ಮಂಗಳವಾರಕ್ಕೆ ಕಲಾಪ ಮುಂದೂಡಿಕೆ: ಮುಗಿಯದ ಚರ್ಚೆ, ಪ್ರತಿಭಟಿಸದ ಪ್ರತಿಪಕ್ಷ
Recommended Video
ಬೆಂಗಳೂರು, ಜುಲೈ 22: ಕಳೆದೆರೆಡು ವಾರಗಳಿಂದ ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಹೈಡ್ರಾಮಾಕ್ಕೆ ಇಂದಾದರೂ ತೆರೆ ಬೀಳಲಿದೆಯೇ ಎನ್ನುವ ಕುತೂಹಲ ಆರಂಭವಾಗಿದೆ.
ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಸ್ಪೀಕರ್ ರಮೇಶ್ ಮುಂದಿರುವ ಆಯ್ಕೆಗಳೇನು?
ಒಂದು ಗಂಟೆ ತಡವಾಗಿ ಆರಂಭವಾದ ಸದನದಲ್ಲಿ ಮೊದಲು ಸ್ಪೀಕರ್ ರಮೇಶ್ ಕುಮಾರ್ ಅವರು ಕ್ರಿಯಾ ಲೋಪದ ಕುರಿತಾದ ರೂಲಿಂಗ್ ಪ್ರಕಟಿಸಿದರು. ಪಕ್ಷದ ಶಾಸಕರಿಗೆ ವಿಪ್ ಜಾರಿ ಮಾಡುವುದು ಶಾಸಕಾಂಗ ಪಕ್ಷದ ನಾಯಕರ ಹಕ್ಕು ಎಂದು ಹೇಳಿದರು.
ವಿಶ್ವಾಸಮತಕ್ಕೆ ಮುನ್ನ ಸಿಎಂ ಕುಮಾರಸ್ವಾಮಿ ಮಹತ್ವದ ಪತ್ರಿಕಾ ಪ್ರಕಟಣೆ
ಬಳಿಕ ಸಚಿವ ಕೃಷ್ಣ ಬೈರೇಗೌಡ ಅವರು ಅತೃಪ್ತ ಶಾಸಕರಿಗೂ ಬಿಜೆಪಿಗೂ ಸಂಬಂಧವಿದೆ ಎಂದು ಆರೋಪಿಸಿದರು. ಅದಕ್ಕೆ ಸಂಬಂಧಿಸಿದಂತೆ ಅವರು ವಿವಿಧ ವರದಿಗಳನ್ನು, ಆಡಿಯೋ ಸಂಭಾಷಣೆಗಳ ವಿವರಗಳನ್ನು ಪ್ರಸ್ತಾಪಿಸಿದರು.
'ಆಯಾ ರಾಮ್, ಗಯಾ ರಾಮ್' ಪಕ್ಷಾಂತರ ನಿಷೇಧ ಕಾಯ್ದೆ ಹೇಗೆ?
ಕೃಷ್ಣ ಬೈರೇಗೌಡರ ಭಾಷಣದ ವೇಳೆ ಅನೇಕ ಬಾರಿ ಗದ್ದಲಗಳು ಉಂಟಾದವು. ಈ ಸಂದರ್ಭದಲ್ಲಿ ಆಪರೇಷನ್ ಕಮಲದ ಕುರಿತು ಸಹ ಚರ್ಚೆ ನಡೆಯಿತು.
ಕರ್ನಾಟಕ ಬಿಕ್ಕಟ್ಟು: ವಿಶ್ವಾಸಮತ ಪ್ರಕ್ರಿಯೆ ಹೇಗೆ ನಡೆಯುತ್ತದೆ?
ಇಂದು ವಿಶ್ವಾಸಮತ ಯಾಚನೆ ನಡೆಸುವುದು ಬೇಡ. ಎರಡು ದಿನ ಅವಕಾಶ ಕೊಡಿ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಬೆಳಿಗ್ಗೆ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದರು. ಇದಕ್ಕೆ ಸ್ಪೀಕರ್ ಅಸಮಾಧಾನ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.
ಕಲಾಪದಲ್ಲಿ ಗದ್ದಲ, ಚರ್ಚೆ, ಸಿಟ್ಟು, ನಗು ಹಲವು ಭಾವ ಚಿತ್ರಗಳಲ್ಲಿ
ಅತೃಪ್ತ ಶಾಸಕರು ಸದನಕ್ಕೆ ಹಾಜರಾಗುವುದು ಬಿಡುವುದು ಅವರಿಗೆ ಬಿಟ್ಟ ವಿಚಾರ ಎಂದು ಸುಪ್ರೀಂಕೋರ್ಟ್ ಹೇಳಿದೆ. ಇದರಿಂದ ತ್ರಿಶಂಕು ಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ಗೊಂದಲ ಬಗೆಹರಿಸಲು ಸ್ಪೀಕರ್ ಮುಂದಾಗಬೇಕು. ಅತೃಪ್ತ ಶಾಸಕರ ರಾಜೀನಾಮೆ ಅಂಗೀಕರಿಸಬೇಕೇ ಅಥವಾ ತಿರಸ್ಕರಿಸಬೇಕೇ ಅಥವಾ ಅವರನ್ನು ಅನರ್ಹಗೊಳಿಸುವುದೇ ಎಂದು ನಿರ್ಧರಿಸಬೇಕು ಎಂದು ಕಾಂಗ್ರೆಸ್ ಕೋರಿದೆ.
ಕರ್ನಾಟಕದ ಅತೃಪ್ತ ಶಾಸಕರಿಗೆ ವಿಪ್ ಅನ್ವಯವಾಗುತ್ತಾ? ಗೊಂದಲ, ದ್ವಂದ್ವ
ಇಂದು ಕೂಡ ಸದನದಲ್ಲಿ ಚರ್ಚೆ ನಡೆಸಿ ವಿಶ್ವಾಸಮತ ಯಾಚನೆಯನ್ನು ಮುಂದೂಡಲು ಮೈತ್ರಿ ನಾಯಕರು ಪ್ರಯತ್ನಿಸುತ್ತಿದ್ದಾರೆ.
ವಿಶ್ವಾಸಮತ: ಸುಪ್ರೀಂಕೋರ್ಟ್ ಕದ ತಟ್ಟಿದ ಪಕ್ಷೇತರ ಶಾಸಕರು
ವಿಶ್ವಾಸಮತಕ್ಕೂ ಮುನ್ನ ಬಿಎಸ್ಪಿ ನಾಯಕಿ ಮಾಯಾವತಿ, ಕುಮಾರಸ್ವಾಮಿ ಸರ್ಕಾರದ ಪರ ನಿಲ್ಲಲು ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮಾಯಾವತಿ ಕರ್ನಾಟಕದಲ್ಲಿರುವ ಬಿಎಸ್ಪಿ ಶಾಸಕರಿಗೆ ಕುಮಾರಸ್ವಾಮಿ ಸರ್ಕಾರದ ಪರವಾಗಿ ಮತದಾನ ಮಾಡುವಂತೆ ನಿರ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.