ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಫೆಬ್ರವರಿ 13ರಂದು ಕರ್ನಾಟಕ ಬಂದ್‌ಗೆ ಕರೆ

|
Google Oneindia Kannada News

Recommended Video

Karnataka to be Shut down on Fb 13th ? | Bandh | Karnataka | Oneindia Kannada

ಬೆಂಗಳೂರು, ಫೆಬ್ರವರಿ 05 : ಕರ್ನಾಟಕ ಸಂಘಟನೆಗಳ ಒಕ್ಕೂಟ ಫೆಬ್ರವರಿ 13ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಂದ್ ಕರೆ ನೀಡಲಾಗಿದ್ದು, ಯಾವ ಸಂಘಟನೆ ಬೆಂಬಲ ನೀಡಲಿದೆ? ಕಾದು ನೋಡಬೇಕು.

ಕರ್ನಾಟಕ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಾಗೇಶ್ ಈ ಕುರಿತು ಮಾಹಿತಿ ನೀಡಿದರು. "ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ 2019ರ ನವೆಂಬರ್ 4ರಿಂದ ಮೌರ್ಯ ವೃತ್ತದಲ್ಲಿ ಧರಣಿ ನಡೆಸಲಾಗುತ್ತಿದೆ. 93 ದಿನ ಪೂರೈಸಿರುವ ಧರಣಿಗೆ ಹಲವು ರಾಜಕೀಯ ನಾಯಕರು, ಸಾಹಿತಿಗಳು ಬೆಂಬಲ ನೀಡಿದ್ದಾರೆ" ಎಂದರು.

ಕೋಲಾರದಲ್ಲಿ ಫೆಬ್ರವರಿ 11, 12ರಂದು ಉದ್ಯೋಗ ಮೇಳ ಕೋಲಾರದಲ್ಲಿ ಫೆಬ್ರವರಿ 11, 12ರಂದು ಉದ್ಯೋಗ ಮೇಳ

ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಡಾ. ಸರೋಜಿನಿ ಮಹಿಷಿ ವರದಿ ಜಾರಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಕರ್ನಾಟಕ ಸಂಘಟನೆಗಳ ಒಕ್ಕೂಟ ಕರೆ ನೀಡಿರುವ ಬಂದ್‌ಗೆ ಯಾರು ಬೆಂಬಲ ನೀಡಲಿದ್ದಾರೆ? ಎಂಬುದು ಇನ್ನು ಅಂತಿಮವಾಗಿಲ್ಲ.

ಕೆಪಿಎಸ್‌ಸಿ ನೇಮಕಾತಿ; 1112 ಎಫ್‌ಡಿಎ ಹುದ್ದೆಗಳಿಗೆ ಅರ್ಜಿ ಆಹ್ವಾನಕೆಪಿಎಸ್‌ಸಿ ನೇಮಕಾತಿ; 1112 ಎಫ್‌ಡಿಎ ಹುದ್ದೆಗಳಿಗೆ ಅರ್ಜಿ ಆಹ್ವಾನ

Karnataka Bandh Called On February 13

ಮೌರ್ಯ ವೃತ್ತದಲ್ಲಿ ಧರಣಿ ನಡೆಸುತ್ತಿರುವಾಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ. ಟಿ. ರವಿ ಹಾಗೂ ಕಾರ್ಮಿಕ ಸಚಿವ ಎಸ್. ಸುರೇಶ್ ಕುಮಾರ್ ಭೇಟಿ ನೀಡಿ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು.

23 ವಿಮೆ ಯೋಜನೆಗಳನ್ನು ಬಂದ್ ಮಾಡಲಿರುವ LIC23 ವಿಮೆ ಯೋಜನೆಗಳನ್ನು ಬಂದ್ ಮಾಡಲಿರುವ LIC

ಸರ್ಕಾರ ಇರುವರೆಗೂ ಯಾವುದೇ ಬೇಡಿಕೆ ಈಡೇರಿಸಲು ಪ್ರಯತ್ನವನ್ನು ನಡೆಸಿಲ್ಲ. ಆದ್ದರಿಂದ, ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ ಎಂದು ಕರ್ನಾಟಕ ಸಂಘಟನೆಗಳ ಒಕ್ಕೂಟ ಹೇಳಿದೆ.

English summary
Karnataka Sangatenegala Okkuta called for Karnataka bandh on February 13, 2020 demanding reservation for Kannadigs in jobs.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X