ದ್ವಿತೀಯ ಪಿಯುಸಿ ಫಲಿತಾಂಶ: ಕೃತಿ, ವರ್ಷಿಣಿ, ಸ್ವಾತಿ ಟಾಪರ್ಸ್
ಬೆಂಗಳೂರು, ಏಪ್ರಿಲ್ 15: ದ್ವಿತೀಯ ಪಿಯುಸಿ ಪರೀಕ್ಷೆಯ ಪಲಿತಾಂಶವನ್ನು ಸೋಮವಾರ ಪದವಿಪೂರ್ವ ಇಲಾಖೆಯ ನಿರ್ದೇಶಕಿ ಸಿ ಶಿಖಾ ಬಿಡುಗಡೆ ಮಾಡಿದ್ದಾರೆ.
ವಿಜ್ಞಾನ ವಿಭಾಗದಲ್ಲಿ 596(600) ಅಂಕ ಪಡೆದ ಬೆಂಗಳೂರಿನ ರಜತ್ ಕಶ್ಯಪ್ ಮೊದಲ ಸ್ಥಾನ ಪಡೆದಿದ್ದರೆ, ವಾಣಿಜ್ಯ ವಿಭಾಗದಲ್ಲಿ ದಕ್ಷಿಣ ಕನ್ನಡದ ಓಲ್ವಿಟಾ ಆನ್ಸಿಲಾ ತಲಾ 596(600) ಅಂಕ ಪಡೆದು ಮೊದಲ ಸ್ಥಾನ ಪಡೆದಿದ್ದರೆ. ಕಲಾ ವಿಭಾಗದಲ್ಲಿ ಬಳ್ಳಾರಿಯ ಇಂದು ಪಿಯು ಕಾಲೇಜ್ ಎಲ್ಲಾ ಟಾಪ್ ಐದು ಸ್ಥಾನಗಳನ್ನೂ ಬಾಚಿಕೊಂಡಿದ್ದು, ಇದೇ ಕಾಲೇಜಿನ ಕುಸುಮ ಉಜ್ಜಿನಿ ಮೊದಲ ಸ್ಥಾನ ಗಳಿಸಿದ್ದಾರೆ. ಅವರು ಪಡೆ ಅಂಕ 594(600)

ಈ ಬಾರಿಯ ಫಲಿತಾಂಶದಲ್ಲೂ ಎಂದಿನಂತೇ ಬಾಲಕಿಯರು ಮೇಲುಗೈ ಸಾಧಿಸಿದ್ದು, ಗ್ರಾಮಾಂತರ ಪ್ರದೇಶದಲ್ಲಿರುವ ವಿದ್ಯಾರ್ಥಿಗಳೇ ಹೆಚ್ಚು ಉತ್ತೀರ್ಣರಾಗಿದ್ದಾರೆ. ಉಡುಪಿ ಜಿಲ್ಲೆ ಮೊದಲ ಸ್ಥಾನ ಪಡೆದರೆ, ದಕ್ಷಿಣ ಕನ್ನಡ ದ್ವಿತೀಯ ಮತ್ತು ಕೊಡಗು ಜಿಲ್ಲೆ ತೃತೀಯ ಸ್ಥಾನ ಪಡೆದಿದೆ. ಮೂರೂ ವಿಭಾಗಗಳಲ್ಲಿ ಅತೀ ಹೆಚ್ಚು ಅಂಕ ಪಡೆದ ಟಾಪ್ ಐದು ವಿದ್ಯಾರ್ಥಿಗಳ ಪಟ್ಟಿ ಇಲ್ಲಿದೆ.
ದ್ವಿತೀಯ ಪಿಯು ಪರೀಕ್ಷೆ ಮಾ.1ರಿಂದ ಮಾರ್ಚ್ 18ರವರೆಗೆ ನಡೆದಿತ್ತು. ಪ್ರಸಕ್ತ ಸಾಲಿನಲ್ಲಿ 6.73 ಲಕ್ಷ ವಿದ್ಯಾರ್ಥಿಗಳು ಮಾರ್ಚ್ನಲ್ಲಿ ದ್ವಿತೀಯ ಪಿಯು ಪರೀಕ್ಷೆ ಬರೆದಿದ್ದರು.

ವಿಜ್ಞಾನ ವಿಭಾಗ
ರಜತ್ ಕಶ್ಯಪ್, ಕುಮಾರನ್ಸ್ ಪಿಯು ಕಾಲೇಜು ಬೆಂಗಳೂರು 594 (600) ಅಂಕ, ಪ್ರಥಮ ಸ್ಥಾನ.
ದಿವ್ಯಾ, ವಿದ್ಯಾಮಂದಿರ ಪಿಯು ಕಾಲೇಜು ಮಲ್ಲೇಶ್ವರಂ ಬೆಂಗಳೂರು, 593 (600) ಅಂಕ, ದ್ವಿತೀಯ ಸ್ಥಾನ
ಪ್ರಿಯನಾಯಕ್, ಆರ್ವಿ ಪಿಯು ಕಾಲೇಜು ಜಯನಗರ ಬೆಂಗಳೂರು 593(600) ಅಂಕ, ತೃತೀಯ ಸ್ಥಾನ ಪಡೆದಿದ್ದಾರೆ.

ವಾಣಿಜ್ಯ ವಿಭಾಗ
ವೋಲ್ವಿತ ಅನ್ಸಿಲಾ ಡಿಸೋಜ ,ಆಳ್ವಾಸ್ ಪಿಯು ಕಾಲೇಜು, ದಕ್ಷಿಣ ಕನ್ನಡ 596 (600) ಅಂಕ, ಪ್ರಥಮ ಸ್ಥಾನ
ಶ್ರೀಕೃಷ್ಣ ಶರ್ಮ, ಸತ್ಯಸಾಹಿ ಲೋಕಸೇವಾ ಕಾಲೇಜು ದಕ್ಷಿಣ ಕನ್ನಡ, 596 (600) ಅಂಕ, ದ್ವಿತೀಯ ಸ್ಥಾನ
ಶ್ರೇಯ ಶೆಣೈ, ಕೆನರಾ ಪಿಯು ಕಾಲೇಜು ದಕ್ಷಿಣ ಕನ್ನಡ 595 (600) ಅಂಕ, ತೃತೀಯ ಸ್ಥಾನ

ಕಲಾ ವಿಭಾಗ
ಕುಸುಮ ಉಜ್ಜಿನಿ, ಇಂದು ಪಿಯು ಕಾಲೇಜು ಬಳ್ಳಾರಿ 594 (600) ಅಂಕ, ಪ್ರಥಮ ಸ್ಥಾನ
ಹೊಸಮನಿ ಚಂದ್ರಪ್ಪ, ಇಂದು ಪಿಯು ಕಾಲೇಜು ಬಳ್ಳಾರಿ, 591 (600) ಅಂಕ, ಎರಡನೇ ಸ್ಥಾನ
ನಾಗರಾಜು, ಇಂದು ಪಿಯು ಕಾಲೇಜು, ಬಳ್ಳಾರಿ 591(600) ಅಂಕ, ಮೂರನೇ ಸ್ಥಾನ

ಯಾವ ವಿಭಾಗಕ್ಕೆ ಎಷ್ಟು?
ಕಲಾ: 50.53%
ವಾಣಿಜ್ಯ: 66.39%
ವಿಜ್ಞಾನ: 66.58%
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications