ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶುಕ್ರವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 08 : ರಾಜ್ಯದ ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಸೆಪ್ಟೆಂಬರ್ 9ರ ಶುಕ್ರವಾರ ರಜೆ ಘೋಷಣೆ ಮಾಡಲಾಗಿದೆ. 'ಜನರು ಶಾಂತಿಯುತವಾಗಿ ಪ್ರತಿಭಟನೆ ನಡೆಸಬೇಕು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

Must Read : ಬೆರಳ ತುದಿಯಲ್ಲಿ ರಿಲಯನ್ಸ್ ಕಾರ್ ವಿಮೆ ನವೀಕರಣ

ವಿಧಾನಸೌಧದಲ್ಲಿ ಗುರುವಾರ ಸಂಜೆ ಮಾತನಾಡಿದ ಸಿದ್ದರಾಮಯ್ಯ ಅವರು, 'ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ ಕಚೇರಿಗಳಲ್ಲೂ ಶುಕ್ರವಾರ ಅಟೆಂಡೆನ್ಸ್‌ ಇರುವುದಿಲ್ಲ' ಎಂದು ಹೇಳಿದರು.[ಕಾವೇರಿಗಾಗಿ ಕಾವೇರಿದ ಕರ್ನಾಟಕ, ಬಂದ್ ದಿನ ಏನೆಲ್ಲ ಬಂದ್?]

Karnataka Bandh : Govt declares holidays for schools and colleges

'ಕರ್ನಾಟಕ ಬಂದ್ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಹೊರರಾಜ್ಯಗಳಿಂದಲೂ ಪೊಲೀಸ್ ಪಡೆಗಳನ್ನು ಕರೆಸಿಕೊಳ್ಳಲಾಗುತ್ತಿದೆ. ಬಂದ್ ಹೆಸರಿನಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿ ಮಾಡಬಾರದು' ಎಂದು ಸಿದ್ದರಾಮಯ್ಯ ಮನವಿ ಮಾಡಿದರು.[ಟೆಕ್ಕಿಗಳ ವೀಕೆಂಡ್ ರಜಾ ಹಾಳು ಮಾಡಿದ ಕರ್ನಾಟಕ ಬಂದ್!]

* ಖಾಸಗಿ ಶಾಳೆಗಳ ಒಕ್ಕೂಟ ಶುಕ್ರವಾರ ರಜೆ ಘೋಷಣೆ ಮಾಡಿದೆ
* ಸರ್ಕಾರಿ ಬಸ್ಸುಗಳ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ
* ಹೋಟೆಲ್, ಪೆಟ್ರೋಲ್ ಬಂಕ್‌ಗಳು ಬಂದ್ ಆಗಲಿವೆ
* ಟ್ಯಾಕ್ಸಿ, ಆಟೋಗಳ ಸಂಚಾರವೂ ಸ್ಥಗಿತಗೊಳ್ಳಲಿದೆ

English summary
Karnataka government declared holiday for government schools and colleges on September 9, 2016. Kannada Okkoota has called for a Karnataka bandh on Friday to protest against Supreme Court order to release 15,000 cusecs of Cauvery water to Tamil Nadu for ten days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X