂದು ವ್ಯಂಗ್ಯವಾಡಿದ್ದಾರೆ. ಬಿಜೆಪಿಗೆ 'ಭಾರತೀಯ ಜೋಕರ್ಸ್ ಪಾರ್ಟಿ' ಎಂದೂ ಅವರು ಮೂದಲಿಸಿದ್ದಾರೆ.
ಇದನ್ನು ರಿಟ್ವೀಟ್ ಮಾಡಿಕೊಂಡಿರುವ ಟ್ವಿಟಿಗರೊಬ್ಬರು ಎಂಬುವವರು, 'ಕರ್ಮ ಕಾಂಡ ಬಿಜೆಪಿ ದು...ಅವರಾ ಪ್ರಕಾರ ಪ್ರಾಕ್ಟಿಕಲ್ಗೆ ಮಾನ್ಯತೆ ಜಾಸ್ತಿ ಥಿಯರಿಗಿಂತ' ಎಂದು ಟ್ರೋಲ್ ಮಾಡಿದ್ದಾರೆ.
ಬಿಜೆಪಿಗೆ ಲಕ್ಷ್ಮಣ ಸವದಿ ಗುಡ್ಬೈ
ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷದ ಟಿಕೆಟ್ ದೊರೆಯದಿದ್ದಕ್ಕಾಗಿ ಅಸಮಾಧಾನಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರು ಕೇಸರಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಮತ್ತು ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬುಧವಾರ ಘೋಷಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದ ಹಾಲಿ ಶಾಸಕ ಮಹೇಶ ಕುಮಠಳ್ಳಿ ಅವರಿಗೆ ಬಿಜೆಪಿಯಿಂದ ಟಿಕೆಟ್ ದೊರೆತಿದೆ. ಲಕ್ಷ್ಮಣ ಸವದಿ ಅವರು ಅಥಣಿಯಿಂದ ಮೂರು ಬಾರಿ ಶಾಸಕರಾಗಿದ್ದರು.
ಈ ವಿಚಾರವಾಗಿ ಅಥಣಿಯಲ್ಲಿ ಮಾತನಾಡಿರುವ ಅವರು, 'ನಾನು ಖಂಡಿತವಾಗಿಯೂ ನಿರ್ಧಾರ ತೆಗೆದುಕೊಂಡಿದ್ದೇನೆ, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ' ಎಂದು ಸವದಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಅವರು ಕಾಂಗ್ರೆಸ್ ಪಕ್ಷವನ್ನು ಸೇರುವುದು ಬಹುತೇಕ ಖಚಿವಾಗಿದೆ. ಗುರುವಾರ ಸಂಜೆ ಅಥಣಿಯಲ್ಲಿ ಬೆಂಬಲಿಗರ ಸಭೆ ನಡೆಸಿರುವ ಅವರು, ಮಾಜಿ ಸಿಎಂ ಸಿದ್ದರಾಮಯ್ಯನವರನ್ನು ಹಾಡಿ ಹೊಗಳಿದ್ದಾರೆ. ಇಂದು ಬೆಂಗಳೂರಿಗೆ ಆಗಮಿಸಿ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರ ಜೊತೆ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ
ಕಳೆದ 20 ವರ್ಷಗಳಿಂದ ತಮಗೆ ಸಹಕಾರ ನೀಡಿದ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದ ಅವರು, ಅವರ ಎಲ್ಲಾ ಪ್ರಯತ್ನಗಳು ಯಶಸ್ವಿಯಾಗಲಿ ಎಂದು ಹಾರೈಸಿದರು.
ಬಿಜೆಪಿಯಿಂದ ತಮಗೆ ಆಗಿರುವ ಅನ್ಯಾಯ ಸ್ವೀಕಾರಾರ್ಹವಲ್ಲ ಎಂದು ಹೇಳಿದ ಸವದಿ, ಅಥಣಿಯಿಂದ ಪಕ್ಷದ ಅಭ್ಯರ್ಥಿಯಾಗುವುದಿಲ್ಲ ಎಂದು ಪಕ್ಷದ ವರಿಷ್ಠರು ಐದಾರು ತಿಂಗಳ ಹಿಂದೆಯೇ ಹೇಳಬಹುದಿತ್ತು ಎಂದು ಹೇಳಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ಗೆ ಹೋಗುತ್ತಿದ್ದಾಗ ಅವರನ್ನು ಬಿಜೆಪಿಗೆ ಕರೆತಂದದ್ದು ನಾನು ಮತ್ತು ಸಿ ಸಿ ಪಾಟೀಲರು ಎಂದು ಹೇಳಿದರು. ನಾವು ಬೊಮ್ಮಾಯಿ ಅವರನ್ನು ಯಡಿಯೂರಪ್ಪ ಅವರ ನಿವಾಸಕ್ಕೆ ಕರೆದೊಯ್ದು, ಅವರಿಗೆ ಅಸೆಂಬ್ಲಿ ಸ್ಥಾನಕ್ಕೆ ಉಮೇದುವಾರಿಕೆ ನೀಡಿದ್ದೆವು. ಅವರು ಮಂತ್ರಿಯಾದರು ಮತ್ತು ನಂತರ ಮುಖ್ಯಮಂತ್ರಿಯಾದರು ಎಂದು ಅವರು ತಿಳಿಸಿದರು.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications