ಕರ್ನಾಟಕ: ಇಂದು ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ
ಬೆಂಗಳೂರು, ಜೂನ್ 18: ಕೊರೊನಾ ಸೋಂಕಿನ ಆತಂಕದ ಬೆನ್ನಲ್ಲೇ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಸಿದ್ಧರಿದ್ದಾರೆ. ಇಂದು ಪರೀಕ್ಷೆ ಬರೆಯಲಿದ್ದಾರೆ. ಮಾರ್ಚ್ನಲ್ಲಿ ನಡೆಯಬೇಕಿದ್ದ ಇಂಗ್ಲಿಷ್ ಪರೀಕ್ಷೆಯನ್ನು ಕೊವಿಡ್-19 ರೋಗದಿಂದಾಗಿ ಮುಂದೂಡಲ್ಪಟ್ಟಿತ್ತು.
ಸುಮಾರು 1116ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು , ವಿದ್ಯಾರ್ಥಿಗಳ ಸುರಕ್ಷತೆಗಾಗಿ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಾಸ್ಕ್ಕಡ್ಡಾಯವಾಗಿದ್ದು , ಪರೀಕ್ಷಾ ಕೇಂದ್ರದ ಹೊರಗೆ ಕೂಡ ಗುಂಪು ಸೇರದಂತೆ ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದೆ.
ಪರೀಕ್ಷೆ ನಡೆಸುವ ಬಗ್ಗೆ ಬೇಕು-ಬೇಡಗಳ ಚರ್ಚೆ ನಡೆಯುತ್ತಲೇ ಇದೆ. ಸುಮಾರು 5.95 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಹೊರ ಜಿಲ್ಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 678 ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿಕೊಂಡಿದ್ದಾರೆ.

ಸೋಂಕು ಹೆಚ್ಚಾಗಿರುವ ಬಳ್ಳಾರಿ, ಗುಲ್ಬರ್ಗ, ರಾಯಚೂರು, ಉಡುಪಿ ಸೇರಿದಂತೆ ಇತರೆಡೆ ವ್ಯಾಪಕ ಬಂದೋಬಸ್ತ್ ಮಾಡಲಾಗಿದೆ. ಕೆಲ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರ ಬದಲಾವಣೆಗೆ ಅರ್ಜಿ ಸಲ್ಲಿಸಿದ್ದು, ತಾಂತ್ರಿಕ ಕಾರಣದಿಂದಾಗಿ ಕೇಂದ್ರ ಬದಲಾವಣೆಯಾಗದಿದ್ದ ಪಕ್ಷದಲ್ಲಿ ಅಥವಾ ಹೋಗಲು ಸಾಧ್ಯವಾಗದಿದ್ದರೆ ಅಂತಹ ವಿದ್ಯಾರ್ಥಿಗಳು ಮೂಲ ಕೇಂದ್ರಗಳಿಗೆ ಹೋಗಿ ಪರೀಕ್ಷೆ ಬರೆಯಬಹುದಾಗಿದೆ ಎಂದು ತಿಳಿಸಲಾಗಿದೆ.
ಎಲ್ಲ ಕೊಠಡಿಗಳನ್ನು ಈಗಾಗಲೇ ಸ್ಯಾನಿಟೈಸರ್ ಮಾಡಲಾಗಿದೆ. ವಿದ್ಯಾರ್ಥಿಗಳು ಥರ್ಮಲ್ ಸ್ಕ್ಯಾನಿಂಗ್ ತಪಾಸಣೆಗಾಗಿ ಆಶಾ ಕಾರ್ಯಕರ್ತೆಯರನ್ನು ಮತ್ತು ನರ್ಸ್ಗಳನ್ನು ನೇಮಿಸಲಾಗಿದೆ.
-
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು












Click it and Unblock the Notifications