2nd PUC Results: ಧಾರವಾಡ ಜಿಲ್ಲೆಯ ವಿದ್ಯಾಲಕ್ಷ್ಮೀ 597 ಅಂಕ ಪಡೆದು ರಾಜ್ಯಕ್ಕೆ ಪ್ರಥಮ: ಮಾಹಿತಿ
ಹುಬ್ಬಳ್ಳಿ, ಏಪ್ರಿಲ್ 10: ದ್ವಿತೀಯ ಪಿಯುಸಿ ಫಲಿತಾಂಶ ಹೊರ ಬಿದ್ದಿದ್ದು, ವಿದ್ಯಾಕಾಶಿ ಧಾರವಾಡ ಜಿಲ್ಲೆಯು ಕಳೆದ ಬಾರಿಗಿಂತ ಈ ಬಾರಿ ಉತ್ತಮ ಸಾಧನೆ ಮಾಡಿದೆ. ರಾಜ್ಯಕ್ಕೆ 23ನೇ ಸ್ಥಾನ ಪಡೆಯುವ ಮೂಲಕ ಶೈಕ್ಷಣಿಕ ರಂಗದಲ್ಲಿ ಪ್ರಗತಿ ಸಾಧಿಸಿದೆ.
ದ್ವಿತೀಯ ಪಿಯುಸಿ ಫಲಿತಾಂಶ ವಿಚಾರದಲ್ಲಿ ಕಳೆದ ಬಾರಿ ಶೇ. 73 ರಷ್ಟು ಫಲಿತಾಂಶ ಪಡೆದಿತ್ತು 27ನೇ ಸ್ಥಾನಕ್ಕೆ ಕುಸಿದಿತ್ತು. ಈ ವರ್ಷ ಇದೇ ಧಾರವಾಡವು ಫಲಿತಾಂಶದಲ್ಲಿ ಶೇಕಡಾ 80ರಷ್ಟು ಫಲಿತಾಂಶ ಗಿಟ್ಟಿಸಿಕೊಂಡು 23ನೇ ಸ್ಥಾನಕ್ಕೆ ಭಾಜನವಾಗಿದೆ.

ವಿಜ್ಞಾನ ವಿಭಾಗದಲ್ಲಿ ಜಿಲ್ಲೆಯ ವಿದ್ಯಾನಿಕೇತನ ಕಾಲೇಜಿನ ವಿದ್ಯಾರ್ಥಿನಿ ವಿದ್ಯಾಲಕ್ಷ್ಮೀ ಅವರು 600 ಅಂಕಿಗಳಿಗೆ 598 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಅದೇ ರೀತಿ ಕಲಾ ವಿಭಾಗದಲ್ಲಿ ಧಾರವಾಡ ಕೆ.ಇ. ಬೋರ್ಡ್ ಕಾಲೇಜಿನ ವಿದ್ಯಾರ್ಥಿನಿ 'ರವಿನಾ ಲಮಾಣಿ' 595 ಅಂಕ ಪಡೆದು ರಾಜ್ಯಕ್ಕೆ ದ್ವೀತಿಯ ಸ್ಥಾನ ಪಡೆದಿದ್ದಾರೆ.
ಜಿಲ್ಲಾವಾರು ಸ್ಥಾನಗಳ ಮಾಹಿತಿ
ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾದ ವಿದ್ಯಾಲಕ್ಷ್ಮಿ598 ಅಂಕ ಪಡೆದು ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ದಕ್ಷಿಣ ಕನ್ನಡ (97.37%) ಪ್ರಥಮ, ಉಡುಪಿ (96.80%) ದ್ವಿತೀಯ, ವಿಜಯಪುರ (94.89%) ತೃತೀಯ, ಗದಗ (72.86%) ಜಿಲ್ಲೆಗೆ ಕೊನೆಯ ಸ್ಥಾನ ಪಡೆದಿದೆ.
ಟಾಪರ್ಗಳ ಪಟ್ಟಿ ಇಲ್ಲಿದೆ
ವಿಜ್ಞಾನ ವಿಭಾಗದಲ್ಲಿ ಹುಬ್ಬಳ್ಳಿಯ ವಿದ್ಯಾಲಕ್ಷ್ಮೀ 600ಕ್ಕೆ 598 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ಪಿಯುಸಿ ಕಲಾ ವಿಭಾಗದಲ್ಲಿ ಇಬ್ಬರು ಟಾಪರ್ಗಳಾಗಿದ್ದಾರೆ. ಕಲಾ ವಿಭಾಗದಲ್ಲಿ ಮೇಧಾ ಡಿ. ಟಾಪರ್ 600ಕ್ಕೆ 596 ಅಂಕಗಳನ್ನು ಪಡೆದರೆ, ವಿಜಯಪುರದ ವೇದಾಂತ್ ಕೂಡ 600ಕ್ಕೆ 596 ಅಂಕ ಗಳಿಸಿದ್ದಾರೆ.

ಪರೀಕ್ಷೆ ಬರೆದಿದ್ದ 6.98 ಲಕ್ಷ ವಿದ್ಯಾರ್ಥಿಗಳು
ವಾಣಿಜ್ಯ ವಿಭಾಗದಲ್ಲಿ ತುಮಕೂರಿನ ಜ್ಞಾನವಿ 600ಕ್ಕೆ 597 ಅಂಕ ಪಡೆದು ಟಾಪರ್ ಆಗಿದ್ದಾರೆ. 2024 ರ ದ್ವಿತೀಯ ಪಿಯು ಪರೀಕ್ಷೆಗೆ 3.3 ಲಕ್ಷ ಹುಡುಗರು ಮತ್ತು 3.6 ಲಕ್ಷ ಹುಡುಗಿಯರು ಹಾಜರಾಗಿದ್ದರು. ರಾಜ್ಯದಾದ್ಯಂತ 1,124 ಕೇಂದ್ರಗಳಲ್ಲಿ ನಡೆದಿದ್ದ ಪರೀಕ್ಷೆಗೆ ಒಟ್ಟು 6.98 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು.
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಶಿಕ್ಷಣ ಇಲಾಖೆ ಫಲಿತಾಂಶ ಪ್ರಕಟಿಸಿದೆ. ವಿದ್ಯಾರ್ಥಿಗಳು ನೀವು ನಿಮ್ಮ ಫಲಿತಾಂಶವನ್ನು ಶಿಕ್ಷಣ ಇಲಾಖೆಯ ಈ ಅಧಿಕೃತ ಜಾಲತಾಣದಲ್ಲಿ https://karresults.nic.in/ ನೋಡಬಹುದು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ









Click it and Unblock the Notifications