ಪಿಯು ಫಲಿತಾಂಶ ಗೊಂದಲವಿದ್ದರೆ ಅರ್ಜಿ ಸಲ್ಲಿಕೆಯೇ ಪರಿಹಾರ
ಬೆಂಗಳೂರು, ಮೇ 23: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿನ ಗೊಂದಲ ನಿವಾರಣೆ ಆಗುವವರೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಪ್ರಕಟಿಸಬಾರದು ಎಂದು ಪಾಲಕರು ಮತ್ತು ವಿದ್ಯಾರ್ಥಿಗಳ ಬೇಡಿಕೆಗೆ ಮಣಿದಿರುವ ಶಿಕ್ಷಣ ಇಲಾಖೆ ಜೂನ್ 1ರ ನಂತರ ಸಿಇಟಿ ಫಲಿತಾಂಶ ಪ್ರಕಟಿಸಯತ್ತೇನೆ ಎಂದು ಹೇಳಿದೆ.
ಈ ಬಗ್ಗೆ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಸ್ಪಷ್ಟನೆ ನೀಡಿದ್ದಾರೆ. ಮೌಲ್ಯಮಾಪನದಲ್ಲಿ ತಪ್ಪಾಗಿದೆ ಎಂಬ ಆರೋಪಕ್ಕೆ ಧ್ವನಿಗೂಡಿಸಿದ್ದ ಎಚ್ ಡಿ ಕುಮಾರಸ್ವಾಮಿ ಪಿತಯ ಬೋರ್ಡ್ ಒಳಕ್ಕೆ ತೆರಳಿ ಉತ್ತರ ಪತ್ರಿಕೆ ಪರಿಶೀಲಿಸಿ ಯಾವುದೇ ಲೋಪವಾಗಿಲ್ಲ ಎಂದು ತಿಳಿಸಿದ್ದರು. [ಪಿಯುಸಿ ಮೌಲ್ಯಮಾಪನದಲ್ಲಿ ನಿಜಕ್ಕೂ ಲೋಪವಾಗಿದೆಯೇ?]

ಹಾಗಾದರೆ ಕಡಿಮೆ ಅಂಕ ಬಂದ ವಿದ್ಯಾರ್ಥಿಗಳು ಮುಂದೆ ಏನು ಮಾಡಬೇಕು? ಫೋಟೋ ಕಾಪಿ ಪಡೆಯುವುದು ಹೇಗೆ? ಮರು ಮೌಲ್ಯಮಾಪನ ವಿಧಾನ ಹೇಗೆ? ಶುಲ್ಕ ಎಷ್ಟು? ಸಿಇಟಿ ಫಲಿತಾಂಶಕ್ಕೂ ಇದಕ್ಕೂ ನಡುವಿನ ಸಂಬಂಧವೇನು? ಎಂಬ ಪ್ರಶ್ನೆಗಳು ಇದರೊಂದಿಗೆ ಎದ್ದಿವೆ.
ಪೂರಕ ಪರೀಕ್ಷೆಗೆ ಅವಕಾಶ ಉತ್ತರ ಪತ್ರಿಕೆಯ ಛಾಯಾ ಪ್ರತಿಗೆ ಅರ್ಜಿ ಸಲ್ಲಿಸಲು ಮೇ 25 ಕೊನೆ ದಿನ. ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಮೇ 30. ಮರು ಎಣಿಕೆಗೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಮೇ 30. ಜೂನ್ 25ರಿಂದ ಜುಲೈ 4ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ. ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಮೇ 27 ಎಂದು ಮಂಡಳಿ ಪಿಯು ಫಲಿತಾಂಶ ಪ್ರಕಟವಾದ ದಿನವೇ ತಿಳಿಸಿತ್ತು.[ಫಲಿತಾಂಶ ಗೊಂದಲದ ಬಗ್ಗೆ ಕಿಮ್ಮನೆ ಹೇಳಿದ್ದೇನು?]
* ಫೋಟೋ ಕಾಪಿ ಒಂದು ಪೇಪರ್ ಗೆ - 504 ರು.
* ಮರುಮೌಲ್ಯಮಾಪನ ಒಂದು ಪತ್ರಿಕೆಗೆ- 1260 ರಯ
* ಮರು ಪರಿಶೀಲನೆಗೆ ಒಂದು ಪತ್ರಿಕೆಗೆ-336 ರು
ನಿಗದಿಯಂತೆ ಸಿಇಟಿ ಫಲಿತಾಂಶ ಮೇ 25 ರಂದು ಪ್ರಕಟವಾಗಬೇಕಿತ್ತು. ಆದರೆ ಈಗ ಮುಂದಕ್ಕೆ ಹೋಗಿದೆ. ಹಾಗಾಗಿ ಮರು ಪರಿಶೀಲನೆ ಮಾಡಿಕೊಂಡರೂ ಸಿಇಟಿ ಶ್ರೇಯಾಂಕದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬಹುದು. ಎಲ್ಲ ಉತ್ತರ ಪತ್ರಿಕೆ ಮರು ಮೌಲ್ಯಮಾಪನ ಸಾಧ್ಯವಿಲ್ಲದ ಮಾತು. ಒಂದು ವೇಳೆ ಮರು ಮೌಲ್ಯಮಾಪನದ ನಂತರ ಹೆಚ್ಚುವರಿಯಾಗಿ ಆರು ಅಂಕ ಬರದಿದ್ದರೆ ಯಾವ ಕಾರಣಕ್ಕೂ ಶುಲ್ಕ ಮರುಪಾವತಿ ಮಾಡಲಾಗುವುದಿಲ್ಲ ಎಂಬ ಸಂಗತಿಯೂ ವಿದ್ಯಾರ್ಥಿಗಳ ತಲೆಯಲ್ಲಿ ಇರಬೇಕು.
ಕೇವಲ ಒಂದು ವಿಷಯದಲ್ಲಿ ಫೇಲ್ ಆದವರು ಅಥವಾ ಐಚ್ಛಿಕ ವಿಷಯದಲ್ಲಿ ಕಡಿಮೆ ಅಂಕ ಬಂದವರು ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ನಲ್ಲಿ ಅರ್ಜಿ ಸಲ್ಲಿಕೆ ಮಾಡುವುದು ಉತ್ತಮ. ಬೆಂಗಳೂರು ಒನ್ ನವರು ನೀಡುವ ರಿಸಿಟ್ ಇಟ್ಟುಕೊಂಡರ ಸಾಕಾಗುತ್ತದೆ. ಸಿಇಟಿ ಫಲಿತಾಂಶಕ್ಕೂ ಮುನ್ನವೇ ಅರ್ಜಿ ಸಲ್ಲಿಸಿದ ಎಲ್ಲ ವಿದ್ಯಾರ್ಥಿಗಳ ಉತ್ತರ ಪತ್ರಿಕೆ ಮರುಮೌಲ್ಯಮಾಪನ ಮಾಡಿ ನೀಡುವ ಜವಾಬ್ದಾರಿ ಪಿಯು ಮಂಡಳಿ ಮೇಲಿದೆ.
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ












Click it and Unblock the Notifications