ಹಾಲು ಉತ್ಪಾದನೆಯಲ್ಲಿ ಹೊಸ ದಾಖಲೆ ಬರೆದ ಕೆಎಂಎಫ್; ಗೋಪೂಜೆ ಮಾಡಿದ ಸಿಎಂ ಸಿದ್ದರಾಮಯ್ಯ
ಹಾಲು ಉತ್ಪಾದನೆ ವಿಚಾರದಲ್ಲಿ ಕನ್ನಡಿಗರ ಹೆಮ್ಮೆಯ ಕೆಎಂಎಫ್ ಹೊಸ ದಾಖಲೆ ಬರೆದಿದೆ. ದಿನವೊಂದಕ್ಕೆ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆ ಮಾಡಲಾಗುತ್ತಿದ್ದು, ಹೊಸ ಮೈಲಿಗಲ್ಲು ಸಾಧಿಸಿದೆ.
ಇದೇ ಮೊದಲ ಬಾರಿಗೆ ಕೆಎಂಎಫ್ ಹಾಲು ಸಂಗ್ರಹ ದಿನವೊಂದಕ್ಕೆ ಒಂದು ಕೋಟಿ ಲೀಟರ್ ತಲುಪಿದೆ. ಪ್ರತಿ ದಿನ 10 ಲಕ್ಷ ಲೀಟರ್ ಹಾಲು ಹೆಚ್ಚು ಉತ್ಪಾದನೆಯಾಗುತ್ತಿದ್ದು ಅದನ್ನು ಮಾರಾಟ ಮಾಡುವುದೇ ಕೆಎಂಎಫ್ಗೆ ದೊಡ್ಡ ಸವಾಲಾಗಿದೆ.

ಮಳೆಗಾಲದ ಆರಂಭದಲ್ಲೇ ಹಾಲು ಉತ್ಪಾದನೆಯಲ್ಲಿ ಹೊಸ ದಾಖಲೆ ಬರೆದಿದ್ದು, ಮುಂದಿನ ದಿನಗಳಲ್ಲಿ ಹಾಲಿನ ಉತ್ಪಾದನೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಹಾಲಿನ ಉತ್ಪಾದನೆಯಲ್ಲಿ ಹೊಸ ದಾಖಲೆ ಬರೆಯುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಗೂಪೂಜೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
ಸಿದ್ದರಾಮಯ್ಯ ಹೇಳಿದ್ದೇನು?
ಬೆಂಗಳೂರಿನ ಕೆಎಂಎಫ್ ಕಚೇರಿಯಲ್ಲಿ ಗೋಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೆಎಂಎಫ್ ಮೊಟ್ಟ ಮೊದಲ ಬಾರಿಗೆ ಒಂದು ಕೋಟಿ ಲೀಟರ್ ಹಾಲನ್ನು ಸಂಗ್ರಹಿಸಿ ನಾಡಿನ ಹೈನುಗಾರಿಕೆಯಲ್ಲಿ ಹೊಸದೊಂದು ದಾಖಲೆ ನಿರ್ಮಿಸಿದೆ. ಸಾಧನೆಯ ಹಿಂದಿನ ಶಕ್ತಿಯಾಗಿರುವ ನಾಡಿನ ರೈತಾಪಿ ವರ್ಗಕ್ಕೆ ಧನ್ಯವಾದ ಎಂದು ಹೇಳಿದರು.
ರಾಜ್ಯದಲ್ಲಿ ನಿತ್ಯ ಸರಾಸರಿ 10 ಲಕ್ಷ ಲೀಟರ್ ಹಾಲು ಹೆಚ್ಚುವರಿಯಾಗಿ ಉತ್ಪಾದನೆ ಆಗುತ್ತಿದೆ. ರೈತರು ಹೆಚ್ಚು ಉತ್ಪಾದಿಸಿ ತರುತ್ತಿರುವ ಹಾಲನ್ನು ಡೈರಿಗೆ ತರಬೇಡಿ ಎಂದು ನಿರಾಕರಿಸೋಕೆ ಆಗುವುದಿಲ್ಲ, ಅವರಿಂದ ಖರೀದಿ ಮಾಡಲೇಬೇಕು ಎಂದು ನಿರ್ಧರಿಸಿ ಈ ಮೊದಲು ಮಾರಾಟ ಮಾಡುತ್ತಿದ್ದ ಹಾಲಿನ ಪ್ಯಾಕೇಟ್ ಗಳಿಗೆ 50 ಮಿಲೀ ಹಾಲನ್ನು ಹೆಚ್ಚು ಸೇರಿಸಿ 2 ರೂಪಾಯಿ ಹೆಚ್ಚು ಹಣ ಸಂಗ್ರಹಿಸಲಾಗುತ್ತಿದೆ. ಇದನ್ನೇ ವಿರೋಧಪಕ್ಷಗಳು ಬೆಲೆಯೇರಿಕೆ ಎನ್ನುತ್ತಿದ್ದಾರೆ, ಅವರಿಗೆ ರೈತರ ಹಿತಕ್ಕಿಂತ ರಾಜಕೀಯವೇ ಮುಖ್ಯವಾಗಿದೆ ಎಂದು ವಿಪಕ್ಷಗಳ ಟೀಕೆಗಳಿಗೆ ಉತ್ತರ ನೀಡಿದರು.
ಕಾಂಗ್ರೆಸ್ ಟ್ವೀಟ್
ಕೆಎಂಎಫ್ ಸಾಧನೆ ಬಗ್ಗೆ ಕರ್ನಾಟಕ ಕಾಂಗ್ರೆಸ್ ಕೂಡ ಟ್ವೀಟ್ ಮಾಡಿದೆ. ರಾಜ್ಯದ ಕೆಎಂಎಫ್ ಇತಿಹಾಸದಲ್ಲಿ ದಾಖಲೆ ಸೃಷ್ಟಿಯಾಗಿದೆ. ಕೆಎಂಎಫ್ ಹಾಲು ಸಂಗ್ರಹದಲ್ಲಿ ಇದೇ ಮೊದಲ ಬಾರಿಗೆ 1 ಕೋಟಿ ಲೀಟರ್ ಗೆ ತಲುಪಿದೆ. ಬರ ಎದುರಿಸಿಯೂ ಕೂಡ ರಾಜ್ಯದಲ್ಲಿ ಹೈನೋಧ್ಯಮ ಉತ್ತಮ ಸ್ಥಿತಿಗೆ ತಲುಪಿದ್ದು ಸಂತಸದ ವಿಷಯ. ಹಾಲು ಉತ್ಪಾದನೆಯಲ್ಲಿ ದಾಖಲೆ ನಿರ್ಮಿಸಿದ್ದು ಸಮೃದ್ಧ ಕರ್ನಾಟಕದ ಪ್ರತೀಕವಾಗಿದೆ ಎಂದು ಹೇಳಿದರು.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications