ಕರ್ನಾಟಕ ಬಜೆಟ್: ಚರ್ಚೆಯೇ ಇಲ್ಲದೆ ಸದನದಲ್ಲಿ ಅಂಗೀಕಾರ
ಬೆಂಗಳೂರು, ಫೆಬ್ರವರಿ 14: ಬಿಜೆಪಿ ಸದಸ್ಯರ ಗದ್ದಲದ ನಡುವೆ, ಕರ್ನಾಟಕ ಬಜೆಟ್ 2019-20ಕ್ಕೆ ಯಾವುದೇ ಚರ್ಚೆ ಇಲ್ಲದೆ ಸದನದ ಧ್ವನಿ ಮತದ ಅಂಗೀಕಾರ ದೊರೆತಿದೆ.
ಬಿಜೆಪಿಯ ಸದಸ್ಯರು, ಶಾಸಕ ಪ್ರೀತಂಗೌಡ ಮನೆಯ ಮೇಲೆ ಕಲ್ಲು ತೂರಾಟ ಹಾಗೂ ಆಪರೇಷನ್ ಆಡಿಯೋ ಪ್ರಕರಣ ಎಸ್ಐಟಿ ತನಿಖೆಗೆ ನೀಡದಂತೆ ಸದನದಲ್ಲಿ ಇಂದು ಬಾವಿಗಿಳಿದು ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ನಡುವೆಯೇ ಸಭಾಧ್ಯಕ್ಷ ರಮೇಶ್ ಕುಮಾರ್ ಅವರು, ಧನವಿನಿಯೋಗ ವಿಧೇಯಕವನ್ನು ಮಂಡಿಸುವಂತೆ ಕುಮಾರಸ್ವಾಮಿ ಅವರಿಗೆ ಸೂಚಿಸಿದರು. ಅಂತೆಯೇ ಕುಮಾರಸ್ವಾಮಿ ಅವರು 2019-20 ನೇ ಸಾಲಿಗೆ 14,85,142 ಕೋಟಿ ರೂಪಾಯಿಯ ಬಜೆಟ್ ವಿಧೇಯಕವನ್ನು ಸದನಕ್ಕೆ ಮಂಡಿಸುತ್ತಿರುವುದಾಗಿ ಹೇಳಿದರು.

ವಿಧೇಯಕವನ್ನು ಹಾಕುತ್ತಿರುವುದಾಗಿ ಹೇಳಿದ ಸ್ಪೀಕರ್ ಅವರು, ವಿಧೇಯಕದ ಪರವಾಗಿರುವವರು ಹೌದು ಎಂದು ವಿರುದ್ಧವಾಗಿ ಇಲ್ಲದವರು ಇಲ್ಲವೆಂದು ಹೇಳಲು ಹೇಳಿದರು. ಆಡಳಿತ ಪಕ್ಷದ ಸದಸ್ಯರು ಹೌದು ಎಂದರು. ಬಿಜೆಪಿಯವರು ಪ್ರತಿಭಟನೆಯಲ್ಲಿ ನಿರತರಾಗಿದ್ದರು. ಸದನವು ವಿಧೇಯಕವನ್ನು ಧ್ವನಿ ಮತದ ಮೂಲಕ ಅಂಗೀಕರಿಸಿದೆ ಎಂದು ರಮೇಶ್ ಕುಮಾರ್ ಹೇಳಿದರು.
ಆ ಮೂಲಕ ಯಾವುದೇ ಚರ್ಚೆ ಇಲ್ಲದೆ ಬಜೆಟ್ ಅನುಮೋದನೆ ಪಡೆದುಕೊಂಡಿದೆ. ಇದರ ಜೊತೆಗೆ ಮೂರು ತಿಂಗಳ ಲೇಖಾನುದಾನಕ್ಕೂ ಒಪ್ಪಿಗೆ ದೊರೆತಿದೆ. ಬಜೆಟ್ ಜೊತೆಗೆ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯಕ್ಕೆ ಸಹ ಯಾವುದೇ ಚರ್ಚೆಯೇ ಇಲ್ಲದೆ ಒಪ್ಪಿಗೆ ದೊರೆತಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications