ರಾಜ್ಯಪಾಲರ ವಾರ್ನಿಂಗ್ ಗೆ ಬೆಲೆಯಿಲ್ಲ: ಮತ್ತೆ ವಾರ್ನಿಂಗ್ ನೀಡಿದ ಗವರ್ನರ್
Recommended Video
ಬೆಂಗಳೂರು, ಜುಲೈ 20: ಈ ಹಿಂದೆ ಎರಡು ಬಾರಿ ವಾರ್ನಿಂಗ್ ನೀಡಿದ ರಾಜ್ಯಪಾಲರ ಆದೇಶಕ್ಕೆ ಕ್ಯಾರೇ ಅನ್ನದ ಸಮ್ಮಿಶ್ರ ಸರಕಾರಕ್ಕೆ ವಜೂಭಾಯಿ ವಾಲಾ ಮತ್ತೆ ಎಚ್ಚರಿಕೆ ನೀಡಿದ್ದಾರೆ.
ಬಹುಮತವಿಲ್ಲದ ಸರಕಾರವಿದು, ಮಹತ್ವದ ಕಡತಗಳನ್ನು ವಿಲೇವಾರಿ ಮಾಡುವುದು ಮತ್ತು ಅಧಿಕಾರಿಗಳನ್ನು ವರ್ಗಾವಣೆ ಮಾಡದಂತೆ ಈ ಹಿಂದೆಯೂ ರಾಜಭವನ ಕುಮಾರಸ್ವಾಮಿ ಸರಕಾರಕ್ಕೆ ಸೂಚಿಸಿತ್ತು.
ಈ ಬಗ್ಗೆ, ಮುಖ್ಯಕಾರ್ಯದರ್ಶಿಯವರಿಗೆ ಪತ್ರ ಬರೆದಿರುವ ರಾಜ್ಯಪಾಲರ ಕಚೇರಿ, ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಯಾವುದೇ ಫೈಲ್ ಗಳನ್ನು ಕ್ಲಿಯರ್ ಮಾಡದಂತೆ ಸೂಚಿಸಿದೆ ಎಂದು ತಿಳಿದು ಬಂದಿದೆ.

ವಿಶ್ವಾಸಮತಯಾಚನೆಗೆ ಎರಡು ಬಾರಿ ರಾಜ್ಯಪಾಲರು ಸಮ್ಮಿಶ್ರ ಸರಕಾರಕ್ಕೆ ಗಡುವನ್ನು ನೀಡಿದ್ದರು. ಆದರೆ, ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಮುಖ್ಯಮಂತ್ರಿಗಳು, ಗೌರವದಿಂದ ಸಾಧ್ಯವಿಲ್ಲ ಎಂದು ರಾಜ್ಯಪಾಲರಿಗೆ ತಿರುಗೇಟು ನೀಡಿದ್ದರು.
ರಾಜ್ಯ ರಾಜಕೀಯದ ಅಸ್ಥಿರತೆ ಮತ್ತು ದೈನಂದಿನ ಬೆಳವಣಿಗೆಯ ಬಗ್ಗೆ ಕೇಂದ್ರ ಗೃಹ ಸಚಿವಾಲಯಕ್ಕೆ ರಾಜ್ಯಪಾಲರು ವರದಿ ನೀಡುತ್ತಿದ್ದು ಮುಖ್ಯಕಾರ್ಯದರ್ಶಿಗಳಿಗೆ (ಚೀಫ್ ಸೆಕ್ರೆಟರಿ) ಮಹತ್ವದ ಸೂಚನೆ ನೀಡಿದ್ದಾರೆಂದು ಈ ಹಿಂದೆಯೂ ವರದಿಯಾಗಿತ್ತು.
ಸಮ್ಮಿಶ್ರ ಸರಕಾರದ ಪಾಲುದಾರ ಪಕ್ಷಗಳ ಕೆಲವು ಶಾಸಕರು ರಾಜೀನಾಮೆ ನೀಡಿದ್ದಾರೆ. ಇದರಿಂದ, ಮೇಲ್ನೋಟಕ್ಕೆ ಈ ಸರಕಾರ ಅಲ್ಪಮತಕ್ಕೆ ಕುಸಿದಿರುವ ಸಾಧ್ಯತೆಯಿದೆ. ಹೀಗಾಗಿ, ಈ ಸಂದರ್ಭದಲ್ಲಿ ಪ್ರಮುಖ ನಿರ್ಧಾರಗಳು ಬೇಡ ಎಂದು ರಾಜ್ಯಪಾಲರು ಸೂಚಿಸಿದ್ದರು. ಆದಾಗ್ಯೂ, ಸಚಿವ ಸಂಪುಟ ಸಭೆ ನಡೆದಿತ್ತು.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications