ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆ ; ಸಿದ್ದರಾಮಯ್ಯ ಹೇಳಿದ್ದೇನು?
Recommended Video
ಬೆಂಗಳೂರು, ಜುಲೈ 26 : "ಕರ್ನಾಟಕದ ವಿಧಾನಸಭೆ ಬಿಜೆಪಿ ಪಾಲಿಗೆ ಪ್ರಯೋಗಾಲಯವಾಗಿದೆ. ಕಾನೂನಿಗೆ ವಿರುದ್ಧವಾಗಿ ಬಿಜೆಪಿ ಸರ್ಕಾರ ರಚನೆ ಮಾಡುತ್ತಿದೆ" ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಶುಕ್ರವಾರ ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಬಿ. ಎಸ್. ಯಡಿಯೂರಪ್ಪ ರಾಜ್ಯಪಾಲ ವಜುಭಾಯಿ ವಾಲಾರನ್ನು ಭೇಟಿಯಾಗಿ ಸರ್ಕಾರ ರಚನೆ ಹಕ್ಕು ಮಂಡನೆ ಮಾಡಿದರು. ಸಂಜೆ 6 ಗಂಟೆಗೆ ಅವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
"ಕರ್ನಾಟಕ ಬಿಜೆಪಿ 105 ಸದಸ್ಯ ಬಲವನ್ನು ಮಾತ್ರ ಹೊಂದಿದೆ. ವಿಧಾನಸಭೆಯ ಬಲಾಬಲಕ್ಕಿಂತ ಅರ್ಧದಷ್ಟು ಕಡಿಮೆ ಬಲವಿದೆ" ಎಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ಹೇಳಿದ್ದು, ಸರ್ಕಾರ ರಚನೆಯನ್ನು ಖಂಡಿಸಿದರು.
"ಬಿಜೆಪಿಗೆ ಬಹುಮತವೇ ಇಲ್ಲ. ಸಂವಿಧಾನದ ಯಾವ ನಿಯಮದ ಅನ್ವಯ ರಾಜ್ಯಪಾಲರು ಸರ್ಕಾರ ರಚನೆ ಮಾಡಲು ಪಕ್ಷಕ್ಕೆ ಆಹ್ವಾನ ನೀಡಿದರು?" ಎಂದು ಸಿದ್ದರಾಮಯ್ಯ ಟ್ವೀಟರ್ನಲ್ಲಿ ಪ್ರಶ್ನೆ ಮಾಡಿದರು..

ಪಕ್ಷಕ್ಕೆ ಬಹುಮತವೇ ಇಲ್ಲ
"ಕರ್ನಾಟಕ ವಿಧಾನಸಭೆ ಬಿಜೆಪಿಗೆ ಪ್ರಯೋಗಾಲಯವಾಗಿದೆ. ಬಿಜೆಪಿ ಬೆಂಬಲಿತ ರಾಜ್ಯಪಾಲರು ಸಂವಿಧಾನಕ್ಕೆ ವಿರುದ್ಧ ವಾಗಿ ಸರ್ಕಾರ ರಚನೆ ಮಾಡಲು ಒಪ್ಪಿಗೆ ಕೊಟ್ಟಿದ್ದಾರೆ. ಬಹುಮತವೇ ಇಲ್ಲದ ಪಕ್ಷಕ್ಕೆ ಸಂವಿಧಾನದ ಯಾವ ನಿಯಮದ ಪ್ರಕಾರ ಸರ್ಕಾರ ರಚನೆ ಮಾಡಲು ಒಪ್ಪಿಗೆ ಕೊಡಲಾಗಿದೆ" ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.

105 ಸದಸ್ಯರ ಬಲಮಾತ್ರವಿದೆ
"ಸಂವಿಧಾನದ ಪ್ರಕಾರ ಹೋದರೆ ಬಿಜೆಪಿ ಸರ್ಕಾರ ರಚನೆ ಮಾಡಲು ಸಾಧ್ಯವೇ ಇಲ್ಲ. ಬಿಜೆಪಿಗೆ ಪ್ರಜಾಪ್ರಭುತ್ವದ ಆಶಯದ ಮೇಲೆ ನಂಬಿಕೆ ಇಲ್ಲ ಎಂಬುದು ಇದರಿಂದ ಸಾಬೀತಾಗುತ್ತದೆ. ಬಿಜೆಪಿ 105 ಸದಸ್ಯ ಬಲ ಹೊಂದಿದೆ ಇದು ಬಹುಮತಕ್ಕಿಂತ ಅರ್ಧದಷ್ಟು ಕಡಿಮೆ" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಸಂಖ್ಯಾಬಲದ ಲೆಕ್ಕದ ವಿವರ
224 ಬಲದ ವಿಧಾನಸಭೆಯಲ್ಲಿ ಬಿಜೆಪಿ ಶಾಸಕರ ಸಂಖ್ಯೆ 105. ಮಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಎಚ್. ನಾಗೇಶ್ ಬೆಂಬಲ ನೀಡಿದರೆ 106. ಬಹುಮತ ಸಾಬೀತಿಗೆ ಬೇಕಾದ ಮ್ಯಾಜಿಕ್ ನಂಬರ್ ಪ್ರಸ್ತುತ 111 (3 ಶಾಸಕರ ಅನರ್ಹತೆ ಬಳಿಕ).

221 ಸದಸ್ಯ ಬಲ
ಸ್ಪೀಕರ್ ರಮೇಶ್ ಕುಮಾರ್ 3 ಶಾಸಕರನ್ನು ಗುರುವಾರ ಅನರ್ಹತೆ ಮಾಡಿದರು. ಇದರಿಂದಾಗಿ ವಿಧಾನಸಭೆ ಬಲ 221ಕ್ಕೆ ಕುಸಿದಿದೆ. ಬಹುಮತ ಸಾಬೀತು ಮಾಡಲು 111 ಮ್ಯಾಜಿಕ್ ನಂಬರ್. ಇಬ್ಬರು ಅನರ್ಹಗೊಂಡ ಬಳಿಕ ಕಾಂಗ್ರೆಸ್ ಬಲ 76, ಜೆಡಿಎಸ್ ಬಲ 37 (ರಾಜೀನಾಮೆ ಕೊಟ್ಟವರು ಸೇರಿ). ಬಿಎಸ್ಪಿ 1, ಪಕ್ಷೇತರ 1.
-
ಮಾರ್ಚ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್












Click it and Unblock the Notifications