Karnataka Assembly Session 2022 live; ಅಧಿವೇಶನದ ಮುಖ್ಯಾಂಶಗಳು
ಬೆಂಗಳೂರು, ಸೆಪ್ಟೆಂಬರ್ 23; ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನದ 10 ನೇ ದಿನದ ಕಲಾಪ ಶುಕ್ರವಾರ ಆರಂಭವಾಗಿದೆ. ಒಟ್ಟು 10 ದಿನಗಳ ಕಾಲ ಅಧಿವೇಶನ ನಡೆಯಲಿದೆ.
ಸೆಪ್ಟೆಂಬರ್ 12 ರಿಂದ 23ರ ತನಕ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಬಸವರಾಜ ಬೊಮ್ಮಾಯಿ ಸರ್ಕಾರ ಒಂದು ವರ್ಷ ಪೂರ್ಣಗೊಳಿಸಿದ ಬಳಿಕ ನಡೆಯುತ್ತಿರುವ ಅಧಿವೇಶನ ಇದಾಗಿದೆ.
ಶೇ 40ರಷ್ಟು ಕಮೀಷನ್ ಆರೋಪ, ರಾಜ್ಯದಲ್ಲಿ ಸುರಿಯುತ್ತಿರುವ ಮಳೆ, ಪಠ್ಯ ಪುಸ್ತಕ ಪರಿಷ್ಕರಣೆ ಮುಂತಾದ ಅಂಶಗಳನ್ನು ಸದನದಲ್ಲಿ ಪ್ರಸ್ತಾಪಿಸಿ ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ತಯಾರಿ ನಡೆಸಿವೆ.
ವಿಧಾನ ಪರಿಷತ್ನಲ್ಲಿ ಪರಿಷತ್ ಸಭಾಪತಿ ಆಯ್ಕೆ ನಡೆಯಬೇಕಿದೆ. ಸದ್ಯ ರಘುನಾಥರಾವ್ ಮಲ್ಕಾಪುರೆ ಹಂಗಾಮಿ ಸಭಾಪತಿಯಾಗಿದ್ದಾರೆ. ಪರಿಷತ್ನಲ್ಲಿ ಬಿಜೆಪಿ ಬಹಮತ ಹೊಂದಿದೆ. ಸಭಾಪತಿ, ಉಪ ಸಭಾಪತಿ ಸ್ಥಾನಕ್ಕೆ ದಿನಾಂಕ ಘೋಷಣೆಯಾದ ಬಳಿಕ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ನಿರೀಕ್ಷೆ ಇದೆ.
ವಿಧಾನಮಂಡಲದ ಮುಂಗಾರು ಅಧಿವೇಶನ ಸುದ್ದಿ, ಚಿತ್ರ, ವಿಡಿಯೋ ಸೇರಿದಂತೆ ಕ್ಷಣ-ಕ್ಷಣದ ಅಪ್ಡೇಟ್ಗಳು ಈ ಪುಟದಲ್ಲಿ ನಿಮಗೆ ಸಿಗಲಿವೆ.