Get Updates
Get notified of breaking news, exclusive insights, and must-see stories!

ಉತ್ತರ ಕರ್ನಾಟಕದಲ್ಲಿ ಬಂದ್ ಗೆ ಸಂಪೂರ್ಣ ಬೆಂಬಲ

ಹಾವೇರಿ/ಯಾದಗಿರಿ, ಗದಗ: ಜನವರಿ 25 : ಕಳಸಾ ಬಂಡೂರಿ ನಾಲಾ ಯೋಜನೆ, ಮಹದಾಯಿ ನದಿ ನೀರಿಗಾಗಿ ಆಗ್ರಹಿಸಿ ನಡೆಸುತ್ತಿರುವ ಕರ್ನಾಟಕ ಬಂದ್ ಗೆ ಉತ್ತರ ಕರ್ನಾಟಕದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.

ಚಿತ್ರಗಳು : ಮಹದಾಯಿಗಾಗಿ ಕರ್ನಾಟಕ ಬಂದ್

Recommended Video

      ಮಹದಾಯಿಗಾಗಿ ಕರ್ನಾಟಕ ಬಂದ್ | ಹುಬ್ಬಳ್ಳಿಯಲ್ಲಿ ಬಂದ್ ಬಿಸಿ ಜೋರು | Oneindia Kannada

      ಪ್ರಮುಖವಾಗಿ ಉತ್ತರ ಕರ್ನಾಟಕದ ನರಗುಂಸ, ಹಾವೇರಿಮ ಯಾದಗಿರಿಯಲ್ಲಿ ಬಂದ್ ಗೆ ಬೆಂಬಲ ವ್ಯಕ್ತವಾಗಿದ್ದು, ಯಾವುದೇ ರೀತಿಯ ವಾಹನಗಳು ರಸ್ತೆಗಿಳಿಯದೇ ಕರ್ನಾಟಕ ಬಂದ್ ಗೆ ಬೆಂಬಲ ವ್ಯಕ್ತಪಡಿಸಿವೆ. ಯಾದಗಿರಿ, ಹೊಸಪೇಟೆಯಲ್ಲಿ ಪ್ರತಿಭಟನಾಕಾರರು ಉದ್ಯಾನ ಎಕ್ಸ್ಪ್ರೆಸ್ ರೈಲು ತಡೆದು ಪ್ರತಿಭಟನೆ ನಡೆಸಿದ್ದಾರೆ.

      ಅಂತೆಯೇ ಕಳಸಾ-ಬಂಡೂರಿ ಹೋರಾಟದ ಕೇಂದ್ರ ಸ್ಥಾನವಾಗಿರುವ ಗದಗದ ನರಗುಂದದಲ್ಲಿ ಪ್ರತಿಭಟನೆ ಬಿಸಿ ಹೆಚ್ಚಾಗಿದ್ದು, ಮುಂಜಾನೆಯೇ ಪ್ರತಿಭಟನಾಆರರು ವಿಜಯಪುರ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಬೆಂಜಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

      Karnataka bandh: Good response from every corner of the state

      ದಾವಣಗೆರೆಯಲ್ಲೂ ಬೆಳಗ್ಗೆ ಬೀದಿಗಿಳಿದಿರುವ ಸಂಘಟನೆಗಳು ಮಹದಾಯಿ ವಿವಾದ ಇತ್ಯರ್ಥಪಡಿಸುವಂತೆ ಒತ್ತಾಯಿಸಿದ್ದಾರೆ. ರೈತ ಸಂಘಟನೆ ಹಾಗೂ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಜಯದೇವ ಸರ್ಕಲ್ ಬಳಿ ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

      ನರಗುಂದ ಪಟ್ಟಣದಲ್ಲಿ ಗೋವಾ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ, ಗೋವಾ ಪಾಟಿಂಗ್ ಕಾರ್ ನೋಡಿ ಆಕ್ರೋಶಗೊಂಡ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ. ಅಂಗಡಿ ಮುಗ್ಗಟ್ಟುಗಳು, ಪೆಟ್ರೋಲ್ ಬಂಕ್, ತರಕಾರಿಗಳು ಹಾಗೂ ಮಾರ್ಕೆಟ್ ಬಂದ್ ಮಾಡಲಾಗಿದೆ. ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+