ವಿಧಾನ ಪರಿಷತ್ನ 24 ಮಂದಿ ಸದಸ್ಯರು ನಿವೃತ್ತಿ
ಬೆಂಗಳೂರು, ಜ. 05: ಕರ್ನಾಟಕ ವಿಧಾನ ಪರಿಷತ್ನ 25 ಮಂದಿ ಸದಸ್ಯರು ಮಂಗಳವಾರ (ಜನವರಿ 05) ನಿವೃತ್ತಿ ಹೊಂದಿದ್ದಾರೆ. ಆಡಳಿತಾರೂಢ ಕಾಂಗ್ರೆಸ್ನ ಹನ್ನೆರಡು ಮಂದಿ, ಬಿಜೆಪಿಯ ಏಳು, ಜೆಡಿಎಸ್ನ ನಾಲ್ವರು ಹಾಗೂ ಒಬ್ಬ ಪಕ್ಷೇತರ ಸದಸ್ಯರು ಇಂದು ನಿವೃತ್ತರಾದರು. ಜೆಡಿಎಸ್ ಸದಸ್ಯರಾಗಿದ್ದ ಎಂ.ಆರ್.ಹುಲಿನಾಯ್ಕರ್ ಬಿಜೆಪಿಗೆ ಪಕ್ಷಾಂತರಗೊಳ್ಳುವ ಉದ್ದೇಶದಿಂದ ಈಗಾಗಲೇ ತಮ್ಮ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ನ ಸದಸ್ಯರಾದ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎಸ್.ಆರ್.ಪಾಟೀಲ್, ಅಲ್ಲಮ್ಪ್ರಭು ಪಾಟೀಲ್, ವೀರಕುಮಾರ್ ಪಾಟೀಲ್, ಘೋಟ್ನೇಕರ್ ಶ್ರೀಕಾಂತ್ ಲಕ್ಷ್ಮಣ್, ಶ್ರೀನಿವಾಸ್ಮಾನೆ, ಛಬ್ಬೀ ನಾಗರಾಜ್, ಕೆ.ಪ್ರತಾಪ್ಚಂದ್ರಶೆಟ್ಟಿ, ಎ.ವಿ.ಗಾಯತ್ರಿ ಶಾಂತೇಗೌಡ, ದಯಾನಂದ ರೆಡ್ಡಿ, ನಸೀರ್ ಅಹಮದ್, ಟಿ.ಜಾನ್ ಹಾಗೂ ಧರ್ಮಸೇನಾ ನಿವೃತ್ತಿಯಾದರು.
ಬಿಜೆಪಿ ಸದಸ್ಯರಾದ ಬಸವರಾಜ್ ಹಾವಗೆಪ್ಪ ಪಾಟೀಲ್, ಜಿ.ಎಸ್.ನ್ಯಾಮಗೌಡ, ಕವಟಗಿಮಠ್ ಮಹಂತೇಶ್ ಮಲ್ಲಿಕಾರ್ಜುನ್, ಆಚಾರ್ ಹಾಲಪ್ಪ ಬಸಪ್ಪ, ಮೃತ್ಯುಂಜಯ ಜಿನಗ, ಆರ್.ಕೆ.ಸಿದ್ದರಾಮಣ್ಣ, ಕೋಟಾ ಶ್ರೀನಿವಾಸ ಪೂಜಾರಿ ಅವರು ನಿವೃತ್ತಿ ಹೊಂದಿದ್ದಾರೆ.

ಜೆಡಿಎಸ್ ಸದಸ್ಯರಾದ ಪಟೇಲ್ ಶಿವರಾಮ್, ಜಿ.ರಾಮಕೃಷ್ಣ, ಇ.ಕೃಷ್ಣಪ್ಪ, ಎಸ್.ನಾಗರಾಜು ಅವರು ನಿವೃತ್ತಿಯಾಗಿದ್ದು, ಜೆಡಿಎಸ್ ಸದಸ್ಯರಾಗಿದ್ದ ಎಂ.ಆರ್.ಹುಲಿನಾಯ್ಕರ್ ಬಿಜೆಪಿಗೆ ಪಕ್ಷಾಂತರಗೊಳ್ಳುವ ಉದ್ದೇಶದಿಂದ ಈಗಾಗಲೇ ತಮ್ಮ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಇಪ್ಪತ್ತೈದು ಸದಸ್ಯರ ಪೈಕಿ ಒಂಭತ್ತು ಮಂದಿ ಮರು ಆಯ್ಕೆಯಾಗಿದ್ದು, ಐದು ಮಂದಿ ಪರಾಭವಗೊಂಡಿದ್ದಾರೆ. ಉಳಿದ ಕೆಲವರಿಗೆ ಟಿಕೆಟ್ ಸಿಗದೆ ಚುನಾವಣಾ ಸ್ಪರ್ಧೆಯಿಂದ ದೂರ ಸರಿದಿದ್ದರೆ ಇನ್ನೂ ಕೆಲವರು ಚುನಾವಣಾ ಸ್ಪರ್ಧೆಯಲ್ಲಿದ್ದರೂ ಕೊನೆ ಗಳಿಗೆಯಲ್ಲಿ ನಿವೃತ್ತರಾಗಿದ್ದರು. ಮತ್ತೆ ಕೆಲವರು ಬಂಡಾಯವಾಗಿ ಸ್ಪರ್ಧಿಸಿ ಸೋಲು ಕಂಡಿದ್ದಾರೆ.
ಗೆದ್ದವರು: ಕಾಂಗ್ರೆಸ್ನ ಸಚಿವ ಎಸ್.ಆರ್.ಪಾಟೀಲ್, ಘೋಟ್ನೇಕರ್ ಶ್ರೀಕಾಂತ್ ಲಕ್ಷ್ಮಣ್, ಮಾನೇ ಶ್ರೀನಿವಾಸ್, ಕೆ.ಪ್ರತಾಪಚಂದ್ರ ಶೆಟ್ಟಿ, ರಘು ಆಚಾರ್, ಹಾಗೂ ಧರ್ಮಸೇನಾ, ಬಿಜೆಪಿಯಿಂದ ಕವಟಗಿಮಠ ಮಹಂತೇಶ್ಮಲ್ಲಿಕಾರ್ಜುನ, ಕೋಟಾ ಶ್ರೀನಿವಾಸ ಪೂಜಾರಿ, ಜೆಡಿಎಸ್ನ ಸಂದೇಶ್ ನಾಗರಾಜ್ ಅವರು ಸೇರಿದ್ದಾರೆ.
ಹೊಸದಾಗಿ ವಿಧಾನ ಪರಿಷತ್ಗೆ ಆಯ್ಕೆಯಾಗಿರುವ ಇಪ್ಪತ್ತೈದು ಮಂದಿ ಅಭ್ಯರ್ಥಿಗಳು ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸುವುದು ಬಾಕಿ ಉಳಿದಿದೆ. ಕಾಂಗ್ರೆಸ್ನಿಂದ ಹದಿಮೂರು, ಬಿಜೆಪಿಯಿಂದ ಆರು ಹಾಗೂ ಜೆಡಿಎಸ್ನಿಂದ ನಾಲ್ಕು, ಪಕ್ಷೇತರರು ಇಬ್ಬರು ಅಭ್ಯರ್ಥಿಗಳು ಚುನಾಯಿತರಾಗಿದ್ದಾರೆ.
ಕಾಂಗ್ರೆಸ್ನಿಂದ ವಿಜಯ್ಸಿಂಗ್, ಆರ್.ಪ್ರಸನ್ನಕುಮಾರ್, ಎಂ.ಎ.ಗೋಪಾಲಸ್ವಾಮಿ, ಎಂ.ನಾರಾಯಣಸ್ವಾಮಿ, ಎಸ್.ರವಿ, ಬಿಜೆಪಿಯಿಂದ ಬಿ.ಜಿ.ಪಾಟೀಲ್, ಪ್ರದೀಪ್ ಶೆಟ್ಟರ್, ಎಂ.ಕೆ.ಪ್ರಾಣೇಶ್, ಎಂ.ಪಿ.ಸುನೀಲ್ ಸುಬ್ರಮಣಿ, ಜೆಡಿಎಸ್ನಿಂದ ಸಿ.ಆರ್.ಮನೋಹರ್, ಎನ್.ಅಪ್ಪಾಜಿಗೌಡ, ಕಾಂತರಾಜ್ ಅವರು ಮೊದಲ ಬಾರಿಗೆ ವಿಧಾನ ಪರಿಷತ್ ಪ್ರವೇಶ ಮಾಡಲಿದ್ದಾರೆ.
ಪಕ್ಷೇತರರಾದ ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್, ವಿವೇಕ್ರಾವ್ ವಸಂತರಾವ್ ಕೂಡ ವಿಧಾನ ಪರಿಷತ್ಗೆ ಮೊದಲ ಬಾರಿಗೆ ಪ್ರವೇಶ ಮಾಡಲಿದ್ದಾರೆ. ( ಒನ್ ಇಂಡಿಯಾ ಸುದ್ದಿ)
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ











Click it and Unblock the Notifications