ಸೋಮವಾರದಿಂದ ಅಧಿವೇಶನ, ವಿಪಕ್ಷಗಳ ಕೈಯಲ್ಲಿವೆ ಭರ್ಜರಿ ಅಸ್ತ್ರ
ಬೆಂಗಳೂರು, ಜೂನ್ 4: ಸೋಮವಾರದಿಂದ ವಿಧಾನಮಂಡಲದ ಮಳೆಗಾಲದ ಅಧಿವೇಶನ ಆರಂಭವಾಗಲಿದೆ. ಈ ಅಧಿವೇಶನದಲ್ಲಿ ಸರಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿಪಕ್ಷಗಳು ಸಜ್ಜಾಗಿವೆ.
ಜೂನ್ 5 ರಿಂದ 16ರವರೆಗೆ ನಡೆಯಲಿರುವ ಅಧಿವೇಶನದಲ್ಲಿ ಮುಖ್ಯವಾಗಿ ಬರ, ರೈತರ ಆತ್ಮಹತ್ಯೆ, ಸಾಲ ಮನ್ನಾ ಮೊದಲಾದ ವಿಚಾರಗಳು ಚರ್ಚೆಗೆ ಬರಲಿವೆ. ಜತೆಗೆ ಬಜೆಟ್ನ ಮುಂದುವರೆದ ಅಧಿವೇಶನವಾಗಿರುವ ಕಾರಣ ಇಲಾಖಾವಾರು ಬೇಡಿಕೆಗಳ ಚರ್ಚೆಗೂ ಅಧಿವೇಶನದಲ್ಲಿ ಅವಕಾಶ ಸಿಗಲಿದೆ.[ಜೂನ್ 5ರಿಂದ 16, ಜಿಎಸ್ಟಿಗಾಗಿ ಮುಂದುವರಿದ ಬಜೆಟ್ ಅಧಿವೇಶನ]
ಈಗಾಗಲೇ ಬಿಜೆಪಿ ಬರ ಪ್ರವಾಸ ಮಾಡಿದ್ದು ಬರ ನಿರ್ವಹಣೆ ವಿಚಾರದಲ್ಲಿ ಸರಕಾರದ ವಿರುದ್ಧ ಮುಗಿಬೀಳುವ ಸಾಧ್ಯತೆ ಇದೆ.

ಅವಿಶ್ವಾಸ ನಿರ್ಣಯ
ವಿಧಾನಪರಿಷತ್ತಿನ ಸಭಾಪತಿ ಡಿ.ಎಚ್.ಶಂಕರಮೂರ್ತಿ ವಿರುದ್ಧ ಕಾಂಗ್ರೆಸ್ ಸದಸ್ಯರು ಅವಿಶ್ವಾಸ ನಿರ್ಣಯದ ಪ್ರಸ್ತಾವನೆ ಸಲ್ಲಿಸಿದ್ದು ಅಧಿವೇಶನದಲ್ಲಿ ಇದು ಚರ್ಚೆಗೆ ಬರಲಿದೆ. ಹೀಗಾಗಿ ಶಂಕರಮೂರ್ತಿ ಸಭಾಪತಿ ಹುದ್ದೆಯ ಭವಿಷ್ಯ ಈ ಬಾರಿಯ ಅಧಿವೇಶನದಲ್ಲಿ ನಿರ್ಧಾರವಾಗಲಿದೆ.[ಜಿಎಸ್ ಟಿ ಪರಿಣಾಮ: ಚಿನ್ನದ ಮೇಲೆ ಶೇ. 3ರಷ್ಟು ತೆರಿಗೆ]
ವಿಪಕ್ಷಗಳ ಕೈಯಲ್ಲಿ ಅಸ್ತ್ರ!
ಈ ಅಧಿವೇಶನದಲ್ಲಿ ಸರಕಾರವನ್ನು ಹಣಿಯಲು ವಿಪಕ್ಷಗಳ ಕೈಯಲ್ಲಿ ಭರ್ಜರಿ ಅಸ್ತ್ರಗಳಿವೆ. ಪರ್ಜನ್ಯ ಯಾಗ, ಮೆಗ್ಗಾನ್ ಆಸ್ಪತ್ರೆಯ ದುರವಸ್ಥೆ, ಮರಳು ದಂಧೆ, ಅನುರಾಗ್ ತಿವಾರಿ ಸಾವಿನ ಪ್ರಕರಣದಲ್ಲಿ ಸರಕಾರವನ್ನು ವಿಪಕ್ಷಗಳು ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆ ಇದೆ.[ಜಿಎಸ್ಟಿ ಎಂದರೇನು? ಇದರಿಂದ ಯಾರಿಗೆ ಪ್ರಯೋಜನ?]
ಇದಲ್ಲದೆ ಗೋಹತ್ಯೆ ನಿಷೇಧ ವಿಚಾರವೂ ಸದನದಲ್ಲಿ ಬಿಸಿಬಿಸಿ ಚರ್ಚೆಗೆ ಬರುವ ಸಂಭವವಿದೆ. ಜೂನ್ 30ರ ಮೊದಲು ಜಿಎಸ್ಟಿ ವಿಧೇಯಕಕ್ಕೆ ಸದನ ಒಪ್ಪಿಗೆ ನೀಡಲೇಬೇಕಾಗಿರುವುದರಿಂದ ಅದೂ ಸದನದಲ್ಲಿ ಚರ್ಚೆಗೆ ಬರಲಿದೆ. ಇನ್ನು ವಿಶ್ವವಿದ್ಯಾಲಯಗಳಿಗೆ ಸಂಬಂಧಿಸಿದಂತೆ ಏಕರೂಪ ಶಿಕ್ಷಣ ಕಾಯ್ದೆ ಸೇರಿದಂತೆ ಮಹತ್ವದ ವಿಧೇಯಕಗಳಿಗೆ ಸಂಬಂಧಿಸಿದ ಚರ್ಚೆ ಅಧಿವೇಶನದಲ್ಲಿ ನಡೆಯಲಿದೆ.
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ












Click it and Unblock the Notifications