ವಂದೇಮಾತರಂನೊಂದಿಗೆ ಸದನ ಆರಂಭ: ಯಡಿಯೂರಪ್ಪ, ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ
ಬೆಂಗಳೂರು, ಮೇ 19: ಕರ್ನಾಟಕ ವಿಧಾನಸಭೆಗೆ ಚುನಾಯಿತರಾದ ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸುವ ಪ್ರಕ್ರಿಯೆಗೆ ಚಾಲನೆ ದೊರೆತಿದೆ.
ವಂದೇಮಾತರಂ ಗೀತೆಯೊಂದಿಗೆ ಸದನವು 11 ಗಂಟೆಗೆ ಆರಂಭವಾಯಿತು. ಬಿ.ಎಸ್. ಯಡಿಯೂರಪ್ಪ ಅವರು ಶಾಸಕರಾಗಿ ಮೊದಲು ಪ್ರಮಾಣವಚನ ಸ್ವೀಕರಿಸಿದರು. ರೈತರ ಹೆಸರಿನಲ್ಲಿ ಅವರು ಪ್ರಮಾಣವಚನ ಸ್ವೀಕರಿಸಿದರು.
ಸ್ಪೀಕರ್ ಕೆ.ಜಿ. ಬೋಪಯ್ಯ ಅವರು ಪ್ರಮಾಣ ವಚನ ಬೋಧನೆ ಮಾಡಿದರು. ಮುಖ್ಯಮಂತ್ರಿಯಾಗಿ ಅವರು ಗುರುವಾರ ಪ್ರಮಾಣವಚನ ಸ್ವೀಕಾರ ಮಾಡಿದ್ದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಉಳಿದ ಶಾಸಕರೂ ಪ್ರಮಾಣವಚನ ಸ್ವೀಕರಿಸಲು ಆರಂಭಿಸಿದ್ದಾರೆ. ಇಬ್ಬರು ಶಾಸಕರು ಒಟ್ಟಿಗೆ ಪ್ರಮಾಣವಚನ ಸ್ವೀಕಾರ ಮಾಡುತ್ತಿದ್ದಾರೆ.
ಇದುವರೆಗೆ ಸುಮಾರು 210 ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಸದನವನ್ನು 3.30ಕ್ಕೆ ಮುಂದೂಡಲಾಗಿದೆ.
ಚುನಾವಣೆ ಬಳಿಕ ವಿಧಾನಸಭೆಯಲ್ಲಿ ನಡೆಯುತ್ತಿರುವ ಮೊದಲ ಸಭೆ ಇದಾಗಿದ್ದು, ಶಾಸಕರ ಪ್ರಮಾಣವಚನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸಂಜೆ 4 ಗಂಟೆಗೆ ಬಹುಮತ ಸಾಬೀತುಪಡಿಸುವ ಪ್ರಕ್ರಿಯೆ ಆರಂಭವಾಗಲಿದೆ.