2018ರ ಕರ್ನಾಟಕ ಚುನಾವಣೆ : ಅಹಿಂದ V/S ಹಿಂದುತ್ವ!
Recommended Video

ಬೆಂಗಳೂರು, ಡಿಸೆಂಬರ್ 22 : 2018ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಪ್ರಬಲ ಪೈಪೋಟಿ ನಡೆಯಲಿದೆ ಎಂಬುದು ಖಚಿತವಾಗುತ್ತಿದೆ. ಮೂರು ಪಕ್ಷಗಳಿಗೂ ಈ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ.
ಈ ಬಾರಿಯ ಚುನಾವಣೆಯಲ್ಲಿ ಹಲವಾರು ವಿಚಾರಗಳು ಪ್ರಮುಖ ಪಾತ್ರ ವಹಿಸುತ್ತವೆ. ಉತ್ತರ ಕರ್ನಾಟಕ ಭಾಗದಲ್ಲಿ ಕುಡಿಯುವ ನೀರಿನ ವಿಚಾರ ಪ್ರಮುಖ ಚುನಾವಣಾ ಅಸ್ತ್ರವಾಗಲಿದೆ. ಸ್ಥಳೀಯ ವಿಚಾರಗಳು ವಿಧಾನಸಭೆ ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.

ಅಹಿಂದ (ಅಲ್ಪಸಂಖ್ಯಾತ, ಹಿಂದುಳಿದ ಹಾಗೂ ದಲಿತ ), ಹಿಂದುತ್ವ ವಿಚಾರವೂ ಚುನಾವಣಣೆಯ ಪ್ರಮುಖ ವಿಷಯವಾಗಲಿದೆ. ರಾಜಕೀಯ ತಜ್ಞರ ಪ್ರಕಾರ ಈ ವಿಚಾರದ ಬಗ್ಗೆ ಭಾರೀ ಚರ್ಚೆ ನಡೆಯಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಹಿಂದ ಪರವಾಗಿದ್ದಾರೆ ಎಂಬುದು ಅವರ ಅನೇಕ ನಿರ್ಧಾರಗಳ ಮೂಲಕ ಬಹಿರಂಗವಾಗಿದೆ. ಹಲವಾರು ಬಾರಿ ಅವರು ಇದೇ ವಿಚಾರ ಮುಂದಿಟ್ಟುಕೊಂಡು ಆರ್ಎಸ್ಎಸ್ ಮತ್ತು ಭಜರಂಗದಳದ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.
ಅಹಿಂದ ವಾದ ಮುಂದಿಟ್ಟರೆ ಯುವಕರು ಬಲ ಪಂಥೀಯ ತತ್ವದತ್ತ ಆಕರ್ಷಿತರಾಗವುದನ್ನು ತಪ್ಪಿಸಬಹುದು ಎಂಬುದನ್ನು ಸಿದ್ದರಾಮಯ್ಯ ಅವರಿಗೆ ತಿಳಿದಿದೆ. ಜಾತಿವಾರು ಸಮೀಕ್ಷೆಯೂ ಅವರ ಕೈಯಲ್ಲಿರುವ ಅಸ್ತ್ರವಾಗಿದೆ.
ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನಡೆಸಿದ ಜಾತಿವಾರು ಸಮೀಕ್ಷೆಯ ವರದಿಯನ್ನು ಇನ್ನೂ ಬಹಿರಂಗ ಮಾಡಿಲ್ಲ. ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯ 9.8, 8.2ರಷ್ಟು ಜನಸಂಖ್ಯೆ ಹೊಂದಿದೆ ಎಂಬುದು ಸದ್ಯದ ವರದಿ.
ಕರ್ನಾಟಕದ ಪ್ರತಿಪಕ್ಷ ಬಿಜೆಪಿ ಅಹಿಂದಕ್ಕೆ ತಿರುಗೇಟು ನೀಡಲು ಹಿಂದುತ್ವ ವಿಚಾರವನ್ನು ಬಳಸಿಕೊಳ್ಳಲಿದೆ. ಕೆಲವು ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಸಂಪುಟಕ್ಕೆ ಉತ್ತರ ಕನ್ನಡ ಸಂಸದ ಅನಂತ ಕುಮಾರ್ ಹೆಗಡೆ ಅವರನ್ನು ಸೇರಿಸಿಕೊಂಡು ಈ ಕುರಿತು ಸ್ಪಷ್ಟ ಸಂದೇಶ ರವಾನೆ ಮಾಡಲಾಗಿದೆ.
ಸರ್ಕಾರ ಟಿಪ್ಪು ಜಯಂತಿ ಆಚರಣೆ ಮಾಡುವುದನ್ನು ಪ್ರಮುಖ ವಿಷಯವನ್ನಾಗಿ ಮಾಡಿಕೊಂಡು ಬಿಜೆಪಿ ಪ್ರಚಾರ ನಡೆಸಲಿದೆ. ಗುರುವಾರ ಹುಬ್ಬಳ್ಳಿಗೆ ಆಗಮಿಸಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಿಜೆಪಿ ಸರ್ಕಾರ ಬಂದರೆ ಟಿಪ್ಪು ಜಯಂತಿ ಇರುವುದಿಲ್ಲ ಎಂದು ಘೋಷಿಸಿದ್ದಾರೆ.
ಹನುಮ ಜಯಂತಿ ವಿಚಾರದಲ್ಲಿ ಬಿಜೆಪಿ ರಾಜ್ಯದಲ್ಲಿ ಈಗಾಗಲೇ ಗದ್ದಲ ಎಬ್ಬಿಸಿದೆ. ಸಿದ್ದರಾಮಯ್ಯ ಅವರ ಅಹಿಂದ ಸಿದ್ಧಾಂತಕ್ಕೆ ತಿರುಗೇಟು ನೀಡಲು ಹಿಂದುತ್ವವೇ ಪ್ರಬಲ ಅಸ್ತ್ರ ಎಂದು ಬಿಜೆಪಿಯೂ ತಿಳಿದಿದೆ.
ಕೆಲವು ತಿಂಗಳ ಹಿಂದೆ ಕರ್ನಾಟಕಕ್ಕೆ ಆಗಮಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದರು. ಇದು ಸಹ ಒಕ್ಕಲಿಗ ಸಮುದಾಯದ ಮತಗಳನ್ನು ಸೆಳೆಯಲು ಪಕ್ಷ ಮಾಡಿದ ಒಂದು ಪ್ರಯತ್ನ. ಒಕ್ಕಲಿಗ ಸಮುದಾಯ ಜೆಡಿಎಸ್ ಪರವಾದ ನಿಲುವನ್ನು ಹೊಂದಿದೆ ಇದನ್ನು ಪರವರ್ತಿಸಲು ಮಠಕ್ಕೆ ಭೇಟಿ ನೀಡಲಾಯಿತು.
ಕಾಂಗ್ರೆಸ್ ಕನ್ನಡವನ್ನು ಪ್ರಮುಖ ವಿಷಯವಾಗಿ ಮಾಡಿಕೊಂಡು ಚುನಾವಣೆ ಎದುರಿಸಲಿದೆ. ರಾಜ್ಯಕ್ಕೆ ಪ್ರತ್ಯೇಕ ಧ್ವಜ ಬೇಕು ಎಂಬ ವಿಷಯವನ್ನು ಪಕ್ಷ ಮುಂಚೂಣಿಗೆ ತಂದಿದೆ. ನಮ್ಮ ಮೆಟ್ರೋದಲ್ಲಿ ಹಿಂದಿ ಹೇರಿಕೆ, ಶಾಲೆಗಳಲ್ಲಿ ಕನ್ನಡ ಕಡ್ಡಾಯ ಎಂಬ ವಿಚಾರಗಳ ಬಗ್ಗೆ ಚರ್ಚೆ ನಡೆಯುವಂತೆ ನೋಡಿಕೊಳ್ಳುತ್ತಿದೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications