Amit Shah Hubballi Visit : ಮತ್ತೆ ರಾಜ್ಯಕ್ಕೆ ಅಮಿತ್ ಶಾ, ಮತ ಬೇಟೆಗೆ ಕುಂದಗೋಳದಲ್ಲಿ ಬೃಹತ್ ಸಾರ್ವಜನಿಕ ಸಭೆ
ರಾಜಕೀಯ ಚಾಣಕ್ಷ್ಯ ಎನಿಸಿಕೊಂಡಿರುವ ಗೃಹ ಸಚಿವ ಅಮಿತ್ ಶಾ ಮತ್ತೆ ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ. ಚುನಾವಣೆಗೆ ರೆಡಿಯಾಗುತ್ತಿರುವ ರಾಜ್ಯದಲ್ಲಿ ಮತಬೇಟೆಗೆ ಹೊರಟಿರವ ಅಮಿತ್ ಶಾ ಅವರ ಕಾರ್ಯಕ್ರಮಗಳ ವಿವರಕ್ಕಾಗಿ ಮುಂದೆ ಓದಿ.
ಬೆಂಗಳೂರು, ಜನವರಿ. 27: ಚುನಾವಣೆಯ ಹೊಸ್ತಿಲಲ್ಲಿರುವ ರಾಜ್ಯದಲ್ಲಿ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ಆರಂಭಿಸಿವೆ. ಮತ್ತೆ ಅಧಿಕಾರವನ್ನು ಪಡೆಯುವ ಹಂಬಲದಲ್ಲಿರುವ ಬಿಜೆಪಿ ರಣತಂತ್ರಗಳನ್ನೇ ಹೂಡುತ್ತಿದೆ. ಪಕ್ಷದ ರಾಷ್ಟ್ರೀಯ ನಾಯಕರು ಉತ್ತರ ಕರ್ನಾಟಕವನ್ನು ಗುರಿಯಾಗಿಸಿಕೊಂಡಿದ್ದು, ಸತತವಾಗಿ ಕಾರ್ಯಕ್ರಮಗಳನ್ನು ಮಾಡುತ್ತಾ ಭೇಟಿ ನೀಡುತ್ತಿದ್ದಾರೆ.
ಇದೇ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಒಂದು ತಿಂಗಳಲ್ಲೇ ಎರಡು ಬಾರಿ ರಾಜ್ಯಕ್ಕೆ ಭೇಟಿ ನೀಡಿದ್ದಾರೆ.
ರಾಜ್ಯದಲ್ಲಿ ಏಪ್ರಿಲ್ ಮಧ್ಯದಲ್ಲಿ ಅಥವಾ ಮೇ ಆರಂಭದಲ್ಲಿ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆಯಿರುವುದರಿಂದ ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ ಶನಿವಾರ ರೋಡ್ ಶೋ, ಸಾರ್ವಜನಿಕ ಸಭೆ ಮತ್ತು ಇತರ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಕಳೆದ ವರ್ಷ ಡಿಸೆಂಬರ್ 30 ಮತ್ತು 31 ರಂದು ಅಮಿತ್ ಶಾ ಮಂಡ್ಯ ಜಿಲ್ಲೆ ಮತ್ತು ಬೆಂಗಳೂರಿಗೆ ಭೇಟಿ ನೀಡಿದ್ದರು. ಈ ಬಾರಿ ಕಿತ್ತೂರು ಕರ್ನಾಟಕ ಪ್ರದೇಶ ಎಂದೂ ಕರೆಯಲ್ಪಡುವ ಹುಬ್ಬಳ್ಳಿ-ಧಾರವಾಡಕ್ಕೆ ಭೇಟಿ ನೀಡಲಿದ್ದಾರೆ.
27 ರಂದು ರಾತ್ರಿ ಹುಬ್ಬಳ್ಳಿಗೆ ಅಮಿತ್ ಶಾ ಆಗಮಿಸಲಿದ್ದು, 28 ರಂದು ಬೆಳಗ್ಗೆ ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯದ ಬಿವಿಬಿ ಕಾಲೇಜಿನ 75ನೇ ವಾರ್ಷಿಕೋತ್ಸವ ಹಾಗೂ ಒಳಾಂಗಣ ಕ್ರೀಡಾಂಗಣ ಉದ್ಘಾಟನೆಯ ಎರಡು ಕಾರ್ಯಕ್ರಮಗಳಲ್ಲಿ ಹಾಜರಾಗಲಿದ್ದಾರೆ.
ಕುಂದಗೋಳದ ನಡೆಯುವ ಬಿಜೆಪಿಯ ವಿಜಯ ಸಂಕಲ್ಪ ಅಭಿಯಾನದಲ್ಲಿ ಭಾಗವಹಿಸಿ ನಗರದ ಶಂಬುಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ವಾರ್ಡ ನಂ. 7 ರ ಮತಗಟ್ಟೆ ಸಂಖ್ಯೆ 50 ರಲ್ಲಿ ವಾಲ್ ಪೇಂಟಿಂಗ್ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ನಂತರ ಧಾರವಾಡ ಗ್ರಾಮಾಂತರ ವ್ಯಾಪ್ತಿಗೆ ಬರುವ ಕುಂದಗೋಳ ವಿಧಾನಸಭಾ ಕ್ಷೇತ್ರದ ಭಾಗದಲ್ಲಿ ಸುಮಾರು 1.5 ಕಿ.ಮೀ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ. ಧಾರವಾಡದ ಕೃಷಿ ವಿಶ್ವ ವಿದ್ಯಾಲಯದ 57 ಎಕರೆ ಜಾಗದಲ್ಲಿ ವಿಧಿವಿಜ್ಞಾನ ವಿಶ್ವವಿದ್ಯಾಲಯದ ಭೂಮಿ ಪೂಜೆ ಹಾಗೂ ಶಂಕು ಸ್ಥಾಪನೆಯನ್ನು ಅಮಿತ್ ಶಾ ನೆರವೇರಿಸಲಿದ್ದಾರೆ.
ಬಳಿಕ ಬಿಜೆಪಿಯ ಜನಸಂಕಲ್ಪ ಯಾತ್ರೆಯ ಭಾಗವಾಗಿರುವ ರ್ಯಾಲಿಯಲ್ಲಿ ಭಾಗವಹಿಸಲು ಕುಂದಗೋಳದಿಂದ ಬೆಳಗಾವಿ ಜಿಲ್ಲೆಯ ಕಿತ್ತೂರು ಬಳಿಯ ಎಂಕೆ ಹುಬ್ಬಳ್ಳಿಗೆ ತೆರಳಲಿದ್ದಾರೆ.
ಕಾಂಗ್ರೆಸ್ ಶಾಸಕರು ಪ್ರತಿನಿಧಿಸುವ ಖಾನಾಪುರ ಮತ್ತು ಬೈಲಹೊಂಗಲ ವಿಧಾನಸಭಾ ಕ್ಷೇತ್ರಗಳಿಗೂ ಕೇಂದ್ರ ಸಚಿವ ಅಮಿತ್ ಶಾ ಭೇಟಿ ನೀಡುವ ನಿರೀಕ್ಷೆಯಿದೆ. ತಳಮಟ್ಟದಲ್ಲಿ ಪಕ್ಷವನ್ನು ಗಟ್ಟಿಗೊಳಿಸಲು ಬೆಳಗಾವಿಯಲ್ಲಿ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ. ಜನವರಿ 28ರಂದು ಸಂಜೆ 6.30 ರಿಂದ 10 ಗಂಟೆಯ ತನಕ ಬೆಳಗಾವಿಯಲ್ಲಿ ಅಮಿತ್ ಶಾ ಸರಣಿ ಸಭೆಗಳನ್ನು ನಡೆಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
-
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ












Click it and Unblock the Notifications