ದ್ವಿತೀಯ ಪಿಯುಸಿ ಫಲಿತಾಂಶ 2015: ಹೈಲೈಟ್ಸ್
ಬೆಂಗಳೂರು, ಮೇ 18 : ದ್ವಿತೀಯ ಪಿಯು ಫಲಿತಾಂಶ ಪ್ರಕಟಗೊಂಡಿದ್ದು ವಿದ್ಯಾರ್ಥಿಗಳು ಮುಂದಿನ ಭವಿಷ್ಯದತ್ತ ಹೆಜ್ಜೆ ಹಾಕಲು ಸಿದ್ಧರಾಗಿದ್ದಾರೆ. ದಕ್ಷಿಣ ಕನ್ನಡ ಮೊದಲ ಸ್ಥಾನ ಗಳಿಸಿಕೊಂಡಿದ್ದರೆ ರಾಜ್ಯದಲ್ಲಿ ಶೇ. 60 ಸಾಧನೆಯಾಗಿದೆ. ಕಳೆದ 10 ವರ್ಷದಲ್ಲೇ ಇದು ಅತ್ಯುತ್ತಮ ಸಾಧನೆಯಾಗಿದೆ.
ಈ ಬಾರಿಯೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಸಾಧನೆಯೇ ಉತ್ತಮವಾಗಿದೆ. ಪರೀಕ್ಷೆಗೆ ಹಾಜರಾಗಿದ್ದ 6,10,323 ಅಭ್ಯರ್ಥಿಗಳಲ್ಲಿ 3,69,474 ಅಭ್ಯರ್ಥಿಗಳು ಪಾಸಾಗಿದ್ದಾರೆ. ಈ ಬಾರಿಯೂ ಬಾಲಕಿಯರು ಮೇಲುಗೈ ಸಾಧಿಸಿದ್ದು, ಪರೀಕ್ಷೆಗೆ ಹಾಜರಾಗಿದ್ದ 3,00,063 ಬಾಲಕಿಯರಲ್ಲಿ 2,04,743 ಮಂದಿ ಪಾಸಾಗಿದ್ದು, ಶೇ.68.24 ಫಲಿತಾಂಶ ಲಭಿಸಿದೆ.[ಪಿಯು ಟಾಪರ್ ಕುಡ್ಲದ ರಶ್ಮಿತಾ ಜೊತೆ ಚಿಟ್ ಚಾಟ್]

ವಿದ್ಯಾರ್ಥಿನಿಯರೇ ಮೇಲುಗೈ: ಉತ್ತೀರ್ಣರಾದ ವಿದ್ಯಾರ್ಥಿನಿಯರ ಸಂಖ್ಯೆ ಶೇಕಡ 68.24 ರಷ್ಟಾದರೆ, ವಿದ್ಯಾರ್ಥಿಗಳ ಸಂಖ್ಯೆ ಶೇ. 53.09. ಅತ್ಯುನ್ನತ - 38,363 ವಿದ್ಯಾರ್ಥಿಗಳು, ಪ್ರಥಮ ದರ್ಜೆ - 1,91,629 ವಿದ್ಯಾರ್ಥಿಗಳು. ಕಲಾ ವಿಭಾಗದಲ್ಲಿ 1,17,394 ( ಶೇ.51.12), ವಾಣಿಜ್ಯ ವಿಭಾಗ 1,39,932, (ಶೇ. 67.06) ವಿಜ್ಞಾನ ವಿಭಾಗದಲ್ಲಿ 1,12.148 (ಶೇ.65.19) ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಪೂರಕ ಪರೀಕ್ಷೆಗೆ ಅವಕಾಶ
ಉತ್ತರ ಪತ್ರಿಕೆಯ ಛಾಯಾ ಪ್ರತಿಗೆ ಅರ್ಜಿ ಸಲ್ಲಿಸಲು ಮೇ 25 ಕೊನೆ ದಿನ. ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಮೇ 30. ಮರು ಎಣಿಕೆಗೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಮೇ 30. ಜೂನ್ 25ರಿಂದ ಜುಲೈ 4ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ. ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಮೇ 27.[ಪಿಯು ಜಿಲ್ಲಾವಾರು ರಿಸಲ್ಟ್: ದಕ್ಷಿಣ ಕನ್ನಡ 1, ಗದಗ 31]
47 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ
55 ಕಾಲೇಜುಗಳು ನೂರು ಸಾಧನೆ ಮಾಡಿವೆ. ಆದರೆ 47 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ದಾಖಲಾಗಿದ್ದು ಕಳೆದ ವರ್ಷಕ್ಕೆ ಹೋಲಿಸಿದರೆ ಶೂನ್ಯ ಸಂಪಾದನೆ ಪ್ರಮಾಣ ಹೆಚ್ಚಾಗಿದೆ. 1 ಸರ್ಕಾರಿ ಕಾಲೇಜು, 44 ಅನುದಾನ ರಹಿತ ಕಾಲೇಜುಗಳು, 2 ವಿಘಭಜಿತ ಕಾಲೇಜುಗಳು ಶೂನ್ಯ ಫಲಿತಾಂಶ ದಾಖಲಿಸಿವೆ.
ಕಾಲೇಜುವಾರು ಫಲಿತಾಂಶ
ಕಾಲೇಜುವಾರು ಫಲಿತಾಂಶದಲ್ಲಿ ಅನುದಾನ ರಹಿತ ಕಾಲೇಜುಗಳೇ ಮುಂದಿವೆ. ಅನುದಾನ ರಹಿತ ಕಾಲೇಜುಗಳು ಶೇ, 73.23, ಸರ್ಕಾರಿ ಪದವಿ ಕಾಲೇಜುಗಳು ಶೇ. 63, ಅನುದಾನಿತ ಕಾಲೇಜುಗಳು ಶೇ. 66, ಕಾರ್ಪೋರೇಶನ್ ಕಾಲೇಜು ಶೇ. 63 ಮತ್ತು ವಿಭಜಿತ ಕಾಲೇಜುಗಳು ಶೇ. 72 ಸಾಧನೆ ಮಾಡಿವೆ.
ಅಂಗವಿಕಲರ ಸಾಧನೆ
ಅಂಧರು, ಕಿವುಡರು, ಮೂಗರು ಸೇರಿದಂತೆ ಅಂಗವಿಕಲರು ಪರೀಕ್ಷೆಯಲ್ಲಿ ಭಾಗಿಯಾಗಿದ್ದರು. 269 ಅಂಧರು ಸೇರಿದಂತೆ ಒಟ್ಟು 972 ಜನ ಅಂಗವಿಕಲರು ಪಾಸಾಗಿದ್ದಾರೆ.[2015ರ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ]
ಮಾಧ್ಯಮವಾರು ಸಾಧನೆ
ಕನ್ನಡ ಮಾಧ್ಯಮದಲ್ಲಿ ಶೇ. 53 ಸಾಧನೆಯಾಗಿದ್ದರೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ಶೇ. 66 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ವಿಭಾಗದಲ್ಲಿ ಮನಗರ ವಿದ್ಯಾರ್ಥಿಗಳ ಸಾಧನೆ ಉತ್ತಮವಾಗಿದೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ












Click it and Unblock the Notifications