Live

Karnataka Assembly Poll 2023 LIVE: ಹೈವೋಲ್ಟೇಜ್ ಬಹಿರಂಗ ಪ್ರಚಾರ ಇಂದು ಸಂಜೆ ಅಂತ್ಯ: ಎಣ್ಣೆಯೂ ಬಂದ್‌!

ಬೆಂಗಳೂರು, ಮೇ 08: ರಾಜ್ಯ ವಿಧಾನಸಭಾ ಚುನಾವಣೆಯನ್ನ ಪ್ರತಿಷ್ಠೆಯಾಗಿ ತೆಗೆದುಕೊಂಡ ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರ, ರೋಡ್‌ ಶೋ ಹಾಗೂ ಸಮಾವೇಶಗಳ ಮೂಲಕ ಚುನಾವಣಾ ಕಾಅವು ಜೋರಾಗಿದ್ದು, ಮೇ 10 ರಂದು ನಡೆಯಲಿರುವ ಚುನಾವಣಾ ಬಹಿರಂಗ ಪ್ರಚಾರಕ್ಕೆ ಇಂದು (ಸೋಮವಾರ) ಸಂಜೆ 6 ಗಂಟೆಗೆ ತೆರೆ ಬೀಳಲಿದೆ. ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಕ್ಷೇತ್ರದ ಮತದಾರರಲ್ಲದವರು ಆ ಕ್ಷೇತ್ರದದಲ್ಲಿ ಉಳಿಯುವಂತಿಲ್ಲ.

ಮತದಾನ ಮುಕ್ತಾಯದ 48 ಗಂಟೆಗೂ ಮುನ್ನ ಬಹಿರಂಗ ಪ್ರಚಾರ ಅಂತ್ಯವಾಗಲಿದೆ. ಅದರಂತೆ ಇಂದು(ಸೋಮವಾರ) ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಯಾವುದೇ ಅಭ್ಯರ್ಥಿ ಧ್ವನಿವರ್ಧಕ ಬಳಸಿ, ಸಮಾವೇಶ, ರೋಡ್ ಶೋಗಳ ಮೂಲಕ ಮತಯಾಚಿಸುವಂತಿಲ್ಲ. ಆದರೆ, ಮನೆ ಮನೆಗೆ ತೆರಳಿ ಮಂಗಳವಾರ ಸಂಜೆಯವರೆಗೂ ಮತ ಕೇಳಬಹುದು. ಇನ್ನೂ ಮತದಾರರ ಮನಗೊಳಿಸಲು ಕಳೆದ ಎರಡು ದಿನಗಳಷ್ಟೇ ಬಾಕಿ ಉಳಿದಿದ್ದು, ಇನ್ನೆರಡು ದಿನಗಳಲ್ಲಿ ಸೋಲು ಗೆಲುವಿನ ಲೆಕ್ಕಾಚಾರವೇ ಬದಲಾಗಲಿದೆ.

Karnataka Assembly Poll 2023 LIVE News Highlights On Last Day for Congress, BJP, JDS, Election Campaigning Updates in Kannada

ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದ ಚುನಾವಣೆ ನಡೆಯಲಿದ್ದು, ಮೇ 8ರಂದು ಬಹಿರಂಗ ಪ್ರಚಾರಕ್ಕೆ ಅಂತಿಮ ದಿನವಾಗಿದೆ. ಇನ್ನು ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಶನಿವಾರ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 15 ರೊಳಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ.

'ಒನ್ ಇಂಡಿಯಾ ಕನ್ನಡ' ಜಾಲತಾಣ ಓದುಗರಿಗೆ ಚುನಾವಣಾ ಬೆಳವಣಿಗೆಯ ಮಾಹಿತಿಯನ್ನು ಲೈವ್ ಬ್ಲಾಗ್ ಮೂಲಕ ನೀಡಲಿದೆ. ನೀವು ಇಲ್ಲಿ ಪ್ರಮುಖ ರಾಜಕೀಯ ಪಕ್ಷಗಳ ನಾಯಕರ ಪ್ರಚಾರ, ಭರವಸೆ, ಸಾರ್ವಜನಿಕ ಸಭೆಗಳು, ಹೇಳಿಕೆಗಳು, ಚರ್ಚೆಗಳು, ಪ್ರಚಾರದ ಸದ್ದು-ಗದ್ದಲಗಳ ಕ್ಷಣ ಕ್ಷಣದ ಮಾಹಿತಿ ತಿಳಿದುಕೊಳ್ಳಬಹುದು .

May 08, 2023, 2:07 pm IST

ಫ್ಯಾನ್ಸ್‌ ಕಿಡಿ: ಶಿವಣ್ಣ ಬಗ್ಗೆ ಹೇಳಿದ ಮಾತನ್ನು ಹಿಂಪಡೆದ ಪ್ರಶಾಂತ್ ಸಂಬರ್ಗಿ

ವರುಣಾ ಕಾಂಗ್ರೆಸ್‌ ಅಭ್ಯರ್ಥಿ ಸಿದ್ದರಾಮಯ್ಯ ಪರ ಕನ್ನಡ ಚಿತ್ರರಂಗದ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಪ್ರಚಾರ ನಡೆಸಿದ್ದರು. ಕಾಂಗ್ರೆಸ್‌ ಪರ ಶಿವಣ್ಣ ಪ್ರಚಾರಕ್ಕೆ ಬಿಗ್‌ಬಾಸ್‌ ಸ್ಪರ್ಧಿ ಪ್ರಶಾಂತ್‌ ಸಂಬರ್ಗಿ ವ್ಯಂಗ್ಯವಾಡಿದ್ದು, ಸೋಶಿಯಲ್‌ ಮೀಡಿಯಾದಲ್ಲಿ ಹಲವು ಪೋಸ್ಟ್‌ಗಳನ್ನ ಹಾಕಿದ್ದರು. ಪ್ರಶಾಂತ್‌ ಸಂಬರ್ಗಿ ಪೋಸ್ಟ್‌ ವಿರುದ್ಧ ಶಿವರಾಜ್‌ ಕುಮಾರ್‌ ಅಭಿಮಾನಿಗಳು ವ್ಯಾಪಕ ಆಕ್ರೋಶ ಹೊರಹಾಕಿದ್ದರು. ಸಾಕಷ್ಟು ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರಶಾಂತ್‌ ಸಂಬರ್ಗಿ ತಮ್ಮ ಮಾತನ್ನು ಹಿಂಪಡೆದಿದ್ದಾರೆ. 'ಶಿವಣ್ಣ ಮತ್ತೆ ಇನೊಬ್ಬ ನಮ್ಮ ಆಪ್ತ ಮಿತ್ರನೊಂದಿಗೆ ಇದೀಗ ತಾನೇ ಮಾತನಾಡಿದೆ. ಶಿವಣ್ಣ ಅವರಿಗೆ ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಸ್ನೇಹಿತರನ್ನು ಹೊಂದಿದ್ದಾರೆ. ಶಿವಣ್ಣ ಅವರ ತಂದೆಯ ಬಯಕೆಯಂತೆ ಅವರು ರಾಜಕೀಯದಿಂದ ದೂರವಾಗಿದ್ದರೆ. ನಾನು ಅವರ ಬಗ್ಗೆ ಬರೆದಿರುವ ನನ್ನ ಪೋಸ್ಟ್ ಅನ್ನು ಹಿಂದಕ್ಕೆ ತೆಗೆದುಕೊಳ್ಳುತ್ತೇನೆ ಮತ್ತು ಶಿವಣ್ಣ ಮತ್ತು ಅವರ ಅಭಿಮಾನಿಗಳಿಗೆ ಕರ್ನಾಟಕದಾದ್ಯಂತ ನೋಯಿಸಬಾರದು ಎಂದು ನಾನು ಬಯಸುತ್ತೇನೆ' ಎಂದು ಪ್ರಶಾಂತ್‌ ಸಂಬರ್ಗಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
May 08, 2023, 12:21 pm IST

ಸೋನಿಯಾ ಗಾಂಧಿ ವಿರುದ್ಧ ಶೋಭಾ ಕರಂದ್ಲಾಜೆ ದೂರು

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ದೂರು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಹುಬ್ಬಳ್ಳಿಯಲ್ಲಿ ಮಾತನಾಡುವ ವೇಳೆ ಸೋನಿಯಾ ಗಾಂಧಿ ಅವರು ರಾಜ್ಯದ ವಿಭಜನೆಯ ಬಗ್ಗೆ ಮಾತನಾಡಿದ್ದಾರೆ. ಸೋನಿಯಾ ಕನ್ನಡಿಗರ ಬಗ್ಗೆ ಸಂಶಯ ಬರುವಂತೆ ಮಾತನಾಡಿದ್ದಾರೆ. ಹೀಗಾಗಿ ಚುನಾವಣಾ ಆಯೋಗ ಬೇಗ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು' ಎಂದು ಶೋಭಾ ಕರಂದ್ಲಾಜೆ ಆಗ್ರಹಿಸಿದರು.
May 08, 2023, 11:58 am IST

ಭಾರತ ಐಕ್ಯತಾ ಯಾತ್ರೆಯ ವೇಳೆ ನಾನು ಕರ್ನಾಟಕದ ಜನತೆಯಿಂದ ಅರಿತಿದ್ದು ಬಹಳಷ್ಟು- ರಾಹುಲ್ ಗಾಂಧಿ
May 08, 2023, 9:30 am IST

40% ಕಮಿಷನ್ ಲೂಟಿ ಮಾಡುವವರು ಬೇಡ, ಕೆಪಿಸಿಸಿ ಟ್ವೀಟ್
May 08, 2023, 8:11 am IST

ಕೊನೆ ಹಂತದ ಕಸರತ್ತು: ತವರು ಕ್ಷೇತ್ರದಲ್ಲಿ ಇಂದು ಸಿಎಂ ಮತಯಾಚನೆ

ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಹಿನ್ನೆಲೆ ತವರು ಕ್ಷೇತ್ರ ಶಿಗ್ಗಾಂವಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಚಾರ ನಡೆಸಲಿದ್ದಾರೆ.
May 08, 2023, 7:56 am IST

ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿ ಮಾಡಿಲ್ಲ, ನಾಶ ಮಾಡಿದೆ: ಪ್ರಿಯಾಂಕಾ ಗಾಂಧಿ

ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿ ಮಾಡುವ ಬದಲು, ಇದ್ದ ಉದ್ಯೋಗಗಳನ್ನು ನಾಶ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಜನರ ಸಂಕಷ್ಟವನ್ನು ಅರಿತು, ಈ ಸರ್ಕಾರ ಮಾಡಿರುವ ಲೂಟಿ ಹಣವನ್ನು ಮತ್ತೆ ಜನರಿಗೆ ಹಿಂತಿರುಗಿಸಲು ಮುಂದಾಗಿದೆ. ನಿಮಗೆ ಶೇ.100ರಷ್ಟು ಪ್ರಗತಿ ನೀಡುವ ಗ್ಯಾರಂಟಿ ನೀಡುತ್ತೇವೆ. ಹೆಚ್ಚು ಉದ್ಯೋಗ ಸೃಷ್ಟಿಸುತ್ತೇವೆ. ಬೀದರ್ ನಿಂದ ಚಾಮರಾಜನಗರದ ವರೆಗೆ ಉದ್ಯೋಗ ಸೃಷ್ಟಿಗೆ ಕೈಗಾರಿಕ ಕಾರಿಡಾರ್ ಮಾಡುತ್ತೇವೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.
May 08, 2023, 7:50 am IST

ಕಾಂಗ್ರೆಸ್ 150 ಕ್ಷೇತ್ರಗಳನ್ನು ಗೆದ್ದೆ ಗೆಲ್ಲುತ್ತದೆ: ರಾಹುಲ್‌ ಗಾಂಧಿ

ಬಿಜೆಪಿಗೆ ಈ ಚುನಾವಣೆಯಲ್ಲಿ 40 ಸೀಟುಗಳನ್ನು ಮಾತ್ರ ನೀಡಿ. ಕಾಂಗ್ರೆಸ್ ಪಕ್ಷಕ್ಕೆ ನೀವು ಕನಿಷ್ಠ 150 ಸೀಟುಗಳನ್ನು ನೀಡಬೇಕು. ಅದಕ್ಕಿಂತ ಕಡಿಮೆ ಬಹುಮತ ನೀಡಿದರೆ, ಮತ್ತೆ ಶಾಸಕರ ಕಳ್ಳತನ ಮಾಡುವ ಪ್ರಯತ್ನ ಮಾಡುತ್ತಾರೆ. ಈ ಬಾರಿ ಕಾಂಗ್ರೆಸ್ 150 ಕ್ಷೇತ್ರಗಳನ್ನು ಗೆದ್ದೆ ಗೆಲ್ಲುತ್ತದೆ ಎಂದು ರಾಹುಲ್‌ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದರು.
May 08, 2023, 7:48 am IST

ಮೋದಿ ಸಮಾಜದ‌ ವಿಷ ನುಂಗಿ ಆಧುನಿಕ ನೀಲಕಂಠ: ಸಿಎಂ

ಖರ್ಗೆಯವರು ಮೋದಿಗೆ ವಿಷ ಸರ್ಪ ಅಂದರು. ಮೋದಿ ಸಮಾಜದ‌ ವಿಷ ನುಂಗಿ ಆಧುನಿಕ ನೀಲಕಂಠ ಆಗಿದ್ದಾರೆ. ಬಜರಂಗ ದಳ ಬ್ಯಾನ್ ಮಾಡುವುದಾಗಿ ಹೇಳುತ್ತಾರೆ. ಪಿಎಫ್ಐ ಜೊತೆ ಬಜರಂಗ ದಳವನ್ನು ಹೋಲಿಸುತ್ತಾರೆ. ಈಗ ವಿರೋಧ ವ್ಯಕ್ತವಾಗುತ್ತಿದ್ದಂತೆ ತಾವೂ ಹನುಮಂತ ನ ಭಕ್ತರು ಎಂದು ದೇವಸ್ಥಾನಕ್ಕೆ ಹೋಗುತ್ತಿದ್ದಾರೆ ಎಂದು ಸಿಎಂ ಬೊಮ್ಮಾಯಿ‌ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+