ಶಾಸಕರ ಪ್ರಶ್ನೆಗೆ ಉತ್ತರ ಕೊಡಲು ಸಚಿವರ ನಿರಾಸಕ್ತಿ: ಸಭಾಧ್ಯಕ್ಷರಿಂದಲೇ ಸಭಾತ್ಯಾಗ | Karnataka Assembly Speaker
ಕರ್ನಾಟಕ ನಮ್ಮ ದೇಶದಲ್ಲೇ ಅತ್ಯಂತ ಶ್ರೀಮಂತ ರಾಜ್ಯಗಳ ಪೈಕಿ ಒಂದಾಗಿದ್ದು, ಲಕ್ಷಾಂತರ ಕೋಟಿ ರೂಪಾಯಿ ಆದಾಯ ಸೃಷ್ಟಿಸುವ ರಾಜ್ಯವಾಗಿದೆ. ಇದೇ ಕಾರಣಕ್ಕೆ ಕರ್ನಾಟಕದ ರಾಜಕೀಯ ಹಾಗೂ ವಿಧಾಸಭೆ ಕಲಾಪಗಳ ಬಗ್ಗೆ ಇಡೀ ದೇಶ ಗಮನ ಇಡುತ್ತದೆ. ಹೀಗಿದ್ದಾಗ ಕರ್ನಾಟಕ ವಿಧಾನಸಭೆ ದೊಡ್ಡ ಇತಿಹಾಸ ಹೊಂದಿದ್ದು, ಹೀಗಿದ್ದಾಗ ಕರ್ನಾಟಕದ ವಿಧಾನಸಭೆ ಇತಿಹಾಸದಲ್ಲೇ ಮೊದಲ ಬಾರಿಗೆ ಒಂದು ಘಟನೆ ಸಂಭವಿಸಿದೆ. ಸಭಾಧ್ಯಕ್ಷರಿಂದಲೇ ದಿಢೀರ್ ಸಭಾತ್ಯಾಗ ನಡೆದಿರುವುದು ಇದೀಗ ಗಮನ ಸೆಳೆದಿದೆ. ಹಾಗಾದರೆ ಸಭಾಧ್ಯಕ್ಷರು ದಿಢೀರ್ ಸಭಾತ್ಯಾಗ ಮಾಡಿದ್ದು ಏಕೆ? ಬನ್ನಿ ತಿಳಿಯೋಣ.
ಅಂದಹಾಗೆ ಕರ್ನಾಟಕದಲ್ಲಿ ಇದೀಗ ಆಯವ್ಯಯ ಎಂದರೆ ವಾರ್ಷಿಕ ಬಜೆಟ್ ಕುರಿತು ಅಧಿವೇಶನವನ್ನ ನಡೆಸಲಾಗುತ್ತಿದ್ದು, ಈ ಹಿನ್ನೆಲೆ ಶಾಸಕರು ಪ್ರಶ್ನೆಗಳನ್ನ ಮುಂದಿಡುತ್ತಿದ್ದಾರೆ. ಆದರೆ ವಿಧಾನಸಭೆಯ ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಸಚಿವರು & ಅಧಿಕಾರಿಗಳು ಸಮರ್ಪಕ ಉತ್ತರ ನೀಡದ ಕಾರಣಕ್ಕೆ ದಿಢೀರ್ ವಿಧಾನಸಭೆ ಸಭಾಧ್ಯಕ್ಷರು ಕೋಪಗೊಂಡಿದ್ದಾರೆ. ಅಲ್ಲದೆ ಸಚಿವರು & ಅಧಿಕಾರಿಗಳ ವರ್ತನೆಯ ಕಾರಣ ಬೇಸರಗೊಂಡು ಸಭಾಧ್ಯಕ್ಷ ಯು.ಟಿ. ಖಾದರ್ ಅವರು ತಾವೇ ಸಭಾತ್ಯಾಗ ಮಾಡಿ ಕಲಾಪ ಮುಂದೂಡಿಕೆ ಮಾಡಿದರು. ಈ ಮೂಲಕ ಕರ್ನಾಟಕ ವಿಧಾನಸಭೆ ಇತಿಹಾಸದಲ್ಲೇ ಮೊದಲ ಬಾರಿಗೆ ಈ ಘಟನೆಯು ನಡೆದಿದೆ.

230 ಪ್ರಶ್ನೆಗಳಲ್ಲಿ 80ಕ್ಕೆ ಉತ್ತರ
ಸದಸ್ಯರು ಕೇಳಿದ ಪ್ರಶ್ನೆಗೆ ಸಚಿವರು & ಅಧಿಕಾರಿಗಳು ಸಮರ್ಪಕವಾಗಿ ಪ್ರತಿಕ್ರಿಯೆ ನೀಡಿರಲಿಲ್ಲ, ಇನ್ನು ಸರ್ಕಾರ ಲಿಖಿತ ಉತ್ತರ ನಿರಂತರವಾಗಿ ನಿರ್ಲಕ್ಷಿಸುತ್ತಿರುವುದನ್ನು ಅವರು ತೀವ್ರವಾಗಿ ಟೀಕಿಸಿದ್ದಾರೆ. ಈ ಅಧಿವೇಶನದಲ್ಲೇ ಹಲವು ಬಾರಿ ಅವರ ಸೂಚನೆ ಕಡೆಗಣಿಸಲಾಗಿದ್ದು, 230 ಪ್ರಶ್ನೆಗಳ ಪೈಕಿ ಕೇವಲ 80 ಪ್ರಶ್ನೆಗೆ ಗೃಹ ಸಚಿವರು ಉತ್ತರವನ್ನ ನೀಡಿದ್ದಾರೆ. ಇದನ್ನ ವಿರೋಧಿಸಿ ವಿಪಕ್ಷ ನಾಯಕ ಆರ್. ಅಶೋಕ್ ಸರ್ಕಾರದ ನಿರ್ಲಕ್ಷ್ಯ ಎಂದು ಆರೋಪಿಸಿ, ಆಕ್ರೋಶವನ್ನ ಹೊರ ಹಾಕಿದ್ದಾರೆ. ಈ ಎಲ್ಲಾ ಘಟನೆಗಳ ಬೆನ್ನಲ್ಲೇ ಅತ್ತ ಸಭಾಧ್ಯಕ್ಷರು ಕೂಡ ಸಭಾತ್ಯಾಗ ಮಾಡಿದ್ದಾರೆ.
ಸ್ಪೀಕರ್ ಮನವೊಲಿಸಲು ಸಿಎಂ ಯಶಸ್ವಿ
ಯು.ಟಿ. ಖಾದರ್ ಅವರು ಕೋಪ ಮಾಡಿಕೊಂಡು ಸಭಾತ್ಯಾಗ ಮಾಡಿದ ನಂತರ, ಅವರನ್ನು ಸ್ವತಃ ಸಿಎಂ ಸಿದ್ದರಾಮಯ್ಯ ಅವರು ಮನವೊಲಿಸಲು ಮುಂದಾದರು. ಈ ಬಗ್ಗೆ ಚರ್ಚೆ ನಡೆಸಿ ಕೊನೆಗೂ, ಸ್ಪೀಕರ್ ಯು.ಟಿ. ಖಾದರ್ ಅವರ ಮನವೊಲಿಸುವಲ್ಲಿ ಕೂಡ ಸಿಎಂ ಯಶಸ್ವಿಯಾದರು. ಉತ್ತರ ನೀಡದ 4 ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಈಗ ನೋಟಿಸ್ ಜಾರಿ ಮಾಡಲು ಸೂಚನೆ ನೀಡಿರುವ ಸಿಎಂ, ಅಧಿಕಾರಿಗಳಿಗೆ ಈ ಮೂಲಕ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಇದೇ ವಿಚಾರ ಸಂಬಂಧ ಇದೀಗ 3 ಅಧಿಕಾರಿಗಳನ್ನ ಅಮಾನತು ಮಾಡಿ ಗೇಟ್ಪಾಸ್ ಕೂಡ ನೀಡಲಾಗಿದ್ದು, ಕರ್ನಾಟಕ ವಿಧಾನಸಭೆಯ ಇತಿಹಾಸದಲ್ಲೇ ಇಂತಹ ಘಟನೆ ಇದೇ ಮೊದಲ ಬಾರಿಗೆ ನಡೆದಿದೆ. ಹಾಗೇ ಇನ್ನೊಂದು ಕಡೆ ವಿರೋಧ ಪಕ್ಷಗಳು ಇದೇ ಅಸ್ತ್ರವನ್ನು ಸರ್ಕಾರದ ವಿರುದ್ಧ ಪ್ರಯೋಗಿಸಲು ಸಜ್ಜಾಗಿದ್ದು, ಅಧಿವೇಶನ ಮುಂದಿನ ದಿನಗಳಲ್ಲಿ ಮತ್ತಷ್ಟು ತಿಕ್ಕಾಟಕ್ಕೆ ಸಾಕ್ಷಿಯಾಗುವ ಸಾಧ್ಯತೆ ಇದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications