ನವೀಕರಿಸಬಲ್ಲ ಶಕ್ತಿ ಬಳಕೆಗೆ ಕರ್ನಾಟಕ ಬದ್ಧ
ಬೆಂಗಳೂರು, ಸೆ. 10 : ನವೀಕರಿಸಬಲ್ಲ ಶಕ್ತಿ ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿ ಹಮ್ಮಿಕೊಂಡಿದ್ದ ಪರ್ಯಾಯ ಶಕ್ತಿ ಬಳಕೆ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ಇಂಧನ ಮರುಬಳಕೆ ಕುರಿತು ತಯಾರಿಸುವ ಯೋಜನೆಗಳಿಗೆ ರಾಜ್ಯ ಸರ್ಕಾರ ಬದ್ಧವಾಗಿರುತ್ತದೆ, 'ಶಕ್ತಿ ಎಲ್ಲರಗೂ' ಎಂಬ ತತ್ವದಡಿ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ತಿಳಿಸಿದರು. ಕೇಂದ್ರ ಇಂಧನ ಸಚಿವ ಪಿಯುಷ್ ಗೋಯಲ್ ಕಾರ್ಯಕ್ರಮದಲ್ಲಿ ಹಾಜರಿದ್ದರು.(ನಾನು ಡಿಸಿಎಂ ಸ್ಥಾನದ ಆಕಾಂಕ್ಷಿಯಲ್ಲ : ಡಿಕೆಶಿ)

ಡಿ.ಕೆ.ಶಿವಕುಮಾರ್ ಭಾಷಣದ ಹೈಲೈಟ್ಸ್
* ಮುಂದಿನ ಮೂರು ವರ್ಷದಲ್ಲಿ ಈಗ ಉತ್ಪಾದನೆಯಾಗುತ್ತಿರುವ 14,301 ಮೆಗಾ ವ್ಯಾಟ್ ವಿದ್ಯುತ್ಗೆ ಹೆಚ್ಚುವರಿ 3,100 ಮೆಗಾ ವ್ಯಾಟ್ ವಿದ್ಯುತ್ ಸೇರ್ಪಡೆ ಮಾಡುವ ಗುರಿ ಹೊಂದಲಾಗಿದೆ.
* ಕೂಡಗಿ ವಿದ್ಯುತ್ ಸ್ಥಾವರದಿಂದ ಎರಡು ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ನಿರೀಕ್ಷೆ ಮಾಡಲಾಗಿದೆ.
* ಗುಲ್ಬರ್ಗದಲ್ಲಿ ಕಿರು ಜಲವಿದ್ಯುತ್ ಸ್ಥಾವರ ಸ್ಥಾಪನೆ ಮಾಡುವ ಚಿಂತನೆಯಿದ್ದು 1,320 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯಾಗಲಿದೆ.
* ರಾಜ್ಯದ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಅಗತ್ಯವಿರುವ ಕಲ್ಲಿದ್ದಲು ನೀಡಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ.
* ಆದರೆ, ಕಲ್ಲಿದ್ದಲು ಬಳಕೆ ಮಾಡದೆ ಶಕ್ತಿ ಉತ್ಪಾದಿಸುವ ಯೋಜನೆಗಳಿಗೆ ಒತ್ತು ನೀಡಲಾಗುತ್ತಿದೆ.
* ಪರ್ಯಾಯ ಶಕ್ತಿ ಮೂಲಗಳಿಂದ ಸದ್ಯ 4,000 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ.
* ಪವನ ವಿದ್ಯುತ್, ಸೋಲಾರ್, ಬಯೋ ಪವರ್ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.
* 2021ರೊಳಗೆ ಸೋಲಾರ್ನಿಂದಲೇ ಎರಡು ಸಾವಿರ ಮೆಗಾ ವ್ಯಾಟ್ ವಿದ್ಯುತ್ ಪಡೆಯುವ ಗುರಿ ಹೊಂದಲಾಗಿದೆ.
* ರೈತರ ಅನುಕೂಲಕ್ಕೆ ಸೋಲಾರ್ ಬಳಕೆ ಮಾಡಲು ತಿಳಿಸಲಾಗಿದ್ದು 'ಸೂರ್ಯ ರೈತ' ಯೋಜನೆಯಡಿ ಪಂಪ್ಸೆಟ್ಗಳಿಗೆ ಸೋಲಾರ್ ಅಳವಡಿಕೆ ಮಾಡಲಾಗುವುದು.
* ಎಸ್ಸಿ, ಎಸ್ಟಿ ವರ್ಗದವರಿಗೆ ಸೋಲಾರ್ ಪಂಪ್ ನೀಡುವ ಚಿಂತನೆ ಮಾಡಲಾಗಿದ್ದು ಕೇಂದ್ರ ಸರ್ಕಾರ ಇದಕ್ಕೆ ಅಗತ್ಯ ಅನುದಾನ ನೀಡಬೇಕು.
* ಬೆಂಗಳೂರು ಮಹಾನಗರದ ಸಮರ್ಪಕ ವಿದ್ಯುತ್ ಪೂರೈಕೆ ಮತ್ತು ಲೈನ್ ದುರಸ್ತಯಿಗೆ 1,500 ಕೋಟಿ ರೂ. ಮೀಸಲಿಡಲಾಗಿದೆ.
* ರಾಜ್ಯದ ಎಲ್ಲಾ ವಿದ್ಯುತ್ ಮಾರ್ಗಗಳ ದುರಸ್ತಿಗೆ ಕೆಪಿಟಿಸಿಎಲ್ ಕ್ರಮ ತೆಗೆದುಕೊಳ್ಳಲಿದೆ. ಇನ್ನೂ ಸಾವಿರ ಕಿಮೀ ವ್ಯಾಪ್ತಿಯ ಹೊಸ ಮಾರ್ಗ ಎಳೆಯಲು ಚಿಂತನೆ ನಡೆಸಲಾಗಿದೆ.
* ಅಗತ್ಯವಿರುವಕಡೆ ಗ್ರಿಡ್ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು 77.46 ಕೋಟಿ ರೂ. ಅಗತ್ಯವಿದೆ.
* ರಾಜೀವ್ಗಾಂಧಿ ವಿದ್ಯುದ್ದೀಕರಣ ಯೋಜನೆ ಪ್ರಗತಿಯಲ್ಲಿದ್ದು ಮುಂದಿನ ವರ್ಷದೊಳಗೆ ಎಲ್ಲ ಫಲಾನುಭವಿಗಳಿಗೆ ಸೌಲಭ್ಯ ಕಲಪಿಸಲಾಗುವುದು.
* ಸ್ಮಾರ್ಟ್ ಗ್ರಿಡ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು ದೇಶದಲ್ಲಿ ಇದು ಮೊದಲ ಸಾಧನೆಯಾಗಲಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
-
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications