ವಿಧಾನಸಭಾ ಚುನಾವಣಾ ಫಲಿತಾಂಶ: ಬೆಟ್ಟಿಂಗ್ ಜೋರು.. ಸೋತರೆ ಬೀದಿಪಾಲು
ಬೆಂಗಳೂರು: ತೀವ್ರ ಕುತುಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಮಧ್ಯಾಹ್ನದ ಹೊತ್ತಿಗೆ ಫಲಿತಾಂಶ ಹೊರಬೀಳಲಿದೆ. ಆದರೆ, ಟಫ್ ಸ್ಪರ್ಧೆ ಏರ್ಪಟ್ಟಿದ್ದ ಕ್ಷೇತ್ರದಲ್ಲಿ ಬೆಟ್ಟಿಂಗ್ ಜೋರಾಗಿದ್ದು, ಕೆಲವಡೆ ಅಭ್ಯರ್ಥಿಗಳ ಪರ ಅಭಿಮಾನಿಗಳು ತಮ್ಮ ಆಸ್ತಿಯನ್ನೆಲ್ಲ ಪಣಕ್ಕಿಟ್ಟಿದ್ದಾರೆ.
ಈ ಕುರಿತ ಹಲವು ಪೋಸ್ಟ್ ಗಳು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿವೆ. ಅದರಲ್ಲೂ ಗುಂಡ್ಲುಪೇಟೆಯ ಬಿಜೆಪಿ ಅಭ್ಯರ್ಥಿ ನಿರಂಜನ್ ಕುಮಾರ್ ಪರವಾಗಿ ಅಲ್ಲಿನ ಪುರಸಭಾ ಸದಸ್ಯ ಕಿರಣ್ ಕುಮಾರ್ ಒಂದು ಕೋಟಿ ರೂಪಾಯಿ ಬೆಟ್ಟಿಂಗ್ ಕಟ್ಟಲು ಸಿದ್ದ ಎಂಬ ವಿಡಿಯೋ ಎಲ್ಲೆಡೆ ಹರಿದಾಟುತ್ತಿದೆ.

ಚನ್ನಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಇಬ್ಬರು ರೈತರು ಒಂದು ಹೆಜ್ಜೆ ಮುಂದೆ ಹೋಗಿದ್ದು, ಅಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಶಿವಗಂಗಾ ಬಸವರಾಜು ಪರವಾಗಿ ತಮ್ಮ 2 ಎಕರೆ ಅಡಕೆ ತೋಟವನ್ನೇ ಬಾಜಿ ಕಟ್ಟಿದ್ದಾರೆ. ಇದಿಷ್ಟೇ ಅಲ್ಲದೆ, ಮಂಡ್ಯ ಜಿಲ್ಲೆಯ ನಾಗಮಂಗಲ ಹಾಗೂ ಎಚ್.ಡಿ.ಕೋಟೆ ವಿಧಾನಸಭಾ ಕ್ಷೇತದಿಂದ ಸ್ಪರ್ದಿಸಿರುವ ಅಭ್ಯರ್ಥಿಗಳ ಪರವಾಗಿಯೂ ಅವರ ಅಭಿಮಾನಿಗಳು ಲಕ್ಷಗಟ್ಟಲೇ ಬೆಟ್ ಮಾಡಿದ್ದಾರೆ.
ಹಲವೆಡೆ ಈ ಹುಚ್ಚು ಅಭಿಮಾನ ಎಷ್ಟರಮಟ್ಟಿಗೆ ತಾರಕಕ್ಕೇರಿದೆ ಅಂದ್ರೆ, ಟ್ರ್ಯಾಕ್ಟರ್, ಟಗರು ಸೇರಿದಂತೆ ಜಾನುವಾರುಗಳನ್ನು ಪಣಕ್ಕಿಟ್ಟಿದ್ದಾರೆ. ಮಧುಗಿರಿಯಲ್ಲೂ ಕಾಂಗ್ರೆಸ್ ಅಭ್ಯರ್ಥಿ ರಾಜಣ್ಣ ಪರ ದೊಡ್ಡ ಮಟ್ಟದಲ್ಲಿ ಬೆಟ್ಟಿಂಗ್ ನಡೆದಿದೆ. ಇನ್ನು, ಪೊಲೀಸ್ ಇಲಾಖೆಯು ಎಚ್ಚೆತ್ತುಕೊಂಡಿದ್ದು, ಬೆಟ್ಟಿಂಗ್ ಮಾಡುವವರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದೆ.
ಸದ್ಯ, ಮತ ಎಣಿಕೆ ಕಾರ್ಯ ಭರದಿಂದ ಸಾಗಿದ್ದು, ಬಿಜೆಪಿ 63, ಕಾಂಗ್ರೆಸ್ 100, ಜೆಡಿಎಸ್ 19 ಹಾಗೂ ಇತರರು ಎರಡು ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಚುನಾವಣೆ ಸಂಬಂಧ ಹೆಚ್ಚಿನ ಮಾಹಿತಿಗೆ ಒನ್ ಇಂಡಿಯಾ ಕನ್ನಡ ಫಾಲೋ ಮಾಡಿ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications