2018ರ ಚುನಾವಣೆ : 3 ಕ್ಷೇತ್ರಕ್ಕೆ ಎಎಪಿ ಅಭ್ಯರ್ಥಿಗಳು ಘೋಷಣೆ
ಬೆಂಗಳೂರು, ಡಿಸೆಂಬರ್ 22 : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಮೂರು ಕ್ಷೇತ್ರಗಳಿಗೆ ಪಕ್ಷ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.
ಆಮ್ ಆದ್ಮಿ ಪಕ್ಷ ಸಂಘಟನೆ, 'ಮಿಷನ್ - 5000' ಕ್ಕೆ ಚಾಲನೆ
ಬೆಂಗಳೂರಿನಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿದ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಪಂಕಜ್ ಗುಪ್ತ, 'ರಾಜ್ಯದಲ್ಲಿ ಮೂರು ಪಕ್ಷಗಳು ಭ್ರಷ್ಟಾಚಾರದಲ್ಲಿ ತೊಡಗಿವೆ. ಮುಂದಿನ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸಲು ಎಎಪಿ ತಯಾರಿ ನಡೆಸಿದೆ' ಎಂದು ಹೇಳಿದರು.
ಎಲ್ಲ ಪಕ್ಷಗಳಿಗೆ ಮರ್ಮಾಘಾತ : ಕರ್ನಾಟಕ ಆಪ್ ಶಪಥ
'ರಾಷ್ಟ್ರೀಯ ಪಕ್ಷಗಳು ಜನರ ಸಮಸ್ಯೆ ಬಿಟ್ಟು ಮಂದಿರ, ಮಸೀದಿ, ಜಾತಿ, ಧರ್ಮ, ಪಾಕಿಸ್ತಾನದ ಹೆಸರಿನಲ್ಲಿ ಒಡಕು ಮೂಡಿಸಿ ಪ್ರಚಾರ ನಡೆಸುತ್ತಿವೆ. ಗುಜರಾತ್ನಲ್ಲಿ ಬಿಜೆಪಿಗೆ ಗೆದ್ದಿದೆ, ಪ್ರಜಾಪ್ರಭುತ್ವ ಸೋತಿದೆ' ಎಂದು ಆರೋಪಿಸಿದರು.
ಎಎಪಿ ಅಭ್ಯರ್ಥಿಗಳ ಪಟ್ಟಿ
* ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದಲ್ಲಿ ಏರೋನಾಟಿಕಲ್ ಇಂಜಿನಿಯರ್ ಸಂತೋಷ ನರಗುಂದ ಸ್ಪರ್ಧೆ ಮಾಡಲಿದ್ದಾರೆ. ಕ್ಷೇತ್ರದ ಹಾಲಿ ಶಾಸಕರು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್.
* ಬೆಂಗಳೂರಿನ ಬೊಮ್ಮನಹಳ್ಳಿ ಕ್ಷೇತ್ರದಿಂದ ಯೋಜನಾ ತಜ್ಞ ಅಶ್ವಿನ್ ಮಹೇಶ್ ಸ್ಪರ್ಧಿಸಲಿದ್ದಾರೆ. ಕಳೆದ ಚುನಾವಣೆಯಲ್ಲಿ ಕ್ಷೇತ್ರದಿಂದ ಲೋಕಸತ್ತಾ ಪಕ್ಷದ ಅಭ್ಯರ್ಥಿಯಾಗಿ ಅವರು ಸ್ಪರ್ಧಿಸಿದ್ದು 11,200 ಮತ ಪಡೆದಿದ್ದರು. ಕ್ಷೇತ್ರದ ಹಾಲಿ ಶಾಸಕರು ಬಿಜೆಪಿಯ ಸತೀಶ್ ರೆಡ್ಡಿ.
* ಬೆಂಗಳೂರಿನ ಕೆ.ಆರ್.ಪುರಂ ಕ್ಷೇತ್ರದಿಂದ ಗ್ರಾಮ ಪಂಚಾಯಿತಿ ಸದಸ್ಯ, ಉದ್ಯಮಿ ಲಿಂಗರಾಜ್ ಅರಸ್ ಸ್ಪರ್ಧಿಸಲಿದ್ದಾರೆ. ಕ್ಷೇತ್ರದ ಹಾಲಿ ಶಾಸಕರು ಕಾಂಗ್ರೆಸ್ನ ಬೈರತಿ ಬಸವರಾಜ್.