PUC: ಪಿಯು ಬೋರ್ಡ್ ಹಾಗೂ ಕಾಲೇಜು ಆಡಳಿತ ಮಂಡಳಿ ಎಡವಟ್ಟು: ಪರೀಕ್ಷಾ ಕೇಂದ್ರ ಹುಡುಕಲು ಪರದಾಡಿದ ವಿದ್ಯಾರ್ಥಿಗಳು
ಯಾದಗಿರಿ: ರಾಜ್ಯಾದ್ಯಂತ ಇಂದಿನಿಂದ (ಫೆಬ್ರವರಿ 28) ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಬಿಗಿ ಭದ್ರತೆಯ ನಡುವೆ ಆರಂಭವಾಗಿವೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ನೇತೃತ್ವದಲ್ಲಿ 1,217 ಕೇಂದ್ರಗಳಲ್ಲಿ ಒಟ್ಟು 7.10 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಸಿಸಿಟಿವಿ ಕಣ್ಗಾವಲು ಹಾಗೂ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಆದರೆ, ಇಷ್ಟೆಲ್ಲಾ ಸಿದ್ಧತೆಗಳ ನಡುವೆಯೂ ಪಿಯು ಬೋರ್ಡ್ ಹಾಗೂ ಕಾಲೇಜು ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದಾಗಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳು ತೀವ್ರ ಆತಂಕಕ್ಕೀಡಾದ ಘಟನೆ ಯಾದಗಿರಿಯಲ್ಲಿ ನಡೆದಿದೆ.
ಯಾದಗಿರಿ ನಗರದ ಸಬಾ ಪಿಯು ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರವನ್ನು ನಿಗದಿಪಡಿಸಲಾಗಿತ್ತು. ಈ ಕೇಂದ್ರಕ್ಕೆ ಸುತ್ತಮುತ್ತಲಿನ ವಿವಿಧ ಹಳ್ಳಿಗಳಿಂದ ಹಾಗೂ ಬೇರೆ ಬೇರೆ ಊರುಗಳಿಂದ ನೂರಾರು ವಿದ್ಯಾರ್ಥಿಗಳು ಬೆಳಗ್ಗೆಯೇ ಆಗಮಿಸಿದ್ದರು. ಆದರೆ, ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಪ್ರವೇಶ ಪತ್ರದಲ್ಲಿ (Hall Ticket) ಪರೀಕ್ಷಾ ಕೇಂದ್ರದ ವಿಳಾಸವನ್ನು ಸಂಪೂರ್ಣವಾಗಿ ತಪ್ಪಾಗಿ ನಮೂದಿಸಲಾಗಿತ್ತು.

ಪ್ರವೇಶ ಪತ್ರದಲ್ಲಿ ಸಬಾ ಪಿಯು ಕಾಲೇಜಿನ ವಿಳಾಸವನ್ನು 'ಗಂಜ್ ರೋಡ್' (Gunj Road) ಎಂದು ಮುದ್ರಿಸಲಾಗಿತ್ತು. ಆದರೆ, ವಾಸ್ತವವಾಗಿ ಈ ಕಾಲೇಜು ಇರುವುದು ನಗರದ 'ಲುಂಬಿನಿ ಪಾರ್ಕ್' (Lumbini Park) ಬಳಿ. ಹಾಲ್ ಟಿಕೆಟ್ನಲ್ಲಿರುವ ವಿಳಾಸವನ್ನೇ ನಂಬಿಕೊಂಡು ಬಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಗಂಜ್ ರೋಡ್ಗೆ ತೆರಳಿ ಕಾಲೇಜಿಗಾಗಿ ಹುಡುಕಾಟ ನಡೆಸಿದ್ದಾರೆ. ಅಲ್ಲಿ ಯಾವುದೇ ಕಾಲೇಜು ಇಲ್ಲದಿರುವುದನ್ನು ಕಂಡು ವಿದ್ಯಾರ್ಥಿಗಳು ಅಕ್ಷರಶಃ ಕಂಗಾಲಾಗಿದ್ದಾರೆ.
ಗಂಟೆಗಳ ಕಾಲ ರಸ್ತೆಯಲ್ಲೇ ಪರದಾಡಿದ ವಿದ್ಯಾರ್ಥಿಗಳು
ಪರೀಕ್ಷೆ ಆರಂಭವಾಗಲು ಸಮಯ ಹತ್ತಿರವಾಗುತ್ತಿದ್ದಂತೆ, ಪರೀಕ್ಷಾ ಕೇಂದ್ರ ಸಿಗದೆ ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿಸಿತ್ತು. ಪರೀಕ್ಷೆ ತಪ್ಪಿಹೋಗುವ ಭಯದಲ್ಲಿ ಕೆಲ ವಿದ್ಯಾರ್ಥಿಗಳು ಕಣ್ಣೀರು ಹಾಕಿದ ಪ್ರಸಂಗವೂ ನಡೆಯಿತು. ಗಂಟೆಗಳ ಕಾಲ ಪರೀಕ್ಷಾ ಕೇಂದ್ರಕ್ಕಾಗಿ ಹುಡುಕಾಟ ನಡೆಸಿದ್ದಾರೆ. ವಿಳಾಸದ ಬಗ್ಗೆ ಅಲ್ಲಿನ ಸ್ಥಳೀಯ ಅಂಗಡಿಯವರನ್ನು ಹಾಗೂ ಸಾರ್ವಜನಿಕರನ್ನು ವಿಚಾರಿಸಿದಾಗ, ಸಬಾ ಕಾಲೇಜು ಲುಂಬಿನಿ ಪಾರ್ಕ್ ಬಳಿ ಇರುವುದು ತಿಳಿದುಬಂದಿದೆ.
ಕೊನೆಗೆ ಸ್ಥಳೀಯರ ಸಹಾಯದಿಂದ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಲುಂಬಿನಿ ಪಾರ್ಕ್ ಬಳಿ ಇರುವ ಸಬಾ ಪಿಯು ಕಾಲೇಜಿಗೆ ಬಂದು ತಲುಪಿದ್ದಾರೆ.
ಆಡಳಿತ ಮಂಡಳಿ ವಿರುದ್ಧ ಆಕ್ರೋಶ
ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಇಂತಹ ಮಹತ್ವದ ಪರೀಕ್ಷೆಯ ವಿಚಾರದಲ್ಲಿ ಶಿಕ್ಷಣ ಇಲಾಖೆ ಹಾಗೂ ಕಾಲೇಜು ಆಡಳಿತ ಮಂಡಳಿ ಇಷ್ಟು ಬೇಜವಾಬ್ದಾರಿಯಿಂದ ವರ್ತಿಸಿರುವುದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. "ಮಕ್ಕಳು ವರ್ಷವಿಡೀ ಕಷ್ಟಪಟ್ಟು ಓದಿರುತ್ತಾರೆ. ಪರೀಕ್ಷೆಯ ದಿನ ಬೆಳಗ್ಗೆ ಅವರಿಗೆ ಮಾನಸಿಕ ನೆಮ್ಮದಿ ಇರಬೇಕು. ಆದರೆ, ಇಂತಹ ತಪ್ಪುಗಳಿಂದ ಮಕ್ಕಳು ಪರೀಕ್ಷೆ ಬರೆಯುವ ಮುನ್ನವೇ ಮಾನಸಿಕವಾಗಿ ಕುಗ್ಗಿಹೋಗುತ್ತಾರೆ. ಪ್ರವೇಶ ಪತ್ರಗಳನ್ನು ಮುದ್ರಿಸುವ ಮುನ್ನ ವಿಳಾಸವನ್ನು ಸರಿಯಾಗಿ ಪರಿಶೀಲಿಸುವ ಕನಿಷ್ಠ ಜವಾಬ್ದಾರಿ ಇಲಾಖೆಗೆ ಇಲ್ಲವೇ?" ಎಂದು ಪೋಷಕರು ಪ್ರಶ್ನಿಸಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications