ಕರ್ನಾಟಕ ಪಿಯುಸಿ ಫಲಿತಾಂಶ: ಇವರ ಫಲಿತಾಂಶ ಕಂಡು ಅಂಧತ್ವವೂ ನಾಚಿತು!
ಕೆಲವೊಮ್ಮೆ ಸಾಧನೆಗೆ ಯಾವ ನ್ಯೂನತೆಗಳೂ ಅಡ್ಡಿಯಾಗುವುದಿಲ್ಲ, ಸಾಧಿಸಬೇಕೆಂಬ ಮನೋಬಲದೆದುರು ನ್ಯೂನತೆಗಳೇ ಸೋಲುತ್ತವೆ! ಅದಕ್ಕೆ ಉತ್ತಮ ಉದಾಹರಣೆ ಅಂಧತ್ವವನ್ನೂ ಮೆಟ್ಟಿನಿಂತು ಸಾಧನೆ ಮಾಡಿದ ಓಂಕಾರ ಪಾವಸ್ಕರ್ ಮತ್ತು ಕರೆಪ್ಪ ಬಾಳಪ್ಪ್ ಶಿಡ್ಲ್ಯಾಳ.
ಕಾರವಾರ, ಮೇ 12: ಕೆಲವೊಮ್ಮೆ ಸಾಧನೆಗೆ ಯಾವ ನ್ಯೂನತೆಗಳೂ ಅಡ್ಡಿಯಾಗುವುದಿಲ್ಲ, ಸಾಧಿಸಬೇಕೆಂಬ ಮನೋಬಲದೆದುರು ನ್ಯೂನತೆಗಳೇ ಸೋಲುತ್ತವೆ, ಅವು ಗೌಣ ಎನ್ನಿಸಿಬಿಡುತ್ತವೆ! ಅದಕ್ಕೆ ಉತ್ತಮ ಉದಾಹರಣೆ ಅಂಧತ್ವವನ್ನೂ ಮೆಟ್ಟಿನಿಂತು ಸಾಧನೆ ಮಾಡಿದ ಓಂಕಾರ ಪಾವಸ್ಕರ್.
ಕಾರವಾರದ ಪಿಯು ಸರ್ಕಾರಿ ಕಾಲೇಜಿನ ವಿದ್ಯಾರ್ಥಿ ಓಂಕಾರ್ ಪಾವಸ್ಕರ್ ಅಂಧತ್ವದಿಂದ ಬಳಲುತ್ತಿದ್ದರೂ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.94.33 ಅಂಕ ಗಳಿಸುವ ಮೂಲಕ ಮನೋಬಲದೆದುರು ಬೇರೆಲ್ಲ ಗೌಣ ಎಂಬುದನ್ನು ಸಾಧಿಸಿ ತೋರಿಸಿದ್ದಾರೆ. ಸಮಾಜಶಾಸ್ತ್ರದಲ್ಲಿ ನೂರಕ್ಕೆ ನೂರು ಅಂಕ ಗಳಿಸಿದ್ದಲ್ಲದೆ ಇತಿಹಾಸ -95, ಅರ್ಥಶಾಸ್ತ್ರ-94, ರಾಜ್ಯ ಶಾಸ್ತ್ರ-93, ಹಿಂದಿ-96, ಇಂಗ್ಲಿಷ್-88 ಅಂಕ ಪಡೆದಿರುವ ಇವರು ತಂದೆ-ತಾಯಿ, ಒಡಹುಟ್ಟಿದವರು ಮತ್ತು ಕಾಲೇಜಿಗೆ ಕೀರ್ತಿ ತಂದಿದ್ದಾರೆ.[ಕರ್ನಾಟಕ ಪಿಯುಸಿ ಫಲಿತಾಂಶ: ಮಂಗಳೂರಿನ ದರ್ಶನ್, ಪ್ರಣವ್ ಸಾಧನೆ]

ಯಾವ ನ್ಯೂನತೆಯೂ ಇಲ್ಲದವರೂ ಪಡೆಯಲಾಗದಷ್ಟು ಅಂಕಗಳಿಸಿ, ಮನೋಬಲವಿದ್ದರೆ ಏನನ್ನಾದರೂ ಸಾಧಿಸಬಹುದು ಎಂಬುದನ್ನು ತೋರಿಸಿಕೊಟ್ಟಿದ್ದಾರೆ.[ತಾಯಿಯೇ ನನಗೆ ಸ್ಫೂರ್ತಿ: ಪಿಯುಸಿ ಟಾಪರ್ ಸೃಜನಾ]
ಕಾಲೇಜಿಗೆ ಪ್ರಥಮ ಸ್ಥಾನ ಗಳಿಸಿದ ಅಂಧ ವಿದ್ಯಾರ್ಥಿ
ಓಂಕಾರ್ ಅವರಂತೆಯೇ ಬೆಳಗಾವಿಯ ಲಿಂಗರಾಜ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕರೆಪ್ಪ ಬಾಳಪ್ಪ್ ಶಿಡ್ಲ್ಯಾಳ ಕಲಾವಿಭಾಗದಲ್ಲಿ ಶೇ. 93.83 ಅಂಕ ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.'[ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ: ಸೃಜನಾ, ರಾಧಿಕಾ, ಚೈತ್ರಾ ಟಾಪರ್ಸ್]

ದೃಷ್ಟಿಯಿಲ್ಲದ ಕಾರಣ ಕರೆಪ್ಪ ಅವರಿಗೆ ಓಡುವುದಕ್ಕೆ ಆಗುತ್ತಿರಲಿಲ್ಲ. ಪಠ್ಯವನ್ನು ಮೊಬೈಲಿನಲ್ಲಿ ರೆಕಾರ್ಡ್ ಮಾಡಿಸಿಕೊಂಡು ಪಠ್ಯವನ್ನು ಅರ್ಥ ಮಾಡಿಕೊಳ್ಳುತ್ತಿದ್ದ ಕರೆಪ್ಪ ಯಾವ ನ್ಯೂನತೆಯೂ ಇಲ್ಲದ ಮಕ್ಕಳಿಗೂ ಸಾಧಿಸಲಾಗದ್ದನ್ನು ಸಾಧಿಸಿ ತೋರಿಸಿದ್ದಾರೆ. ಐಎಎಸ್ ಅಥವಾ ಕೆಎಎಸ್ ಮಾಡುವ ಮಹದಾಸೆ ಕರೆಪ್ಪ ಅವರದು.
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್












Click it and Unblock the Notifications