ವಿಧಾನಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ, 2 ದಿನ ಸರ್ಕಾರ ಸೇಫ್
Recommended Video
ಬೆಂಗಳೂರು, ಜುಲೈ 19: ವಿಶ್ವಾಸಮತ ಯಾಚನೆಯನ್ನು ವ್ಯವಸ್ಥಿತವಾಗಿ ಮುಂದೂಡಲು ಯಶಸ್ವಿಯಾಗಿರುವ ಆಡಳಿತ ಪಕ್ಷದ ಸದಸ್ಯರು ಶುಕ್ರವಾರವಾದರೂ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಮುಗಿಸುತ್ತಾರೆಯೇ ಎಂಬುದು ಕುತೂಹಲ ಕೆರಳಿಸಿದೆ.
Photos : ಸದನದಲ್ಲಿ ಗದ್ದಲ, ಅಹೋರಾತ್ರಿ ಧರಣಿ, ಮಾರ್ನಿಂಗ್ ವಾಕ್
ನಿನ್ನೆ ನಡೆದ ಕಲಾಪದಲ್ಲಿ ಸಿಎಂ ಕುಮಾರಸ್ವಾಮಿ ಅವರು ವಿಶ್ವಾಸಮತ ಯಾಚನೆ ಮೇಲೆ ಭಾಷಣ ಆರಂಭಿಸಿದ್ದಾಗ ಕಾರ್ಯಲೋಪವನ್ನು ಎತ್ತಿದ ಸಿದ್ದರಾಮಯ್ಯ ಅವರು ಸುಪ್ರೀಂತೀರ್ಪಿನಿಂದಾಗಿ ಪಕ್ಷದ ಹಾಗೂ ಶಾಸಕಾಂಗ ಪಕ್ಷದ ನಾಯಕನಿಗೆ ಇದ್ದ ಹಕ್ಕುಗಳ ಉಲ್ಲಂಘನೆ ಆಗಿದೆ, ಈ ಪ್ರಕರಣ ಇತ್ಯರ್ಥವಾಗುವವರೆಗೂ ವಿಶ್ವಾಸಮತ ಯಾಚನೆ ಬೇಡವೆಂದು ಮನವಿ ಮಾಡಿದರು.
ವಿಶ್ವಾಸಮತ: ಗುರುವಾರ ಕಲಾಪದಲ್ಲಿ ಏನೇನೆಲ್ಲಾ ನಡೆಯಿತು?
ಸಿದ್ದರಾಮಯ್ಯ ಅವರು ಎತ್ತಿದ ಪಾಯಿಂಟ್ ಆಫ್ ಆರ್ಡರ್ (ಕಾರ್ಯಲೋಪ)ದ ಬಗ್ಗೆ ಸದನದಲ್ಲಿ ಅಷ್ಟು ಸುದೀರ್ಘವಾಗಿ ಚರ್ಚೆ ನಡೆದಿದ್ದು ವಿರಳವಾದುದ್ದಾಗಿತ್ತು, ಪಾಯಿಂಟ್ ಆಫ್ ಆರ್ಡರ್ ಬಗ್ಗೆ ಇಷ್ಟು ಸುಧೀರ್ಘವಾದ ಚರ್ಚೆ ಬಿಜೆಪಿಯಲ್ಲಿ ಅಸಮಾಧಾನ ಮೂಡಿಸಿ ಪದೇ-ಪದೇ ವಿಶ್ವಾಸಮತ ಯಾಚನೆಗೆ ಒತ್ತಾಯಿಸಿದರು.
ಭೋಜನ ವಿರಾಮದ ನಂತರ ಬಿಜೆಪಿ ಸದಸ್ಯರು ಸ್ಪೀಕರ್ ಅವರ ವಿರುದ್ಧ ಅಸಮಾಧಾನ ಹೊರಹಾಕಿ, ರಾಜ್ಯಪಾಲರಿಗೆ ಮನವಿ ನೀಡಿದರು. ಅಂತೆಯೇ ರಾಜ್ಯಪಾಲರು ಸ್ಪೀಕರ್ ಅವರಿಗೆ ಸಂದೇಶ ರವಾನಿಸಿ ಇಂದೇ ವಿಶ್ವಾಸಮತ ಯಾಚನೆ ಪೂರ್ಣಗೊಳಿಸಿ ಎಂದರು. ಇದು ಆಡಳಿತ ಪಕ್ಷಗಳ ಅಸಮಾಧಾನಕ್ಕೆ ಕಾರಣವಾಯಿತು.
'ಆಯಾ ರಾಮ್, ಗಯಾ ರಾಮ್' ಪಕ್ಷಾಂತರ ನಿಷೇಧ ಕಾಯ್ದೆ ಹೇಗೆ?
ಅಂತಿಮವಾಗಿ ಆಡಳಿತ ಪಕ್ಷದ ಸದಸ್ಯರು ಬಿಜೆಪಿಯ ಆಪರೇಷನ್ ಕಮಲದ ಬಗ್ಗೆ ಸದನದಲ್ಲಿ ಘೋಷಣೆಗಳನ್ನು ಕೂಗಿ ಗದ್ದಲ ಎಬ್ಬಿಸಿದ ಕಾರಣ ಸದನವನ್ನು ಶುಕ್ರವಾರಕ್ಕೆ ಮುಂದೂಡಲಾಯಿತು. ಆಡಳಿತ ಪಕ್ಷದ ಉದ್ದೇಶಪೂರ್ವಕ ವಿಳಂಬ ನೀತಿ ಖಂಡಿಸಿ ಬಿಜೆಪಿ ಸದಸ್ಯರು ರಾತ್ರಿಪೂರ್ತಿ ವಿಧಾನಸೌಧದಲ್ಲಿಯೇ ಕಳೆದರು.
ಕರ್ನಾಟಕ ರಾಜಕೀಯ ಬಿಕ್ಕಟ್ಟು, ಪಕ್ಷಾಂತರ ನಿಷೇಧ ಕಾಯ್ದೆ ಎಂದರೇನು?
ಇಂದು 11 ಗಂಟೆಗೆ ವಿಧಾನಸಭೆ ಕಲಾಪ ಆರಂಭವಾಗಲಿದ್ದು, ರಾಜ್ಯಪಾಲರು ಸಿಎಂ ಕುಮಾರಸ್ವಾಮಿ ಅವರಿಗೆ ಪತ್ರ ಬರೆದು, ಇಂದು ಮಧ್ಯಾಹ್ನ 1:30 ರ ಒಳಗಾಗಿ ವಿಶ್ವಾಸಮತ ಯಾಚನೆ ಮುಗಿಸುವುದಾಗಿ ಹೇಳಿರುವ ಕಾರಣ ಇಂದಾದರೂ ವಿಶ್ವಾಸಮತ ಯಾಚನೆ ಆಗುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.