ಮೂರು ದಿನಗಳ ಮುಖ್ಯಮಂತ್ರಿ ಯಡಿಯೂರಪ್ಪ: ಸಿದ್ದರಾಮಯ್ಯ ಟ್ವೀಟ್
Recommended Video
ಬೆಂಗಳೂರು, ಮೇ 19: ರಾಜ್ಯ ವಿಧಾನಸಭೆಯ ಕಲಾಪ ಆರಂಭವಾಗುತ್ತಿದ್ದಂತೆಯೇ ರಾಜಕಾರಣಿಗಳು ಮತ್ತು ಜನರ ಕುತೂಹಲ, ಉದ್ವೇಗ ಹೆಚ್ಚಾಗಿದೆ.
ಆದರೆ, ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅವರ ಅಧಿಕಾರದ ಅವಧಿ ಇಂದೇ ಮುಕ್ತಾಯವಾಗಲಿದೆ. ಅವರು ಮೂರು ದಿನಗಳ ಮಟ್ಟಿಗಿನ ಮುಖ್ಯಮಂತ್ರಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ಕರ್ನಾಟಕ ವಿಶ್ವಾಸಮತ LIVE: ತಾಜ್ ವೆಸ್ಟೆಂಡ್ ನಲ್ಲಿ ಪತ್ತೆಯಾದ ಮಿಸ್ಸಿಂಗ್ ಶಾಸಕರು!
ಕಲಾಪ ಆರಂಭಕ್ಕೂ ಮುನ್ನ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಬಹುಮತವಿಲ್ಲದೆಯೇ ಸಂವಿಧಾನ ಬಾಹಿರವಾಗಿ ಪ್ರಮಾಣವಚನ ಸ್ವೀಕಾರ ಮಾಡಿರುವುದು ನಾಡಿನ ಮತದಾರರ ಆಶಯಗಳಿಗೆ ವಿರುದ್ಧವಾಗಿದೆ ಎಂದಿದ್ದಾರೆ. ಇಂದು ಸಂಜೆ ಜನಾಭಿಪ್ರಾಯಕ್ಕೆ ಜಯ ದೊರೆಯಲಿದೆ ಎಂಬ ವಿಶ್ವಾಸವಿರುವುದಾಗಿ ಹೇಳಿಕೊಂಡಿದ್ದಾರೆ.
3 ದಿನದ ಮುಖ್ಯಮಂತ್ರಿ ಶ್ರೀಯುತ ಯಡಿಯೂರಪ್ಪನವರ ಅಧಿಕಾರಾವಧಿ ಇಂದಿಗೆ ಕೊನೆಗೊಳ್ಳಲಿದೆ. ಬಹುಮತವಿಲ್ಲದೆ ಸಂವಿಧಾನ ಬಾಹಿರವಾಗಿ ಪ್ರಮಾಣ ವಚನ ಸ್ವೀಕರಿಸಿರುವುದು ನಾಡಿನ ಮತದಾರರ ಆಶಯಗಳಿಗೆ ವಿರುದ್ಧ.
— Siddaramaiah (@siddaramaiah) 19 May 2018
ಇಂದು ಸಂಜೆ ಜನಾಭಿಪ್ರಾಯಕ್ಕೆ ಜಯ ದೊರೆಯಲಿದೆ ಎಂಬ ಸಂಪೂರ್ಣ ವಿಶ್ವಾಸವಿದೆ.
ಸಂಜೆ
4
ಗಂಟೆಗೆ
ಏನೆಲ್ಲಾ
ಬೆಳವಣಿಗೆಗಳು
ನಡೆಯಲಿವೆ
ಎಂಬ
ಲೆಕ್ಕಾಚಾರಗಳು
ನಡೆಯುತ್ತಿವೆ.
ಯಡಿಯೂರಪ್ಪ
ಅವರು
ತಮಗೆ
ಬಹುಮತ
ಇರುವುದನ್ನು
ಸಾಬೀತುಪಡಿಸಿಕೊಳ್ಳುವ
ಬಗ್ಗೆ
ವಿಶ್ವಾಸ
ವ್ಯಕ್ತಪಡಿಸಿದ್ದಾರೆ.
ಬಿಜೆಪಿಯು ತನಗೆ ಅಗತ್ಯವಿರುವಷ್ಟು ಮತಗಳನ್ನು ಪಡೆದುಕೊಳ್ಳಲು ತಮ್ಮ ಶಾಸಕರನ್ನು ಸೆಳೆಯಲಿವೆ ಎಂಬ ಭಯದಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಅವರು ಅತ್ತಿತ್ತ ಸುಳಿಯದಂತೆ ತಡೆಯಲು ಹರಸಾಹಸಪಡುತ್ತಿವೆ.