ಏಪ್ರಿಲ್ ಕೊನೆಯ ವಾರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ: ತನ್ವೀರ್ ಸೇಠ್
ಬೆಂಗಳೂರು, ಮಾರ್ಚ್ 21: ಈ ಬಾರಿ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಎಸ್ ಎಸ್ ಎಸ್ ಸಿ ಮತ್ತು ಪಿಯುಸಿ ಪರೀಕ್ಷೆಯ ಫಲಿತಾಂಶಗಳೂ ಬೇಗನೇ ಹೊರಬೀಳುವ ನಿರೀಕ್ಷೆ ಇದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ದ್ವಿತಿಯ ಪಿಯುಸಿ ಪರೀಕ್ಷೆಯ ಫಲಿತಾಂಶ ಏಪ್ರಿಲ್ ಕೊನೆಯ ವಾರದಲ್ಲೇ ಪ್ರಕಟಗೊಳ್ಳುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ.
ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ: ವಿದ್ಯಾರ್ಥಿಗಳೇ ಆಲ್ ದಿ ಬೆಸ್ಟ್
ದ್ವಿತೀಯ ಪಿಯುಸಿ ಪರೀಕ್ಷೆಗಳು ಈಗಾಗಲೇ ಮುಕ್ತಾಯವಾಗಿದ್ದು, ಒಟ್ಟು 1004 ಪರೀಕ್ಷಾ ಕೇಂದ್ರಗಳಲ್ಲಿ, 6.90 ಲಕ್ಷ ವಿದ್ಯಾರ್ಥಿಗಳು ತಮ್ಮ ಬದುಕಿನ ಪ್ರಮುಖ ಘಟ್ಟವಾದ ಪಿಯುಸಿ ಪರೀಕ್ಷೆಯನ್ನು ಬರೆದಿದ್ದಾರೆ. ಈ ಪೈಕಿ 3.52 ಲಕ್ಷ ವಿದ್ಯಾರ್ಥಿಗಳು ಹಾಗೂ 3.37 ವಿದ್ಯಾರ್ಥಿನಿಯರಿದ್ದಾರೆ.
ಮಾ.1 ರಿಂದ 16 ರವರೆಗೆ ನಡೆದ ಪರೀಕ್ಷೆಯ ಮೌಲ್ಯಮಾಪನ ಮಾ.26 ರಂದು ಆರಂಭವಾಗಲಿದೆ. ಮೌಲ್ಯಮಾಪನಕ್ಕೆ ಸಂಬಂಧಿಸಿದಂತೆ ಪ್ರತಿವರ್ಷ ನಡೆಯುತ್ತಿದ್ದ ಉಪನ್ಯಾಸಕರ ಮುಷ್ಕರಗಳು ಈ ಬಾರಿ ನಡೆಯದಿರುವುದು ವಿದ್ಯಾರ್ಥಿಗಳನ್ನು ನಿರಾಳವಾಗಿಸಿದೆ. ಒಟ್ಟಿನಲ್ಲಿ ಎಲ್ಲವೂ ಅಂದುಕೊಂಡಂತೇ ಆದರೆ ಏಪ್ರಿಲ್ ಅಂತ್ಯದ ಹೊತ್ತಿಗೆ ಫಲಿತಾಂಶ ಹೊರಬೀಳಲಿದೆ.