ಈ ಬಾರಿಗಿಂತ ಕಳೆದ ವರ್ಷವೇ ಇಂಗ್ಲೀಷ್ ಪರೀಕ್ಷೆಗೆ ಗೈರಾದವರ ಸಂಖ್ಯೆ ಹೆಚ್ಚು
ಬೆಂಗಳೂರು, ಜೂನ್ 19: ಕೊರೊನಾ ವೈರಸ್ ಆತಂಕದ ನಡುವೆ ನಿನ್ನೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿದೆ. ಲಾಕ್ಡೌನ್ನಿಂದ ಇಂಗ್ಲೀಷ್ ವಿಷಯ ಉಳಿದುಕೊಂಡಿದ್ದು, ಆ ಪರೀಕ್ಷೆ ಸಹ ಕೊನೆಗೂ ಮುಗಿದಿದೆ. ಆದರೆ, ನಿನ್ನೆಯ ಪರೀಕ್ಷೆಗೆ ರಾಜ್ಯದ 27022 ಹಾಜರಾಗಿಲ್ಲ.
Recommended Video
ಕಲಾ ವಿಭಾಗ, ವಿಜ್ಞಾನ ವಿಭಾಗ ಹಾಗೂ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಸೇರಿ ಒಟ್ಟು 5,95,997 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. ಆದರೆ, ಇದರಲ್ಲಿ 5,68,975 ಮಾತ್ರ ಪರೀಕ್ಷೆ ಬರೆದಿದ್ದರು. 27022 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು. ಕೊರೊನಾ ಭೀತಿ ಇರುವ ಕಾರಣ ಹೆಚ್ಚಿನ ವಿದ್ಯಾರ್ಥಿಗಳು ಆತಂಕದಲ್ಲಿ ಪರೀಕ್ಷೆ ಬರೆದಿಲ್ಲ ಎಂದು ಅನೇಕರು ಊಹಿಸಿಕೊಂಡಿದ್ದರು.
ಆದರೆ, ಅಚ್ಚರಿ ಅಂದರೆ, ಈ ವರ್ಷ ಕಳೆದ ವರ್ಷಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ಇಂಗ್ಲೀಷ್ ಪರೀಕ್ಷೆ ಬರೆದಿದ್ದಾರೆ. ಕೊರೊನಾ ವೈರಸ್ ಆತಂಕದ ನಡುವೆ ಪರೀಕ್ಷೆ ನಡೆಸಿದ್ದರೂ, ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಕಳೆದ ವರ್ಷಕ್ಕಿಂತ ಹೆಚ್ಚಿದ್ದಾರೆ.

ಕಳೆದ ಬಾರಿ 36,642 ವಿದ್ಯಾರ್ಥಿಗಳು ಗೈರು
ಈ ವರ್ಷಕ್ಕಿಂತ ಕಳೆದ ಬಾರಿ ಪರೀಕ್ಷೆ ಬರೆಯದ ವಿದ್ಯಾರ್ಥಿಗಳು ಹೆಚ್ಚಿದ್ದಾರೆ. ಈ ವರ್ಷ 27022 ವಿದ್ಯಾರ್ಥಿಗಳು ಇಂಗ್ಲೀಷ್ ಪರೀಕ್ಷೆ ಬರೆದಿಲ್ಲ. ಆದರೆ, ಕಳೆದ ವರ್ಷ 36,642 ವಿದ್ಯಾರ್ಥಿಗಳು ಇಂಗ್ಲೀಷ್ ಪರೀಕ್ಷೆ ಗೈರಾಗಿದ್ದರು. ಕಳೆದ ವರ್ಷ 6,71,635 ವಿದ್ಯಾರ್ಥಿಗಳ ಪೈಕಿ 6,34,993 ವಿದ್ಯಾರ್ಥಿಗಳು ಪರೀಕ್ಷೆಗೆ ಬಂದಿದ್ದರು. ಹೀಗಾಗಿ ಈ ವರ್ಷ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಶೇಕಡ ಪ್ರಮಾಣಕ್ಕೆ 2% ಹೆಚ್ಚಿದೆ.

ಕೊರೊನಾ ಕಾರಣ ಎನ್ನಬಹುದೇ?
ಈ ವರ್ಷ ಪರೀಕ್ಷೆಗೆ ಬಾರದ ವಿದ್ಯಾರ್ಥಿಗಳ ಸಂಖ್ಯೆ 27022 ಇದೆ. ಹೀಗಾಗಿ ಅನೇಕರು ಮಕ್ಕಳ ಕೊರೊನಾ ಭಯದ ನಡುವೆ ಪರೀಕ್ಷೆ ಬರೆದಿಲ್ಲ ಎಂದು ಹೇಳಿತ್ತಿದ್ದಾರೆ. ಆದರೆ, ಕಳೆದ ವರ್ಷದ ಅಂಕಿ ಸಂಖ್ಯೆ ನೋಡಿದರೆ, ಇದನ್ನು ಕೊರೊನಾ ಮೇಲೆ ಹಾಕಲು ಆಗುವುದಿಲ್ಲ. ಏಕೆಂದರೆ, ಕಳೆದ ವರ್ಷ ಕೊರೊನಾ ಇಲ್ಲದೆಯೂ 36,642 ಮಕ್ಕಳು ಪರೀಕ್ಷೆ ಬರೆದಿಲ್ಲ.

ಕೊಡಗಿನಲ್ಲಿ ಪ್ರಮಾಣ ಕಡಿಮೆ
ಕರ್ನಾಟಕದಲ್ಲಿ ಕೊಡಗಿನಲ್ಲಿ ಪರೀಕ್ಷೆ ಬರೆಯದ ವಿದ್ಯಾರ್ಥಿಗಳ ಸಮಖ್ಯೆ ಕಡಿಮೆ ಇದೆ. ಕೋಲಾರ 730, ಮಂಡ್ಯ 682, ಯಾದಗಿರಿ 568, ಶಿವಮೊಗ್ಗ 538, ಹಾಸನ 535, ದಕ್ಷಿಣ ಕನ್ನಡ 466, ಕೊಪ್ಪಳ 463, ಚಿಕ್ಕಬಳ್ಳಾಪುರ 442, ಉತ್ತರ ಕನ್ನಡ 435, ಚಾಮರಾಜನಗರ 268, ಉಡುಪಿ 163, ಕೊಡಗು 140 ವಿದ್ಯಾರ್ಥಿಗಳು ನಿನ್ನೆಯ ಇಂಗ್ಲೀಷ್ ಪರೀಕ್ಷೆಗೆ ಹಾಜರಾಗಿಲ್ಲ.

ಕಲಬುರಗಿಯಲ್ಲಿ 1750 ವಿದ್ಯಾರ್ಥಿಗಳು ಚಕ್ಕರ್
ಕರ್ನಾಟಕದ 12 ಜಿಲ್ಲೆಗಳಲ್ಲಿ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿಲ್ಲ. ಕಲಬುರಗಿ 1750, ಬೆಂಗಳೂರು ದಕ್ಷಿಣ 1675, ಬೆಂಗಳೂರು ಉತ್ತರ 1646, ತುಮಕೂರು 1457, ಮೈಸೂರು 1401, ಬಿಜಾಪುರ 1476, ಚಿಕ್ಕೋಡಿ 1359, ರಾಯಚೂರು 1347, ದಾವಣಗೆರೆ 1292, ಬಳ್ಳಾರಿ 1261, ಬೆಳಗಾವಿ 1044, ಚಿತ್ರದುರ್ಗ 1040 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications