ರಾಜ್ಯದ 12 ಜಿಲ್ಲೆಗಳಿಗೆ ಹೊಸ ಪೊಲೀಸ್ ವರಿಷ್ಠಾಧಿಕಾರಿಗಳ ನೇಮಕ
New Superintendents of Police: ರಾಜ್ಯ ಸರ್ಕಾರ ಹೊಸ ವರ್ಷದ ಹಿಂದಿನ ದಿನ ಡಿಸೆಂಬರ್ 31, 2025ರಂದು ಆಡಳಿತ ಯಂತ್ರಕ್ಕೆ ಮೇಜರಿ ಸರ್ಜರಿ ಮಾಡಿದೆ. 12 ಜಿಲ್ಲೆಗಳಿಗೆ ಹೊಸ ಪೊಲೀಸ್ ವರಿಷ್ಠಾಧಿಕಾರಿಗಳ ನೇಮಕ ಮಾಡಿದೆ ಆದೇಶ ಹೊರಡಿಸಿದೆ. ಹಾಗಾದ್ರೆ, ಯಾರು ಎಲ್ಲಿಗೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಆಗಾಗ ರಾಜ್ಯ ಸರ್ಕಾರ ಇಂತಹ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಲಿರುತ್ತದೆ. ಆದರೆ, ಹೊಸ ವರ್ಷದ ಹಿಂದಿನ ದಿನವೇ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿರುವುದೇ ಇದೀಗ ಅಚ್ಚರಿಯ ವಿಚಾರವಾಗಿದೆ. ಅದೇನೇ ಇರಲಿ ಇದೀಗ ಹೊಸದಾಗಿ ಯಾವೆಲ್ಲಾ ಜಿಲ್ಲೆಗಳಿಗೆ ಪೊಲೀಸ್ ವರಿಷ್ಠಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ಯಾವೆಲ್ಲಾ ಜಿಲ್ಲೆಗಳಿಗೆ ಹೊಸ ಪೊಲೀಸ್ ವರಿಷ್ಠಾಧಿಕಾರಿಗಳ ನೇಮಕ?
* ಬೆಂಗಳೂರು ಗ್ರಾಮಾಂತರ - ಚಂದ್ರಕಾಂತ್ ಎಂ.ವಿ
* ಬೆಳಗಾವಿ - ಕೆ. ರಾಮರಾಜನ್
* ಶಿವಮೊಗ್ಗ - ಬಿ ನಿಖಿಲ್
* ರಾಯಚೂರು - ಅರುಣಾಂಶು ಗಿರಿ
* ಹಾಸನ - ಶುಭನ್ವಿತಾ
* ಚಿಕ್ಕಮಗಳೂರು - ಜಿತೇಂದ್ರ ಕುಮಾರ್ ದಯಾಮ್
* ಕೋಲಾರ - ಕನ್ನಿಕಾ ಸಿಕ್ರಿವಾಲ್
* ಕೊಡಗು - ಬಿಂದು ಮಣಿ
* ಮಂಡ್ಯ - ಶೋಭಾ ರಾಣಿ
* ಚಾಮರಾಜನಗರ - ಮುತ್ತುರಾಜು ಎಂ
* ಬಳ್ಳಾರಿ - ಪವನ್ ನೆಜ್ಜೂರ್
* ಮೈಸೂರು - ಮಲ್ಲಿಕಾರ್ಜುನ ಬಾಲದಂಡಿ
ಕೊನೆಗೂ ಸಿಕ್ಕೇಬಿಡ್ತು ಮುಂಬಡ್ತಿ: ರಾಜ್ಯ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್, ಎಡಿಜಿಪಿ ಬಿ. ದಯಾನಂದ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಇತ್ತೀಚೆಗಷ್ಟೇ ಆದೇಶ ಹೊರಡಿಸಿತ್ತು. ಜೊತೆಗೆ ಮೂರು ಮಂದಿ ಐಎಎಸ್ ಅಧಿಕಾರಿಗನ್ನು ಸಹ ವರ್ಗಾವಣೆ ಮಾಡಿತ್ತು.
ಪೊಲೀಸ್ ತರಬೇತಿ ಶಾಲೆಯ ಎಡಿಜಿಪಿ ಆಗಿದ್ದ ಅಲೋಕ್ ಕುಮಾರ್ ಅವರಿಗೆ ಡಿಜಿಪಿ ಹುದ್ದೆಗೆ ಬಡ್ತಿ ನೀಡಿ, ಕಾರಾಗೃಹ ಇಲಾಖೆಯ ಡಿಜಿಪಿಯಾಗಿ ನೇಮಕ ಮಾಡಲಾಗಿದೆ. ಅಲೋಕ್ ಕುಮಾರ್ ಅವರು ತಮ್ಮನ್ನು ಕಡೆಗಣಿಸಿ ಇತರರಿಗೆ ಬಡ್ತಿ ನೀಡಲಾಗುತ್ತಿದೆ ಎಂದು ಸಿಎಟಿಗೆ ಅರ್ಜಿ ಸಲ್ಲಿಲೆ ಮಾಡಿದ್ದರು. ಈ ಹಿನ್ನೆಲೆ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.
ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧದ ಫೋನ್ ಟ್ಯಾಪಿಂಗ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಆದೇಶಿಸಿದ್ದ ಇಲಾಖಾ ತನಿಖೆಯನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಇತ್ತೀಚೆಗೆ ರದ್ದುಪಡಿಸಿತ್ತು. ಇದರ ಬೆನ್ನಲ್ಲೇ ಅಲೋಕ್ ಕುಮಾರ್ಗೆ ಎಡಿಜಿಪಿಯಿಂದ ಡಿಜಿಪಿಯಾಗಿ ಬಡ್ತಿ ನೀಡಿದ ರಾಜ್ಯ ಸರ್ಕಾರ, ಕಾರಾಗೃಹ ಇಲಾಖೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು.
ಇನ್ನೂ ಕಾರಾಗೃಹ ಇಲಾಖೆಯ ಎಡಿಜಿಪಿ ಆಗಿದ್ದ ಬಿ.ದಯಾನಂದ್ ಅವರನ್ನು ಇದೀಗ ಪೊಲೀಸ್ ತರಬೇತಿ ಶಾಲೆಯ ಎಡಿಜಿಪಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಇದಕ್ಕೂ ಮುಂಚೆ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications