ಸೆ.9ರ ಕರ್ನಾಟಕ ಬಂದ್ ಬಿಸಿ ಎಲ್ಲಿಗೆ ತಟ್ಟಲಿದೆ?
ಬೆಂಗಳೂರು, ಸೆಪ್ಟೆಂಬರ್ 07 : ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕನ್ನಡ ಒಕ್ಕೂಟ ಸೆಪ್ಟೆಂಬರ್ 9ರಂದು ಕರ್ನಾಟಕ ಬಂದ್ಗೆ ಕರೆ ನೀಡಿವೆ. ಬೆಂಗಳೂರು ಮತ್ತು ಮೈಸೂರು ಭಾಗಕ್ಕೆ ಬಂದ್ ಬಿಸಿ ಜೋರಾಗಿ ತಟ್ಟಲಿದೆ ಎಂದು ಗುಪ್ತಚರ ಇಲಾಖೆ ಹೇಳಿದೆ.
ಉತ್ತರ ಕರ್ನಾಟಕ ಭಾಗದಕ್ಕಿಂತ ಬೆಂಗಳೂರು, ಮೈಸೂರು ಭಾಗದಲ್ಲಿ ಬಂದ್ ತೀವ್ರತೆ ಹೆಚ್ಚಾಗಿರಲಿದೆ ಎಂಬುದು ಗುಪ್ತಚರ ಇಲಾಖೆಯ ಮಾಹಿತಿ. ಕನ್ನಡ ಒಕ್ಕೂಟ ಸಂಪೂರ್ಣ ಕರ್ನಾಟಕ ಬಂದ್ಗೆ ಕರೆ ನೀಡಿದ್ದು, ಪ್ರತಿಯೊಬ್ಬರೂ ಬಂದ್ಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದೆ.[ಸೆಪ್ಟೆಂಬರ್ 9ರಂದು ಕರ್ನಾಟಕ ಬಂದ್]

ಮಂಡ್ಯದಲ್ಲಿ ಎರಡು ದಿನಗಳ ಕಾಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರದಲ್ಲಿ ಸೆಪ್ಟೆಂಬರ್ 9ರಂದು ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗುತ್ತದೆಯೇ? ಎಂದು ಕಾದು ನೋಡಬೇಕು. ಸುಪ್ರೀಂಕೋರ್ಟ್ ತೀರ್ಪು ವಿರೋಧಿಸಿ ಮಂಡ್ಯದಲ್ಲಿ ಸರಣಿ ಪ್ರತಿಭಟನೆಗಳು ನಡೆಯತ್ತಿವೆ.[ಬಂದ್, ಬಕ್ರೀದ್, ಗಣೇಶ ಚತುರ್ಥಿ...ಪೊಲೀಸರಿಗೆ ಬಿಡುವಿಲ್ಲ]
ಕನ್ನಡ ಒಕ್ಕೂಟ ಕರೆ ನೀಡಿರುವ ಬಂದ್ಗೆ ಬೆಂಗಳೂರಿನಲ್ಲಿ ಯಾವಾಗಲೂ ಬೆಂಬಲ ಸಿಗುತ್ತದೆ. ಆದ್ದರಿಂದ, ಬೆಂಗಳೂರು ನಗರದಲ್ಲಿ ಶುಕ್ರವಾರ ಅಂಗಡಿ, ಹೋಟೆಲ್, ಪೆಟ್ರೋಲ್ ಬಂಕ್ ಬಾಗಿಲು ಮುಚ್ಚುವ ಸಾಧ್ಯತೆ ಇದೆ.[ಮಂಡ್ಯದಲ್ಲಿ ಕಾವೇರಿ ಹೋರಾಟ : ಚಿತ್ರಗಳು]
ಮಂಡ್ಯ, ಮೈಸೂರು, ರಾಮನಗರ, ಶ್ರೀರಂಗಪಟ್ಟಣ, ಮದ್ದೂರು ಮುಂತಾದ ಕಡೆ ಬಂದ್ ಬಿಸಿ ಜೋರಾಗಿ ತಟ್ಟಲಿದೆ. ಶಾಲಾ-ಕಾಲೇಜು ಮತ್ತು ವ್ಯಾಪಾರಿ ಮಳಿಗೆಗಳು ಒಂದು ದಿನದ ಮಟ್ಟಿಗೆ ಬಾಗಿಲು ಮುಚ್ಚಲಿವೆ. ಬೆಂಗಳೂರಿನಲ್ಲಿ ಬಂದ್ ನಡೆದರೆ ಅದು ಹೆಚ್ಚು ಪರಿಣಾಮಕಾರಿಯಾಗಿರುತ್ತದೆ. ಆದ್ದರಿಂದ, ಉದ್ಯಾನ ನಗರಿಯಲ್ಲಿ ಬಂದ್ ಆಚರಣೆ ಮಾಡಲಾಗುತ್ತದೆ.
ಸೆ.9ರಂದು ಬೆಂಗಳೂರಿನಿಂದ ಯಾವುದೇ ವಾಹನಗಳು ತಮಿಳುನಾಡಿಗೆ ತೆರಳುವುದಿಲ್ಲ ಮತ್ತು ಅಲ್ಲಿಂದ ಯಾವುದೇ ವಾಹನಗಳು ಬೆಂಗಳೂರಿಗೆ ಆಗಮಿಸುವುದಿಲ್ಲ. ಕೆಎಸ್ಆರ್ಟಿಸಿಯೂ ತಮಿಳುನಾಡಿಗೆ ಬಸ್ ಸೇವೆಯನ್ನು ಶುಕ್ರವಾರ ಸ್ಥಗಿತಗೊಳಿಸುವ ಸಾಧ್ಯತೆ ಇದೆ.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ?












Click it and Unblock the Notifications