ಕಾಪ್ಸ್ ಸಮೀಕ್ಷೆ: ಕರ್ನಾಟಕಲ್ಲಿ ಮತ್ತೆ ಅರಳಲಿದೆ ಕಮಲ
ಬೆಂಗಳೂರು, ಸೆ. 06: ಸಿ ಫೋರ್ ಸಂಸ್ಥೆ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆ ನಂತರ ಕಾಪ್ಸ್ ಸಂಸ್ಥೆ ತನ್ನ ವರದಿಯನ್ನು ಪ್ರಕಟಿಸಿದೆ.
ಸಿ ಫೋರ್ ಕರ್ನಾಟಕದ ವಿವಿಧ ಕ್ಷೇತ್ರಗಳಲ್ಲಿ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯಂತೆ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ. ಕಾಪ್ಸ್ ಸಂಸ್ಥೆ ಬುಧವಾರ ಪ್ರಕಟಿಸಿರುವ ವರದಿಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಒಂದು ವೇಳೆ ಈಗ ಚುನಾವಣೆ ನಡೆದರೆ ಯಾವ ಪಕ್ಷಕ್ಕೆ ಬಹುಮತ ಸಿಗಲಿದೆ? ಎಂಬ ಪ್ರಶ್ನೆ ಹೊತ್ತು ಕಾಪ್ಸ್ ಸಂಸ್ಥೆ ಸಮೀಕ್ಷೆ ನಡೆಸಿತ್ತು.
Creative Center for Political and Social Studies (COPS) ವರದಿಯಂತೆ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿಗೆ 113 ಸ್ಥಾನಗಳು ಲಭಿಸಲಿದೆ. 2008ರಲ್ಲಿ ರಾಜ್ಯದಲ್ಲಿ ಕಮಲ ಅರಳಿದಾಗಲೂ ಇಷ್ಟೇ ಸ್ಥಾನಗಳನ್ನು ಗಳಿಸಿತ್ತು ಎಂಬುದು ಗಮನಾರ್ಹ. ಕರ್ನಾಟಕದ ಕರಾವಳಿ ಭಾಗದಲ್ಲಿ ಪರಿಸ್ಥಿತಿ ಹದಗೆಟ್ಟ ಸಂದರ್ಭದಲ್ಲಿ ಈ ಸಮೀಕ್ಷೆ ನಡೆಸಲಾಗಿತ್ತು. ಸಮೀಕ್ಷೆಯ ವಿವರಗಳು ಮುಂದಿದೆ...

ಸಮೀಕ್ಷೆ ನಡೆಸಿದ್ದು ಯಾವಾಗ
ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಹಾಗೂ ನಂತರ ನಡೆದ ಘಟನೆಗಳಿಂದ ಕರಾವಳಿಯ ಶಾಂತಿ ಕದಡಿದ ಸಂದರ್ಭದಲ್ಲಿ ಸಮೀಕ್ಷೆ ನಡೆಸಲಾಗಿದೆ. ಎಸ್ ಡಿ ಪಿಐ ಹಾಗೂ ಕೆಎಫ್ ಡಿ ನಿಷೇಧಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆಗಳನ್ನು ಹಮ್ಮಿಕೊಂಡಿತ್ತು. ಜುಲೈ ತಿಂಗಳ ತನಕದ ಅಭಿಪ್ರಾಯ ಸಂಗ್ರಹಿಸಿ ವರದಿಯನ್ನು ನೀಡಲಾಗಿದೆ.

ಕಾಪ್ಸ್ ವರದಿಯಲ್ಲಿ ಏನಿದೆ?
ಕಾಪ್ಸ್ ನೀಡಿರುವ ಚುನಾವಣಾ ಪೂರ್ವ ಸಮೀಕ್ಷೆಯಂತೆ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿಗೆ 117 ಸ್ಥಾನಗಳು ಲಭಿಸಲಿವೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷಕ್ಕೆ 86 ಸ್ಥಾನಗಳು ಹಾಗೂ ಎಚ್ಡಿ ಕುಮಾರಸ್ವಾಮಿ ನಾಯಕತ್ವದ ಜೆಡಿಎಸ್ ಗೆ 25 ಸ್ಥಾನಗಳು ಲಭಿಸಲಿವೆ. ಬಹುತೇಕ 2008ರ ಚುನಾವಣಾ ಫಲಿತಾಂಶ ಪುನರಾವರ್ತನೆಯಾಗಲಿದೆ ಎಂದು ಹೇಳಲಾಗಿದೆ.

ಯಾವ ಪ್ರದೇಶ ಯಾರ ಪಾಲು?
ಹಳೆ ಮೈಸೂರು ಪ್ರದೇಶ: 37 ಸ್ಥಾನಗಳಲ್ಲಿ 21 ಸ್ಥಾನಗಳು ಕಾಂಗ್ರೆಸ್ ಪಾಲು.
ಬೆಂಗಳೂರು ಪ್ರದೇಶ: 32 ಸ್ಥಾನಗಳಲ್ಲಿ 16 ಸ್ಥಾನ ಕಾಂಗ್ರೆಸ್ ಗಳಿಸಲಿದೆ. ಬಿಜೆಪಿ 14 ಹಾಗೂ ಜೆಡಿಎಸ್ 2 ಸ್ಥಾನಕ್ಕೆ ತೃಪ್ತಿ ಪಡಬೇಕಿದೆ.
ಆದರೆ, ಕರಾವಳಿ, ಮುಂಬೈ ಕರ್ನಾಟಕ ಹಾಗೂ ಹೈದರಾಬಾದ್ ಕರ್ನಾಟಕದಲ್ಲಿ ಬಿಜೆಪಿ ಉತ್ತಮ ಫಲಿತಾಂಶ ಪಡೆಯಲಿದೆ. ಮಧ್ಯ ಕರ್ನಾಟಕದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಸಮಬಲ ಸಾಧಿಸಲಿದೆ
ಹೈ-ಕ ಪ್ರದೇಶ: 40 ಸ್ಥಾನಗಳಲ್ಲಿ 25 ಸ್ಥಾನಗಳು ಬಿಜೆಪಿ ಪಾಲು.
ಮುಂಬೈ-ಕರ್ನಾಟಕ: 56 ಸ್ಥಾನಗಳಲ್ಲಿ 36 ಬಿಜೆಪಿ ಗೆಲ್ಲಬಹುದು.

ಸಿ ಫೋರ್ ಸಮೀಕ್ಷೆ
ಸಿ ಫೋರ್ ಸಮೀಕ್ಷೆಯಂತೆ ಅತಿ ಹೆಚ್ಚು ಶೇಕಡಾವಾರು ಮತಗಳನ್ನು ಪಡೆಯುವ ನಿರೀಕ್ಷೆ ಹೊಂದಿರುವ ಕಾಂಗ್ರೆಸ್ ಪಕ್ಷವು 114ರ ಮ್ಯಾಜಿಕ್ ನಂಬರ್ ದಾಟುವ ನಿರೀಕ್ಷೆಯಿದೆ.
* ಕಾಂಗ್ರೆಸ್ 120 ರಿಂದ 132ರವರೆಗೆ ಸ್ಥಾನ
* ಬಿಜೆಪಿಗೆ 60 ರಿಂದ 72 ಸ್ಥಾನಗಳು ಸಿಗಲಿವೆ.
* ಜೆಡಿಎಸ್ 24ರಿಂದ 30 ಸ್ಥಾನಗಳನ್ನು ಪಡೆಯಲಿದೆ.
* ಇತರೆ ಪಕ್ಷಗಳಿಗೆ 1ರಿಂದ 6 ಸ್ಥಾನಗಳು ಬರಲಿವೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications