ರೈತರ ಪ್ರತಿಭಟನೆ; ಸಿಎಂ ಯಡಿಯೂರಪ್ಪ ಟ್ವೀಟ್

ಬೆಂಗಳೂರು, ಸೆಪ್ಟೆಂಬರ್ 28 : ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ, ದಲಿತ, ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಕರ್ನಾಟಕ ಬಂದ್‌ ನಡೆಯುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

Recommended Video

      ರೈತರ ಪ್ರತಿಭಟನೆ ಕುರಿತು C.M BSY ಹೇಳಿದ್ದೇನು | Oneindia Kannada

      ರೈತ, ದಲಿತ, ಕಾರ್ಮಿಕರ ಸಂಘಟನೆಗಳು ಐಕ್ಯ ಹೋರಾಟ ಸಮಿತಿ ಹೆಸರಿನಲ್ಲಿ ಸೋಮವಾರ ಕರ್ನಾಟಕ ಬಂದ್ ನಡೆಸುತ್ತಿವೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಜೊತೆ ಸಂಘಟನೆಗಳ ಪ್ರಮುಖರು ನಡೆಸಿದ ಮಾತುಕತೆ ಶುಕ್ರವಾರ ವಿಫಲವಾಗಿತ್ತು.

      ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಟ್ವೀಟ್ ಮಾಡಿದ್ದಾರೆ. "ರೈತರಿಗೆ ಸ್ವಾತಂತ್ರ್ಯ ನೀಡುವುದಕ್ಕಾಗಿ, ಅವರು ಬೆಳೆದ ಬೆಳೆಯನ್ನು ಅವರು ಎಪಿಎಂಸಿಯಲ್ಲಾಗಲಿ ಅಥವಾ ಎಲ್ಲಿ ಬೇಕಾದರೂ ಮಾರುವ ಅವಕಾಶ ಅವರಿಗೆ ನೀಡಲಾಗುತ್ತಿದೆ" ಎಂದು ಹೇಳಿದ್ದಾರೆ.

      Karnataka Bandh By Farmers Yediyurappa Tweet

      "ಬಹುತೇಕ ರೈತರು ಇದನ್ನು ಸ್ವಾಗತ ಮಾಡುತ್ತಿದ್ದಾರೆ. ಹಾಗೆಯೇ, ಬಹುದಿನಗಳ ಬೇಡಿಕೆಯಂತೆ ಕಾಡುಗೊಲ್ಲರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ" ಎಂದು ಸೋಮವಾರ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

      ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕರ್ನಾಟಕ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಸಹ ಕರ್ನಾಟಕ ಬಂದ್‌ಗೆ ಬೆಂಬಲ ನೀಡಿವೆ. ರೈತ, ದಲಿತ, ಕಾರ್ಮಿಕ ಸಂಘಟನೆಗಳು ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆಗಳನ್ನು ನಡೆಸುತ್ತಿವೆ.

      ಬೆಂಗಳೂರಿನಲ್ಲಿ ಟೌನ್‌ ಹಾಲ್‌ನಿಂದ ಫ್ರೀಡಂ ಪಾರ್ಕ್‌ ತನಕ ವಿವಿಧ ಸಂಘಟನೆಗಳು ಬೃಹತ್ ಧರಣಿಯನ್ನು ನಡೆಸುತ್ತಿವೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರದಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+