Get Updates
Get notified of breaking news, exclusive insights, and must-see stories!

Karnataka Bandh: ಅಖಂಡ ಕರ್ನಾಟಕ ಬಂದ್; ಶಿವಸೇನೆ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ: ಬಸ್‌ ಸ್ಥಗಿತ

ಬೆಂಗಳೂರು, ಮಾರ್ಚ್‌ 22: ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟ ದಿನದಿಂದ ದಿನಕ್ಕೆ ಹೆಚ್ಚಾಗಿದೆ. ಮಹಾರಾಷ್ಟ್ರದಲ್ಲಿ ಕರ್ನಾಟಕ ಸಾರಿಗೆ ಬಸ್ ಚಾಲಕನಿಗೆ ಕಿರುಕುಳ ಕೊಟ್ಟ ಘಟನೆ ಖಂಡಿಸಿ ಕನ್ನಡ ಪರ ಸಂಘಟನೆಗಳು ಬಂದ್ಗೆ ಕರೆ ನೀಡಿವೆ. ಇಂದು (ಮಾರ್ಚ್ 22) ರಾಜ್ಯ ಸ್ತಬ್ಧವಾಗಲಿದೆ. ಹಲವು ಸಂಘ-ಸಂಸ್ಥೆಗಳು ಈ ಬಂದ್ಗೆ ಬೆಂಬಲ ಸೂಚಿಸಿವೆ. ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಅಖಂಡ ಕರ್ನಾಟಕ ಬಂದ್ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ.

ಕರ್ನಾಟಕ ಬಂದ್ ಹಿನ್ನೆಲೆ ಬೆಂಗಳೂರಲ್ಲಿ ಖಾಸಗಿ ಬಸ್, ವಾಹನಗಳು, ಓಲಾ ಉಬರ್ ಹೋರಾಟ ಸ್ಥಗಿತವಾಗಿದ್ದು, ಮಧ್ಯಾಹ್ನದವರೆಗೆ ಚಿತ್ರಮಂದಿರಗಳಲ್ಲಿ ಚಲನಚಿತ್ರ ಪ್ರದರ್ಶನಗಳು ಕ್ಯಾನ್ಸಲ್ ಆಗಿದ್ದು, ಟೌನ್ ಹಾಲಿನಿಂದ ಬೃಹತ್ ರ‍್ಯಾಲಿ ನಡೆಯಲಿದೆ. ಹಾಗಾಗಿ ಬೆಳಿಗ್ಗೆಯಿಂದಲೇ ಸಾರ್ವಜನಿಕರಿಗೆ ಟ್ರಾಫಿಕ್ ಜಾಮ್ ಬಿಸಿ ತಟ್ಟಲಿದೆ. ಇತ್ತ ಚಿಕ್ಕಬಳ್ಳಾಪುರದಲ್ಲಿ ಕನ್ನಡಪರ ಹೋರಾಟಗಾರರು ಶಿವಸೇನೆ ಪ್ರತಿಕೃತಿಯನ್ನು ದಹಿಸಿ ತೀವ್ರವಾದ ಆಕ್ರೋಶ ವ್ಯಕ್ತಪಡಿಸಿದರು.

Karnataka Bandh Bus service from Karnataka to Maharashtra has been suspended

ಕರ್ನಾಟಕ ಬಂದ್ ಬೆಂಬಲಿಸಿ ಚಿಕ್ಕಬಳ್ಳಾಪುರದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಶಿವಸೇನೆ ಪ್ರತಿಕೃತಿಯನ್ನು ದಹಿಸಿ ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಚಿಕ್ಕಬಳ್ಳಾಪುರ ನಗರದ ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಕನ್ನಡ ಸೇನೆ ಕರವೇ ಶಿವರಾಮೇಗೌಡ ಬಣ ಮುಖಂಡರು ಪ್ರತಿಭಟಿಸಿದರು. ಇನ್ನೊಂದು ಕಡೆ ಮೈಸೂರಿನಲ್ಲಿ ಕನ್ನಡಪರ ಸಂಘಟನೆಗಳು ಕೆಎಸ್ಆರ್ಟಿಸಿ ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ.

ಇನ್ನೂ ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಹೋಗುವ ಬಸ್ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಬೆಳಿಗ್ಗೆ ಆರಂಭವಾಗಬೇಕಿದ್ದ ಮಹಾರಾಷ್ಟ್ರ ಸಾರಿಗೆ ಬಸ್ ಗಳು ಸ್ಥಗಿತಗೊಂಡಿದ್ದು, ಮಹಾರಾಷ್ಟ್ರಕ್ಕೆ ಹೋಗುವ ಬಸ್ ಬಂದ್ ಹಿನ್ನೆಲೆ ಪ್ರಯಾಣಿಕರ ಪರದಾಡುವಂತಾಗಿದೆ. ಮೈಸೂರಿನ ಬಸ್ ನಿಲ್ದಾಣದ ಬಳಿ ತೆರಳಿದ ಕನ್ನಡ ಪರ ಸಂಘಟನೆಗಳು ಬಸ್ ಸಂಚರಿಸುತ್ತಿದ್ದನ್ನು ಗಮನಿಸಿ ಆಕ್ರೋಶ ಹಾಕಿದ್ದಾರೆ. ಕೂಡಲೇ ಬಸ್ಸಿನ ಚಾಲಕರಿಗೆ ಕನ್ನಡ ಪರ ಹೋರಾಟಗಾರರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೇ ಬಸ್‌ ಬಿಡದೇ ಬಸ್ಸಿನ ಮುಂಭಾಗದಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.

ಅಖಂಡ ಕರ್ನಾಟಕ ಬಂದ್‌ಗೆ ಕನ್ನಡ ಒಕ್ಕೂಟ- ಕರ್ನಾಟಕ ರಾಜ್ಯದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಕರೆ ಕೊಟ್ಟಿದ್ದಾರೆ. ಆದರೆ, ಕರ್ನಾಟಕ ಬಂದ್‌ಗೆ ನಮ್ಮ ಬೆಂಬಲ ಇಲ್ಲ ಎಂದು ಚಾಲಕರ ಒಕ್ಕೂಟ ತಿಳಿಸಿದೆ. ಅಲ್ಲದೇ ಇಂಡಿಯನ್ ವೆಹಿಕಲ್ ಡ್ರೈವರ್ಸ್ ಟ್ರೇಡ್ ಯೂನಿಯನ್ ಅಧ್ಯಕ್ಷ ಗಂಡಸಿ ಸದಾನಂದ ಸ್ವಾಮಿ ಮತ್ತು ಸ್ನೇಹಜೀವಿ ಚಾಲಕರ ಟ್ರೇಡ್ ಯೂನಿಯನ್ ಅಧ್ಯಕ್ಷ ಸಂತೋಷ್ ಕುಮಾರ್ ಅವರು ಬಂದ್‌ಗೆ ಬೆಂಬಲ ಇಲ್ಲ ಎಂದರು.
ಇನ್ನೂ ಈ ಕರ್ನಾಟಕ ಬಂದ್ ಚಾಲಕರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುವಂತಿದೆ. ಬೆಂಗಳೂರಿನಲ್ಲಿ 75 ಸಾವಿರಕ್ಕೂ ಅಧಿಕ ಆಟೋಗಳು ಸಂಚರಿಸುತ್ತಿವೆ. 2.5 ಲಕ್ಷಕ್ಕೂ ಅಧಿಕ ಕುಟುಂಬಗಳು ಚಾಲಕ ವೃತ್ತಿಯನ್ನು ಅವಲಂಬಿಸಿದ್ದಾರೆ. ಬಂದ್ ನಿಂದ ಇವರ ಬದಕು ದುಸ್ತರವಾಗಲಿದೆ. ಔಷಧ, ತರಕಾರಿ, ಹಾಲು, ಅಗತ್ಯ ವಸ್ತುಗಳ ಸಾಗಾಣೆ, ಶಾಲಾ ವಾಹನಗಳು ಸೇವೆ ಸ್ಥಗಿತಗೊಳಿಸಿದರೆ ಜೀವನ ನಿರ್ವಹಣೆ ಕಷ್ಟವಾಗುತ್ತದೆ ಎಂದು ತಿಳಿಸಿದ್ದಾರೆ.

ಏನಿರಲ್ಲ?

ಬಂದ್ ವೇಳೆಯಲ್ಲಿ ಹೋಟೆಲ್ ಕ್ಲೋಸ್
ಸಿನಿಮಾ ಥಿಯೇಟರ್ ಬಂದ್
ಸರ್ಕಾರಿ ಕಚೇರಿಗಳು ತೆರೆದಿರೋದು ದೌಟ್
ಓಲಾ, ಉಬರ್, ಆಟೋ, ಲಾರಿ ಸಂಚಾರ ಬಹುತೇಕ ಸ್ಥಗಿತ.
ಮಾಲ್ ಗಳು ಕ್ಲೋಸ್

ಏನಿರುತ್ತೆ.?

ಮೆಡಿಕಲ್ ಶಾಪ್ ಓಪನ್
ಹಾಲಿನ ಬೂತ್ ಗಳು
ಹಣ್ಣು-ತರಕಾರಿ ಅಂಗಡಿ ಓಪನ್
ಅಗತ್ಯ ವಸ್ತುಗಳ ಪೂರೈಕೆ ಸೇವೆ
ರೈಲು, ವಿಮಾನ ಸಂಚಾರದಲ್ಲಿ ವ್ಯತ್ಯಯ ಆಗೋದು ಕಡಿಮೆ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+