ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಉತ್ತೀರ್ಣರಾದವರು, ಅನುತ್ತೀರ್ಣರಾದವರೆಷ್ಟು?
ಬೆಂಗಳೂರು, ಸೆಪ್ಟೆಂಬರ್ 20: ರಾಜ್ಯ ದ್ವಿತೀಯು ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಖಾಸಗಿ ವಿದ್ಯಾರ್ಥಿಗಳು, ಫಲಿತಾಂಶ ತಿರಸ್ಕರಿಸಿದ್ದ ವಿದ್ಯಾರ್ಥಿಗಳು ಹಾಗೂ ಪುನರಾವರ್ತಿ ಅಭ್ಯರ್ಥಿಗಳ ಫಲಿತಾಂಶ ಹೊರ ಬಿದ್ದಿದೆ.
ಒಟ್ಟು 18,414 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಅದರಲ್ಲಿ 17,470 ಖಾಸಗಿ ವಿದ್ಯಾರ್ಥಿಗಳು, 351 ರಿಪೀಟರ್ಸ್, 592 ಫ್ರೆಶರ್ಸ್ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ರಾಜ್ಯದ 187 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ಮಾಡಲಾಗಿತ್ತು.
ಇಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಫಲಿತಾಂಶ ಪ್ರಕಟಿಸಿದ್ದಾರೆ. ಅಭ್ಯರ್ಥಿಗಳು http://karresults.nic.in ಲಿಂಕ್ ಮೂಲಕ ಫಲಿತಾಂಶ ನೋಡಬಹುದು.
ಹೊರ ರಾಜ್ಯಗಳಿಂದ ಬರುವ ವಿದ್ಯಾರ್ಥಿಗಳು 72 ಗಂಟೆಗಳ ಒಳಗಿನ ಆರ್ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿ ತರಬೇಕು ಎಂದು ಹೇಳಲಾಗಿತ್ತು.

ಕೇರಳದ ಗಡಿ ಜಿಲ್ಲೆಗಳಿಂದ ಬರುವ ವಿದ್ಯಾರ್ಥಿಗಳು ಕೂಡ ಆರ್ಟಿಪಿಸಿಆರ್ ನೆಗೆಟಿವ್ ವರದಿ ತರುವುದು ಕಡ್ಡಾಯವಾಗಿತ್ತು.. ವಿದ್ಯಾರ್ಥಿಗಳು ಯಾವುದೇ ಭಯವಿಲ್ಲದೇ ಪರೀಕ್ಷೆ ಬರೆಯಬಹುದು. ಪರೀಕ್ಷೆ ಕೇಂದ್ರದ ಆಚೆ ಎಲ್ಲರಿಗೂ ಆರೋಗ್ಯ ತಪಾಸಣೆ ಇರಲಿದೆ ಎಂದು ಪಿಯು ಬೋರ್ಡ್ ತಿಳಿಸಿತ್ತು.ಇಂದು ಇದರ ಫಲಿತಾಂಶ ಹೊರ ಬಿದ್ದಿದೆ.
ವಿಜ್ಞಾನ ವಿಭಾಗದಲ್ಲಿ 600ಕ್ಕೆ 573 ಅತಿ ಹೆಚ್ಚು ಅಂಕ ಪಡೆದಿದ್ದಾರೆ. ಕಲಾ ವಿಭಾಗದಲ್ಲಿ 600 ಅಂಕಕ್ಕೆ 592 ಅತಿ ಹೆಚ್ಚು ಅಂಕ ಪಡೆದಿದ್ದರೆ, ವಾಣಿಜ್ಯ ವಿಭಾಗದಲ್ಲಿ 600ಕ್ಕೆ 594 ಅತಿ ಹೆಚ್ಚು ಅಂಕ ಗಳಿಸಿದ್ದಾರೆ.
18,414 ವಿದ್ಯಾರ್ಥಿಗಳ ಪೈಕಿ 5,507 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
12,906 ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆಂದು ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. 556 ಪ್ರೆಶರ್ಸ್, 183 ರಿಪೀಟರ್ಸ್ ಪಾಸ್ ಆಗಿದ್ದಾರೆ. 17,470 ಖಾಸಗಿ ವಿದ್ಯಾರ್ಥಿಗಳ ಪೈಕಿ 4,768 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ.
ಕೋವಿಡ್ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿ ಪ್ರಥಮ ಪಿಯುಸಿ ಮತ್ತು ಎಸ್ಎಸ್ಎಲ್ಸಿಯಲ್ಲಿ ಪಡೆದ ಅಂಕ ಆಧರಿಸಿಫಲಿತಾಂಶ ನೀಡಲಾಗಿತ್ತು, ಆದರೆ, ಕೆಲ ವಿದ್ಯಾರ್ಥಿಗಳು ಆ ಫಲಿತಾಂಶ ತಿರಸ್ಕರಿಸಿ ಪರೀಕ್ಷೆ ಬರೆದಿದ್ದರು.
ಇಂದು 2020-21ನೇ ಸಾಲಿನ ಸಿಇಟಿ ಫಲಿತಾಂಶ ಪ್ರಕಟವಾಗಲಿದೆ. ಆಗಸ್ಟ್ 28, 29, 30ರಂದು ಸಿಇಟಿ ಪರೀಕ್ಷೆ ನಡೆದಿತ್ತು. ಸಿಇಟಿಗೆ 2,01,834 ವಿದ್ಯಾರ್ಥಿಗಳು ನೋಂದಣಿ ಮಾಡಿದ್ದರು. 1.89 ಲಕ್ಷ ವಿದ್ಯಾರ್ಥಿಗಳು ಗಣಿತ ಪರೀಕ್ಷೆ ಬರೆದಿದ್ದಾರೆ.ಕ್ಷೆ, 1.93 ಲಕ್ಷ ವಿದ್ಯಾರ್ಥಿಗಳು ಭೌತಶಾಸ್ತ್ರ ಪರೀಕ್ಷೆ ಬರೆದಿದ್ದಾರೆ.
Recommended Video
ಇಂದು ಮಧ್ಯಾಹ್ನ ಉನ್ನತ ಶಿಕ್ಷಣ ಇಲಾಖೆ ಸಚಿವ ಡಾ.ಅಶ್ವತ್ಥ್ ನಾರಾಯಣ ಸುದ್ದಿಗೋಷ್ಠಿ ನಡೆಸುತ್ತಾರೆ. ಸುದ್ದಿಗೋಷ್ಠಿ ಬಳಿಕ ಸಿಇಟಿ ಫಲಿತಾಂಶ ಪ್ರಕಟವಾಗುತ್ತದೆ. kea.kar.nic.in ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗುತ್ತದೆ.
-
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications