ದ್ವಿತೀಯ ಪಿಯುಸಿ ಫಲಿತಾಂಶ: ಉಡುಪಿ ಫಸ್ಟ್, ಉಳಿದ ಜಿಲ್ಲೆಗಳ ಕಥೆಯೇನು?
ಬೆಂಗಳೂರು, ಜುಲೈ 14: 2020ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಕೊರೊನಾ ಬಿಕ್ಕಟ್ಟಿನ ನಡುವೆಯೇ ಪರೀಕ್ಷೆ ಬರೆದಿದ್ದ ದ್ವಿತೀಯ ಪಿಯು ಫಲಿತಾಂಶದಲ್ಲಿ ಬಹಳ ವ್ಯತ್ಯಾಸವೇನು ಆಗಿಲ್ಲ ಎನ್ನುವುದು ಗಮನಾರ್ಹ.
Recommended Video
ಸಂಪ್ರದಾಯದಂತೆ ಈ ಬಾರಿಯೂ ಹೆಣ್ಮಕ್ಕಳೇ ಮೇಲುಗೈ ಸಾಧಿಸಿದ್ದಾರೆ. ಈ ವರ್ಷ ಶೇಕಡಾ 69.20ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದು, ಶೇಕಡಾ 68.24 ರಷ್ಟು ಬಾಲಕಿಯರು ಉತ್ತೀರ್ಣರಾದರೆ, ಶೇ. 55.29 ಬಾಲಕರು ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷ ಮೊದಲ ಸ್ಥಾನದಲ್ಲಿದ್ದ ಉಡುಪಿ ಈ ವರ್ಷವೂ ಮೊದಲ ಸ್ಥಾನ ಪಡೆದುಕೊಂಡಿದೆ. ವಿಜಯಪುರ ಕೊನೆಯ ಕೊನೆಯ ಸ್ಥಾನಕ್ಕೆ ಕುಸಿದಿದೆ.
ಕಲಾ ವಿಭಾಗದಲ್ಲಿ ಶೇಕಡಾ 41.27ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದರೆ, ವಿಜ್ಞಾನ ವಿಭಾಗದಲ್ಲಿ ಶೇಕಡಾ 76.02ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ ಹಾಗೂ ವಾಣಿಜ್ಯ ವಿಭಾಗದಲ್ಲಿ ಶೇಕಡಾ 65.53ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ವರ್ಷ ಯಾವ ಜಿಲ್ಲೆ ಎಷ್ಟನೇ ಸ್ಥಾನ ಪಡೆದುಕೊಂಡಿದೆ ಎಂಬ ವಿವರ ಇಲ್ಲಿದೆ. ಮುಂದೆ ಓದಿ...

ಮೊದಲ ಸ್ಥಾನದಲ್ಲಿ ಉಡುಪಿ
- ಕಳೆದ ವರ್ಷ ಮೊದಲ ಸ್ಥಾನದಲ್ಲಿದ್ದ ಉಡುಪಿ ಜಿಲ್ಲೆ ಈ ವರ್ಷವೂ ಪ್ರಥಮ ಸ್ಥಾನದಲ್ಲಿ ಮುಂದುವರಿದೆ. ಈ ವರ್ಷ ಉಡುಪಿ ಜಿಲ್ಲೆ 90.71ರಷ್ಟು ಫಲಿತಾಂಶ ಪಡೆದಿದೆ. ಕಳೆದ ವರ್ಷ ಉಡುಪಿ ಜಿಲ್ಲೆ 92.20% ರಷ್ಟು ಫಲಿತಾಂಶ ಪಡೆದಿತ್ತು.
- ಶೇಕಡಾ 90.71 ರಷ್ಟು ಫಲಿತಾಂಶ ಪಡೆದಿರುವ ದಕ್ಷಿಣ ಕನ್ನಡ ಜಿಲ್ಲೆ ಈ ವರ್ಷ ಎರಡನೇ ಸ್ಥಾನ ಪಡೆದುಕೊಂಡಿದೆ.
- 81.53ರಷ್ಟು ಫಲಿತಾಂಶ ಹೊಂದಿರುವ ಕೊಡಗು ಮೂರನೇ ಸ್ಥಾನ ಪಡೆದುಕೊಂಡಿದೆ.
- 80.97 ರಷ್ಟು ಫಲಿತಾಂಶ ಪಡೆದಿರುವ ಉತ್ತರ ಕನ್ನಡ ಜಿಲ್ಲೆ ನಾಲ್ಕನೇ ಸ್ಥಾನದಲ್ಲಿದೆ.

ಐದನೇ ಸ್ಥಾನದಲ್ಲಿ ಚಿಕ್ಕಮಗಳೂರು
5 ಚಿಕ್ಕಮಗಳೂರು 79.11%
6 ಬೆಂಗಳೂರು ದಕ್ಷಿಣ 77.56%
7 ಬೆಂಗಳೂರು ಉತ್ತರ 75.54%
8 ಬಾಗಲಕೋಟೆ 74.59%
9 ಚಿಕ್ಕಬಳ್ಳಾಪುರ 73.74%
10 ಶಿವಮೊಗ್ಗ 72.19%
11 ಹಾಸನ 70.18
12 ಚಾಮರಾಜನಗರ 69.29%
13 ಬೆಂಗಳೂರು ಗ್ರಾಮಾಂತರ 69.02%

ಹದಿನೈದನೇ ಸ್ಥಾನದಲ್ಲಿ ಮೈಸೂರು
14 ಹಾವೇರಿ 68.01%
15 ಮೈಸೂರು 67.98%
16 ಕೋಲಾರ 67.42%
17 ಧಾರವಾಡ 67.31%
18 ಬೀದರ್ 64.61%
19 ದಾವಣಗೆರೆ 64.09%
20 ಚಿಕ್ಕೋಡಿ 63.88%
21 ಮಂಡ್ಯ 63.82%
22 ಗದಗ 63%

ಕೊನೆಯ ಸ್ಥಾನದಲ್ಲಿ ವಿಜಯಪುರ
23 ತುಮಕೂರು 62.26%
24 ಬಳ್ಳಾರಿ 62.02%
25 ರಾಮನಗರ 60.96%
26 ಕೊಪ್ಪಳ 60.09%
27 ಬೆಳಗಾವಿ 59.7%
28 ಯಾದಗಿರಿ 58.38%
29 ಕಲಬುರಗಿ 58.27%
30 ಚಿತ್ರದುರ್ಗ 56.8%
31 ರಾಯಚೂರು 56.22%
32 ವಿಜಯಪುರ 54.22
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications