Karnataka 2nd PU Exam 2023 ಸುಸೂತ್ರ, ದಾಖಲೆ ಮಟ್ಟದಲ್ಲಿ ವಿದ್ಯಾರ್ಥಿಗಳ ಹಾಜರಾತಿ, ಯಾವ ಜಿಲ್ಲೆ ಪ್ರಥಮ? ತಿಳಿಯಿರಿ
ಬೆಂಗಳೂರು, ಮಾರ್ಚ್ 10: ರಾಜ್ಯದಲ್ಲಿ ದ್ವಿತೀಯ ಪದವಿ ಪೂರ್ವ (ಪಿಯು 2nd) ಪರೀಕ್ಷೆಯು ಗುರುವಾರ ಮಾರ್ಚ್ 9 ಸುಸೂತ್ರವಾಗಿ ಆರಂಭವಾಗಿದೆ. ಶೇಕಡಾ 96 ಪ್ರತಿಶತದಷ್ಟು ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿರುವುದು ಖುಷಿಯ ಸಂಗತಿ. ತುಮಕೂರು ಜಿಲ್ಲೆಯಲ್ಲಿ ತಿಪಟೂರಿನ ಶಾಲೆಯೊಂದರಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರೇ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸ್ವಾಗತಿಸಿ ಹಾರೈಸಿದರು.
ಈ ನಡುವೆ ರಾಜ್ಯದ ಬಳ್ಳಾರಿ ಜಿಲ್ಲೆ ಮತ್ತು ಯಾದಗಿರಿಯ ಎರಡು ಕಡೆ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಅಪರಾಧ ಬಿಟ್ಟರೆ ಬೇರೆಲ್ಲೂ ಆ ಬಗ್ಗೆ ವರದಿಯಾಗಿಲ್ಲ. ಮೊದಲ ದಿನವೇ ಒಟ್ಟು 5.1 ಲಕ್ಷ ವಿದ್ಯಾರ್ಥಿಗಳು ಪ್ರಥಮ ಭಾಷೆಯ ಕನ್ನಡ ಮತ್ತು ಅರೇಬಿಕ್ ಪ್ರಶ್ನೆ ಪತ್ರಿಕೆಗಳಿಗೆ ಉತ್ತರಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯನೀರ್ಣಯ ಮಂಡಳಿ ಮೂಲಗಳು ತಿಳಿಸಿವೆ.

ಗುರುವಾರ ಆರಂಭವಾದ ಪ್ರಥಮ ಭಾಷಾ ಪರೀಕ್ಷೆಯನ್ನು ರಾಜ್ಯದೆಲ್ಲೆಡೆ ಸುಮಾರು 5.3 ಲಕ್ಷ ವಿದ್ಯಾರ್ಥಿಗಳು ಎದುರಿಸುವ ನಿರೀಕ್ಷೆ ಇತ್ತು. ಆದರೆ ಹಾಗಾಗದೇ 23,771 ಗೈರಾದರು. ಪರಿಣಾಮ ಮೊದಲ ದಿನ ಶೇ. 96% ರಷ್ಟು ಪರೀಕ್ಷಾ ಹಾಜರಾತಿ ದಾಖಲಾಯಿತು. ಈ ಪೈಕಿ ಕರಾವಳಿ ಭಾಗವಾದ ಉಡುಪಿ ಜಿಲ್ಲೆಯಲ್ಲೇ ಅತೀ ಹೆಚ್ಚು ಹಾಜರಾತಿ (99%) ಕಂಡು ಬರುವ ಮೂಲಕ ಆ ಜಿಲ್ಲೆ ಅಗ್ರ ಸ್ಥಾನದಲ್ಲಿದೆ. ಕೊನೆಯ ಸ್ಥಾನದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ಜಿಲ್ಲೆಯಾದ ಯಾದಗಿರಿ (93%) ಅತೀ ಕಡಿಮೆ ಇದೆ.
ಈ ವರ್ಷ ಬಹು ಆಯ್ಕೆಯ ಪ್ರಶ್ನೆಗಳನ್ನು (MCQ) ಸೇರಿಸಿರುವುದರಿಂದ ಪರೀಕ್ಷೆ ತುಸು ಸುಲಭಯಕ ಅನ್ನಿಸಿತು ಎಂದು ವಿದ್ಯಾರ್ಥಿಗಳು ಪರೀಕ್ಷಾ ನಂತರ ಪ್ರತಿಕ್ರಿಯಸಿದ್ದಾರೆ. ಪಟೂರಿನ ಶಾಲೆಯೊಂದರಲ್ಲಿ ಶಿಕ್ಷನ ಸಚಿವ ಬಿ.ಸಿ.ನಾಗೇಶ್ ಅವರೇ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸ್ವಾಗತಿಸಿ ಹಾರೈಸಿದರು. ಬಳಿಕ ಮಾತನಾಡಿದ ಅವರು, ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ. ಈ ಸಂಬಂಧ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ರಾಜ್ಯಾದ್ಯಂತ 1,109 ಕೇಂದ್ರಗಳಲ್ಲಿ ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗದ 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

'ವಿದ್ಯಾರ್ಥಿ ಸ್ನೇಹಿ ಪರೀಕ್ಷೆ'
ಈ ಶೈಕ್ಷಣಿಕ ವರ್ಷದಲ್ಲಿ ತರಗತಿಗಳನ್ನು ನಡೆಸಿದ್ದರೂ ಸಹ ಈ ಹಿಂದಿನ ಕೋವಿಡ್ ಕಾಲದಲ್ಲಿ ಶಿಕ್ಷಣದ ಮೇಲೆ ಉಂಟಾಗಿ ಪರಿಣಾಮದ ಛಾತೆ ಮಕ್ಕಳನ್ನು ಆವರಿಸಿದಂತಿದೆ. ಸಾಂಕ್ರಾಮಿಕ ರೋಗ ಮತ್ತು ನಂತರದ ಎರಡು ವರ್ಷಗಳ ಲಾಕ್ಡೌನ್ಗಳಿಂದಾಗಿ ಕಲಿಕೆಯಲ್ಲಿ ಹಿನ್ನಡೆಯನ್ನು ಪರಿಗಣಿಸಿ, ಪರೀಕ್ಷೆಗಳು ವಿದ್ಯಾರ್ಥಿ ಸ್ನೇಹಿಯಾಗಿ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.
ಪರೀಕ್ಷೆ ಬರೆಯಲು ನೀಡಿದ ಸಮಯ ಸಾಕಾಗುತ್ತಿಲ್ಲ ಎಂಬ ದೂರುಗಳು ಬಂದ ಹಿನ್ನೆಲ್ಲೆಯಲ್ಲಿ ಸರ್ಕಾರ ಈ ವರ್ಷ ನಾವು 20 ಅಂಕಗಳಿಗೆ MCQ ಅನ್ನು ಪರಿಚಯಿಸಿದೆ. ಅದು ಅವರಿಗೆ ಸಮರ್ಥ ಸಮಯ ನಿರ್ವಹಣೆಗೆ ಸಹಕಾರಿಯಾಗಿದೆ. ಅಲ್ಲದೇ ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆ ಓದಲು ಮತ್ತು ಉತ್ತರಗಳನ್ನು ಬರೆಯಲು ಆರಂಭಿಸುವ ಮುನ್ನವೇ ಹೆಚ್ಚುವರಿ 15 ನಿಮಿಷಗಳ ಕಾಲಾವಕಾಶ ನೀಡಲಾಗಿತ್ತು.
ಅಗತ್ಯ ಭದ್ರತೆ : ಪರೀಕ್ಷಾ ಕೇಂದ್ರಗಳಲ್ಲಿ ಅತ್ಯಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳ ಸಹಿ ತೆಗೆದ ನಂತರ ಪ್ರಶ್ನೆ ಪತ್ರಿಕೆಗಳನ್ನು ಒಳಗೊಂಡ ಮುಚ್ಚಿದ ಕವರ್ ಅನ್ನು ವಿದ್ಯಾರ್ಥಿಗಳ ಮುಂದೆಯೇ ತೆರೆಯಲಾಗುತ್ತದೆ. ಪ್ರಶ್ನೆಪತ್ರಿಕೆಗಳನ್ನು ಇಡುವ ಸ್ಥಳದಲ್ಲಿ ಬಿಗಿ ಭದ್ರತೆ ಮತ್ತು ಸಿಸಿಟಿವಿ ಕವರೇಜ್ 24 ಗಂಟೆಗಳ ಕಾಲ ಒದಗಿಸಲಾಗಿದೆ ಎಂದು ಸಚಿವರು ವಿವರಿಸಿದರು.
-
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
ಮಾರ್ಚ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ












Click it and Unblock the Notifications