Karnataka 2nd PUC supplementary result ಪೂರಕ ಫಲಿತಾಂಶ ಸೋಮವಾರ ಪ್ರಕಟ: ಪರಿಶೀಲಿಸುವುದು ಹೇಗೆ?
ಬೆಂಗಳೂರು, ಸೆಪ್ಟಂಬರ್ 11: ಸೋಮವಾರ ಸೆಪ್ಟಂಬರ್ 12ರಂದು ದ್ವಿತೀಯ ಪಿಯುಸಿಯ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಬೆಳಗ್ಗೆ 11ಗಂಟೆ ನಂತರ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಫಲಿತಾಂಶ ಪರಿಶೀಲಿಸಬಹುದು.
ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ಫಲಿತಾಂಶ ಪ್ರಕಟಿಸಲಿದ್ದು, ಇಲಾಖೆ ಅಧಿಕೃತ ವೆಬ್ಸೈಟ್ (karresults.nic.in) ನಲ್ಲಿ ವಿದ್ಯಾರ್ಥಿಗಳು ಫಲಿತಾಂಶ ನೋಡಬಹುದು ಎಂದು ರಾಜ್ಯ ಶಿಕ್ಷಣ ಸಚಿವ ಬಿ.ನಾಗೇಶ್ ತಿಳಿಸಿದ್ದಾರೆ. ಆನ್ಲೈನ್ ಮೂಲಕ ಹೇಗೆ ದ್ವಿತೀಯ ಪಿಯುಸಿ ಪೂರಕ ಫಲಿತಾಂಶ ನೋಡಬೇಕು ಎಂದಬುದನ್ನು ಇಲ್ಲಿ ಪರಿಶೀಲಿಸಬಹುದು.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿಫಲರಾದ ಅಥವಾ ಯಾವುದೇ ವಿಷಯದಲ್ಲಿ ಅಂಕಗಳನ್ನು ಸುಧಾರಿಸಲು ಬಯಸುವ ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ಪೂರಕ ಪರೀಕ್ಷೆ ವೇಳೆ ಬರೆಯಬಹುದು. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಲ್ಲಿ ಅರ್ಹತೆ ಪಡೆಯಲು ವಿದ್ಯಾರ್ಥಿಗಳು ಪ್ರತಿ ವಿಷಯದಲ್ಲಿ ಮತ್ತು ಒಟ್ಟಾರೆಯಾಗಿ ಕನಿಷ್ಠ 35 ಪ್ರತಿಶತ ಗಳಿಸಿರುವುದು ಕಡ್ಡಾಯವಾಗಿದೆ.

ವಿದ್ಯಾರ್ಥಿಗಳು ಸರ್ಕಾರದ ಅಧಿಕೃತ ವೆಬ್ಸೈಟ್ karresults.nic.in, pue.karnataka.gov.in ಅಥವಾ pue.kar.nic.in ವೆಬ್ಸೈಟ್ನಲ್ಲಿ ಫಲಿತಾಂಶ ನೀಡಬಹುದು. ಮೊದಲು ವೆಬ್ಸೈಟ್ಗೆ ಭೇಟಿ ನೀಡಿ. ನಂತರ ನೋಂದಣಿ ಸಂಖ್ಯೆ, ಹುಟ್ಟಿದ ದಿನಾಂಕ ಮತ್ತು ವಿಷಯ ಸಂಯೋಜನೆ ವಿವರಗಳನ್ನು ನಿಗದಿತ ಸ್ಥಳದಲ್ಲಿ ಹಾಕಬೇಕು. ಅಲ್ಲಿ ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಫಲಿತಾಂಶವು ಎಂದು ತೋರಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಬಹುದು. ಜತೆಗೆ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಪ್ರಿಂಟ್ ತೆಗೆದುಕೊಳ್ಳಲು ಸಹ ಸರ್ಕಾರ ಅವಕಾಶ ಮಾಡಿಕೊಟ್ಟಿದೆ.

ಕರ್ನಾಟಕ 2ನೇ ಪಿಯುಸಿ ಪೂರಕ ಪರೀಕ್ಷೆಯು ಕಳೆದ ತಿಂಗಳೂ ಆಗಸ್ಟ್ 12 ರಿಂದ 25ರವರೆಗೆ ನಡೆದಿತ್ತು. 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು. ಈ ಪೈಕಿ 6,83,563 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications