ರಾಜ್ಯದ 12 ಜಿಲ್ಲೆಗಳಿಗೆ ಹೊಸ ಪೊಲೀಸ್ ವರಿಷ್ಠಾಧಿಕಾರಿಗಳ ನೇಮಕ
New Superintendents of Police: ರಾಜ್ಯ ಸರ್ಕಾರ ಹೊಸ ವರ್ಷದ ಹಿಂದಿನ ದಿನ ಡಿಸೆಂಬರ್ 31, 2025ರಂದು ಆಡಳಿತ ಯಂತ್ರಕ್ಕೆ ಮೇಜರಿ ಸರ್ಜರಿ ಮಾಡಿದೆ. 12 ಜಿಲ್ಲೆಗಳಿಗೆ ಹೊಸ ಪೊಲೀಸ್ ವರಿಷ್ಠಾಧಿಕಾರಿಗಳ ನೇಮಕ ಮಾಡಿದೆ ಆದೇಶ ಹೊರಡಿಸಿದೆ. ಹಾಗಾದ್ರೆ, ಯಾರು ಎಲ್ಲಿಗೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಆಗಾಗ ರಾಜ್ಯ ಸರ್ಕಾರ ಇಂತಹ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಲಿರುತ್ತದೆ. ಆದರೆ, ಹೊಸ ವರ್ಷದ ಹಿಂದಿನ ದಿನವೇ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿರುವುದೇ ಇದೀಗ ಅಚ್ಚರಿಯ ವಿಚಾರವಾಗಿದೆ. ಅದೇನೇ ಇರಲಿ ಇದೀಗ ಹೊಸದಾಗಿ ಯಾವೆಲ್ಲಾ ಜಿಲ್ಲೆಗಳಿಗೆ ಪೊಲೀಸ್ ವರಿಷ್ಠಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ಯಾವೆಲ್ಲಾ ಜಿಲ್ಲೆಗಳಿಗೆ ಹೊಸ ಪೊಲೀಸ್ ವರಿಷ್ಠಾಧಿಕಾರಿಗಳ ನೇಮಕ?
* ಬೆಂಗಳೂರು ಗ್ರಾಮಾಂತರ - ಚಂದ್ರಕಾಂತ್ ಎಂ.ವಿ
* ಬೆಳಗಾವಿ - ಕೆ. ರಾಮರಾಜನ್
* ಶಿವಮೊಗ್ಗ - ಬಿ ನಿಖಿಲ್
* ರಾಯಚೂರು - ಅರುಣಾಂಶು ಗಿರಿ
* ಹಾಸನ - ಶುಭನ್ವಿತಾ
* ಚಿಕ್ಕಮಗಳೂರು - ಜಿತೇಂದ್ರ ಕುಮಾರ್ ದಯಾಮ್
* ಕೋಲಾರ - ಕನ್ನಿಕಾ ಸಿಕ್ರಿವಾಲ್
* ಕೊಡಗು - ಬಿಂದು ಮಣಿ
* ಮಂಡ್ಯ - ಶೋಭಾ ರಾಣಿ
* ಚಾಮರಾಜನಗರ - ಮುತ್ತುರಾಜು ಎಂ
* ಬಳ್ಳಾರಿ - ಪವನ್ ನೆಜ್ಜೂರ್
* ಮೈಸೂರು - ಮಲ್ಲಿಕಾರ್ಜುನ ಬಾಲದಂಡಿ
ಕೊನೆಗೂ ಸಿಕ್ಕೇಬಿಡ್ತು ಮುಂಬಡ್ತಿ: ರಾಜ್ಯ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್, ಎಡಿಜಿಪಿ ಬಿ. ದಯಾನಂದ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಇತ್ತೀಚೆಗಷ್ಟೇ ಆದೇಶ ಹೊರಡಿಸಿತ್ತು. ಜೊತೆಗೆ ಮೂರು ಮಂದಿ ಐಎಎಸ್ ಅಧಿಕಾರಿಗನ್ನು ಸಹ ವರ್ಗಾವಣೆ ಮಾಡಿತ್ತು.
ಪೊಲೀಸ್ ತರಬೇತಿ ಶಾಲೆಯ ಎಡಿಜಿಪಿ ಆಗಿದ್ದ ಅಲೋಕ್ ಕುಮಾರ್ ಅವರಿಗೆ ಡಿಜಿಪಿ ಹುದ್ದೆಗೆ ಬಡ್ತಿ ನೀಡಿ, ಕಾರಾಗೃಹ ಇಲಾಖೆಯ ಡಿಜಿಪಿಯಾಗಿ ನೇಮಕ ಮಾಡಲಾಗಿದೆ. ಅಲೋಕ್ ಕುಮಾರ್ ಅವರು ತಮ್ಮನ್ನು ಕಡೆಗಣಿಸಿ ಇತರರಿಗೆ ಬಡ್ತಿ ನೀಡಲಾಗುತ್ತಿದೆ ಎಂದು ಸಿಎಟಿಗೆ ಅರ್ಜಿ ಸಲ್ಲಿಲೆ ಮಾಡಿದ್ದರು. ಈ ಹಿನ್ನೆಲೆ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.
ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧದ ಫೋನ್ ಟ್ಯಾಪಿಂಗ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಆದೇಶಿಸಿದ್ದ ಇಲಾಖಾ ತನಿಖೆಯನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಇತ್ತೀಚೆಗೆ ರದ್ದುಪಡಿಸಿತ್ತು. ಇದರ ಬೆನ್ನಲ್ಲೇ ಅಲೋಕ್ ಕುಮಾರ್ಗೆ ಎಡಿಜಿಪಿಯಿಂದ ಡಿಜಿಪಿಯಾಗಿ ಬಡ್ತಿ ನೀಡಿದ ರಾಜ್ಯ ಸರ್ಕಾರ, ಕಾರಾಗೃಹ ಇಲಾಖೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು.
ಇನ್ನೂ ಕಾರಾಗೃಹ ಇಲಾಖೆಯ ಎಡಿಜಿಪಿ ಆಗಿದ್ದ ಬಿ.ದಯಾನಂದ್ ಅವರನ್ನು ಇದೀಗ ಪೊಲೀಸ್ ತರಬೇತಿ ಶಾಲೆಯ ಎಡಿಜಿಪಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಇದಕ್ಕೂ ಮುಂಚೆ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications